
ಸುಳ್ಯ: ಮಣ್ಣಿನಡಿ ಸಿಲುಕಿ ಕಾರ್ಮಿಕರ ಸಾವು ಪ್ರಕರಣ, ತಲಾ 50 ಸಾವಿರ ರೂ. ಪರಿಹಾರ ವಿತರಣೆ
Team Udayavani, Mar 27, 2023, 7:25 AM IST

ಸುಳ್ಯ : ಇಲ್ಲಿನ ಗುರುಂಪು ಎಂಬಲ್ಲಿ ನಿರ್ಮಾಣ ಕಾಮಗಾರಿ ವೇಳೆ ಬರೆ ಕುಸಿದು ಮಣ್ಣಿನಡಿ ಸಿಲುಕಿ ಗದಗದ ಮೂವರು ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂ. ತತ್ಕ್ಷಣದ ಪರಿಹಾರ ವಿತರಿಸಲಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರು ಹಾಗೂ ಸ್ಥಳೀಯ ಕಾರ್ಮಿಕರ ಮುಖಂಡರ ನೇತೃತ್ವದಲ್ಲಿ ಸುಳ್ಯ ಠಾಣೆ ಬಳಿ ಜಮಾಯಿಸಿ ಪರಿಹಾರಕ್ಕೆ ಆಗ್ರಹಿಸಿದ್ದರು. ಈ ವೇಳೆ ಮನೆಯವರು, ಎಂಜಿನಿಯರ್ ಮತ್ತಿತರರ ಜತೆ ಠಾಣೆಯಲ್ಲಿ ಮಾತುಕತೆ ನಡೆಸಲಾಯಿತು. ಅದರಂತೆ ಮೃತಪಟ್ಟವರಿಗೆ ಬರೆ ಕುಸಿತವಾದ ಮನೆಯ ಮಾಲಕರು ಮತ್ತು ಎಂಜಿನಿಯರ್ ಸೇರಿ ತಲಾ 2.50 ಲಕ್ಷ ರೂ ಪರಿಹಾರ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಅದರಂತೆ ಮೊದಲಿಗೆ ಮೂವರ ಮನೆಯವರಿಗೆ ತಲಾ 50 ಸಾವಿರ ರೂ. ಪರಿಹಾರ ವಿತರಿಸಲಾಗಿದೆ. ಉಳಿದಂತೆ ತಲಾ 2 ಲಕ್ಷ ರೂ.ಗಳನ್ನು ಪ್ರಕರಣ ನ್ಯಾಯಾಲಯದಲ್ಲಿ ಮುಗಿದ ಬಳಿಕ ನೀಡಲು ನಿರ್ಧರಿಸಲಾಗಿದೆ. ಮೃತ ಕಾರ್ಮಿಕರ ಮನೆಯವರು, ಕಾರ್ಮಿಕ ಮುಖಂಡರು, ನ.ಪಂ. ಅಧ್ಯಕ್ಷರು, ಪೊಲೀಸರ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮೃತರಾದವರಿಗೆ ಸರಕಾರದ ವತಿಯಿಂದಲೂ ಪರಿಹಾರ ನೀಡಬೇಕು ಎಂದು ಆಗ್ರಹ ಹೆಚ್ಚುತ್ತಿದೆ.
ಮೃತದೇಹ ರವಾನೆ
ಮೃತಪಟ್ಟ ಮೂವರು ಕಾರ್ಮಿಕರ ಮೃತದೇಹಗಳ ಶವಪರೀಕ್ಷೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆಸಿ ಶನಿವಾರ ಮೃತರ ಊರಾದ ಗದಗಕ್ಕೆ ಆಂಬ್ಯುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿವಿಧಾನಗಳನ್ನು ನಡೆಸಲಾಯಿತು.
ಅನಾಥರಾದ ಮಕ್ಕಳು
ಘಟನೆಯಲ್ಲಿ ಸೋಮಶೇಖರ ರೆಡ್ಡಿ ಹಾಗೂ ಶಾಂತಾ ದಂಪತಿ ಮೃತಪಟ್ಟಿದ್ದು, ಅವರ ಅವರ ಇಬ್ಬರು ಗಂಡುಮಕ್ಕಳು ಅನಾಥರಾಗಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂಬ ಬೇಡಿಕೆ ಕೇಳಿಬಂದಿದೆ. ಕಾರ್ಮಿಕ ಇಲಾಖೆ ಮೂಲಕವೂ ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆಯೂ ಕಾರ್ಮಿಕರ ಮುಖಂಡರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