ಮೋದಿ ನವ ಭಾರತ ನಿರ್ಮಾಣದ ರೂವಾರಿ: ಮಾಳವಿಕಾ ಅವಿನಾಶ್‌


Team Udayavani, Mar 13, 2019, 6:34 AM IST

14-march-6.jpg

ಸುಳ್ಯ : ಭ್ರಷ್ಟಾಚಾರ, ಸುರಕ್ಷತೆ ಭೀತಿ ಮೊದಲಾದ ಗಂಭೀರ ಸಮಸ್ಯೆಗಳಿಂದ ನಲುಗಿದ್ದ ಭಾರತವನ್ನು ಕಳೆದ ಐದು ವರ್ಷಗಳಲ್ಲಿ ನವ ಭಾರತವನ್ನಾಗಿ ರೂಪಿಸಿ ವಿಶ್ವ ಗುರುವನ್ನಾಗಿಸುವ ದಾರಿಯತ್ತ ಮುನ್ನಡೆಸಿದ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗುವುದು ದೇಶದ ಅನಿವಾರ್ಯತೆ ಆಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಮಾಳವಿಕಾ ಅವಿನಾಶ್‌ ಹೇಳಿದ್ದಾರೆ.

ಸುಳ್ಯ ಮಂಡಲ ಬಿಜೆಪಿ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ಪ್ರಬುದ್ಧರ ಸಭೆಯಲ್ಲಿ ಅವರು ಮಾತನಾಡಿದರು. 2013ರ ಹಿಂದಿನ ಭಾರತ ಮತ್ತು 2013ರ ಅನಂತರದ ಭಾರತವನ್ನು ಅವಲೋಕಿಸಿದರೆ ಮೋದಿ ಅವರ ಅನಿವಾರ್ಯತೆ ಅರಿವಾಗಬಹುದು. ಕತ್ತಲಲ್ಲಿದ್ದ ಭಾರತ ಬೆಳಕು ಕಾಣುವ ಭರವಸೆ ಸಿಕ್ಕಿದ್ದು ಮೋದಿ ಅವರು ಪ್ರಧಾನಿ ಆದ ಅನಂತರವೇ. 2013ರ ಹಿಂದೆ ಲಕ್ಷ ಕೋಟಿಗಳ ಹಗರಣ, ಭೂಮಿಯಿಂದ ಗಗನದ ವರೆಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು. ಮೋದಿ ಆಡಳಿತಕ್ಕೆ ಬಂದ ಬಳಿಕ ಹೊಸ ಮನ್ವಂತರವೇ ಆರಂಭಗೊಂಡಿದೆ. ಜಗತ್ತಿನ ನಾನಾ ರಾಷ್ಟ್ರಗಳು ಭಾರತದ ಸಾಮರ್ಥ್ಯ ಅರಿತುಕೊಂಡು ಉತ್ತಮ ಬಾಂಧವ್ಯ ಇರಿಸಿಕೊಂಡಿವೆ ಎಂದರು.

18 ತಾಸು ದುಡಿಮೆ
ಮೋದಿ ಅವರು ದಿನದ 18 ತಾಸು ದೇಶಕ್ಕಾಗಿ ದುಡಿಯುತ್ತಿದ್ದಾರೆ. ದೇಶದ ಜನರಿಗೆ ಕನಸು ಕಾಣುವ ಧೈರ್ಯವನ್ನು ತುಂಬಿದ್ದಾರೆ. ತಲೆ ತಗ್ಗಿಸುವ ಸ್ಥಿತಿಯಲ್ಲಿದ್ದ ಸಮಾಜವನ್ನು ತಲೆ ಎತ್ತಿ ನಡೆಯುವಂತೆ ಮಾಡಿದ್ದಾರೆ. ಯೋಗ ದಿನವನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ದು ಇಲ್ಲಿನ ಸಂಸ್ಕೃತಿಯನ್ನು ಪಸರಿಸಿದರು.

