ಸುಳ್ಯ ಕಾಳ್ಗಿಚ್ಚು ತೀವ್ರ: ನಿಯಂತ್ರಣಕ್ಕೆ ಹರಸಾಹಸ, ಆತಂಕ


Team Udayavani, Mar 14, 2023, 7:30 AM IST

ಸುಳ್ಯ ಕಾಳ್ಗಿಚ್ಚು ತೀವ್ರ: ನಿಯಂತ್ರಣಕ್ಕೆ ಹರಸಾಹಸ, ಆತಂಕ

ಸುಳ್ಯ : ತಾಲೂಕಿನ ಮಡಪ್ಪಾಡಿ ಭಾಗದಲ್ಲಿ ಉಂಟಾಗಿರುವ ಕಾಳ್ಗಿಚ್ಚಿನ ನಿಯಂತ್ರಣ ತ್ರಾಸದಾಯಕ ವಾಗಿದ್ದು, ಅರಣ್ಯ ಸಿಬಂದಿ ಹಾಗೂ ಸ್ಥಳೀಯರಿಗೆ ಬೆಂಕಿ ನಂದಿಸಲು ತೀವ್ರ ಹರಸಾಹಸ ಪಡುತ್ತಿದ್ದಾರೆ.

ಮಡಪ್ಪಾಡಿ ಸಮೀಪದ ಶೀರಡ್ಕ, ಹಾಡಿಕಲ್ಲು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಳ್ಗಿಚ್ಚು ಉಂಟಾಗಿತ್ತು. ಅರಣ್ಯ ಇಲಾಖೆಯ ತಂಡ ಸ್ಥಳದಲ್ಲಿ ಬೀಡುಬಿಟ್ಟು ಕಾಳ್ಗಿಚ್ಚು ನಂದಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ರವಿವಾರ ಶೀರಡ್ಕ ಭಾಗದಲ್ಲಿ ಕಾಳ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆ ಮತ್ತು ಹೊಗೆ ಏಳುವುದು ಮಡಪ್ಪಾಡಿಗೆ ಕಾಣಿಸಿತ್ತು. ಸೋಮವಾರವೂ ಬೆಂಕಿಯ ತೀವ್ರತೆ ಮುಂದುವರಿದಿದೆ.

ಹಾಡಿಕಲ್ಲು ಭಾಗದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದು, ಕಾರ್ಯಾಚರಣೆ ಯನ್ನು ಸಮರ್ಪಕವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಅಗ್ನಿಶಾಮಕ ದಳದ ವಾಹನ ತೆರಳಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಿಬಂದಿ ಹಾಗೂ ಸ್ಥಳೀಯರು ಜತೆಗೂಡಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

ನಿಯಂತ್ರಣ ಕಷ್ಟಸಾಧ್ಯವಾಗುತ್ತಿದ್ದು, ಬೆಂಕಿ ವ್ಯಾಪಕವಾಗಿ ಹಬ್ಬುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಡಪ್ಪಾಡಿ ಭಾಗದಲ್ಲಿ ಬೆಂಕಿ ನಂದಿಸುವುದರ ಜತೆಗೆ ಬೆಂಕಿ ಮತ್ತಷ್ಟು ವಿಸ್ತರಿಸದಂತೆ ಬ್ಲೋವರ್‌ ಮುಖಾಂತರ ತರಗೆಲೆಗಳನ್ನು ಬದಿಗೆ ಸೇರಿಸಲಾಯಿತು ಎಂದು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಬಿದಿರು, ಕೆಲವು ಮರಗಳಿಗೆ ಬೆಂಕಿ ಹಬ್ಬಿದೆ. ಒಣ ಹುಲ್ಲು, ತರಗೆಲೆ ಗಳಿಂದಾಗಿ ಬೆಂಕಿ ತೀವ್ರವಾಗಿ ಹರಡು ತ್ತಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ತೀವ್ರವಾಗಿದೆ. ಕೆಲವರ ರಬ್ಬರ್‌ ತೋಟದ ಸಮೀಪದ ವರೆಗೂ ಬೆಂಕಿ ಹಬ್ಬಿದ್ದು, ಸ್ಥಳಿಯರಲ್ಲಿ ಆತಂಕ ಎದುರಾಗಿದೆ.

ಮರ್ಕಂಜದ ಮೈರಾಜೆ ಕಾಡಿಗೆ ಎರಡು-ಮೂರು ದಿನಗಳ ಹಿಂದೆ ಬೆಂಕಿ ಬಿದ್ದಿದ್ದು, ಅದು ನಿಯಂತ್ರಣಕ್ಕೆ ಬರುವ ಮೊದಲೇ ಸಮೀಪದ ಅಜ್ಜಿಕಲ್ಲು -ಕುಧ್ಕುಳಿ ಭಾಗದ ಗುಡ್ಡದಲ್ಲಿ ಬೆಂಕಿ ಅನಾಹುತ ಉಂಟಾಗಿದೆ. ರವಿವಾರ ರಾತ್ರಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಅರಣ್ಯ ಪ್ರದೇಶದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿರುವುದರಿಂದ ಪೂರ್ಣ ವಾಗಿ ಶಮನಗೊಳ್ಳುವ ವರೆಗೆ ಎಷ್ಟು ವಿಸ್ತೀರ್ಣದಲ್ಲಿ ಅರಣ್ಯ ಹಾನಿಗೀಡಾಗಿದೆ ಎಂಬ ಮಾಹಿತಿ ಸಂಗ್ರಹಿಸುವುದು ಕಷ್ಟಸಾಧ್ಯ ಎನ್ನುತ್ತಾರೆ ಅಧಿಕಾರಿಗಳು.

ಕಡಬದ ನಿಡ್ಡೋ, ಹೇರದಲ್ಲೂ ಬೆಂಕಿ
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಹೇರ, ನಿಡ್ಡೋ ಅರಣ್ಯ ಪ್ರದೇಶದಲ್ಲೂ ಬೆಂಕಿ ಅನಾಹುತ ಉಂಟಾಗಿದೆ.

ರವಿವಾರ ಬೆಂಕಿ ಅನಾಹುತದ ಬಗ್ಗೆ ತಿಳಿದುಬಂದಿದೆ ಎನ್ನಲಾಗಿದೆ. ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ನಿಡ್ಡೋ, ಕಾನಾವು ಭಾಗದಲ್ಲಿ ಬೆಂಕಿ ತರಗೆಲೆ, ಪೊದೆಗಳಲ್ಲಿ ಹೊತ್ತಿ ಉರಿಯುತ್ತಿದೆ. ಹೇರ ಪ್ರದೇಶದಲ್ಲೂ ವ್ಯಾಪಕವಾಗಿದೆ. ನಿಡ್ಡೋದಲ್ಲಿ ಪುತ್ತೂರು ಅಗ್ನಿಶಾಮಕ ದಳದ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೇರ ಭಾಗದಲ್ಲಿ ಅರಣ್ಯ ಸಿಬಂದಿ, ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.