ಶೌಚಾಲಯ ನಿರ್ಮಾಣ, ಆಯುಷ್ಮಾನ್‌ ಯೋಜನೆ, ಜನಧನ್‌ ಯೋಜನೆ ಜಾರಿಗೆ ತಂದು ದೇಶದ ಜನರ ಹಿತ ಬಯಸಿದರು ಎಂದು ಮಾಳವಿಕಾ ಅವಿನಾಶ್‌ ಉಲ್ಲೇಖೀಸಿದರು.

ಕಾಂಗ್ರೆಸ್‌ ಅಡ್ಡಿ
ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್‌ ಪದ್ಧತಿಯಿಂದ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾನೂನು ರೂಪಿಸಿತ್ತು. ವಿದೇಶದಲ್ಲಿ ಕುಳಿತು ದೂರವಾಣಿ, ಎಸ್ಸೆಮ್ಮಸ್‌ ಇತ್ಯಾದಿಗಳ ಮೂಲಕ ತಲಾಖ್‌ ಹೇಳಿ ಹೆಣ್ಣು ಮಕ್ಕಳನ್ನು ಅರ್ಧದಲ್ಲೇ ಕೈ ಬಿಡುವ ಪ್ರಕರಣಗಳಿಗೆ ಮುಕ್ತಿ ದೊರೆಯುವ ಅಗತ್ಯವಿತ್ತು. ಈ ಕಾನೂನು ಜಾರಿಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಅಡ್ಡಿ ಉಂಟು ಮಾಡಿದೆ. ಇದರಿಂದ ಕಾಂಗ್ರೆಸ್‌ ಹೆಣ್ಣು ಮಕ್ಕಳ ವಿರೋಧಿ ಪಕ್ಷ ಅನ್ನುವ ಭಾವನೆ ಉಂಟಾಗಿದೆ ಎಂದು ಮಾಳವಿಕಾ ಅವಿನಾಶ್‌ ಹೇಳಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಪೈ, ಶಾಸಕ ಎಸ್‌. ಅಂಗಾರ ಮಾತನಾಡಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್‌ ವಳಲಂಬೆ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ಸುಬೋಧ್‌ ಶೆಟ್ಟಿ ಮೇನಾಲ ವಂದಿಸಿ ದರು. ವಿನಯಕುಮಾರ್‌ ಕಂದಡ್ಕ ಕಾರ್ಯಕ್ರಮ ನಿರೂಪಿಸಿದರು.

ದೇವರೇ ಕಾಪಾಡಬೇಕು…!
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ 44 ಯೋಧರು ಉಗ್ರರ ದಾಳಿಗೆ ಹತರಾದರು. ಈ ವೇಳೆ ಕೆಲವು ಬುದ್ಧಿಜೀವಿಗಳು ಹುತಾತ್ಮ ಯೋಧರ ಶವದಲ್ಲಿ ಜಾತಿ ಲೆಕ್ಕ ಹಾಕಿದರು. ಭಾರತ ಉಗ್ರ ತಾಣಗಳ ಮೇಲೆ ನಡೆಸಿದ ವಾಯುಸೇನಾ ದಾಳಿ ಬಗ್ಗೆ ಅನುಮಾನಪಟ್ಟು, ದಾಳಿ ಮಾಡಿದ್ದು ಉಗ್ರ ನೆಲೆಗೂ ಅಥವಾ ಮರ ಗಿಡಗಳ ಮೇಲೋ ಎಂದು ಕುಹಕವಾಡಿದರು. ಇಂತಹ ಮನಃಸ್ಥಿತಿಯ ಬುದ್ಧಿಜೀವಿಗಳನ್ನು ಆ ದೇವರೇ ಕಾಪಾಡಬೇಕು ಎಂದು ಮಾಳವಿಕಾ ಅವಿನಾಶ್‌ ನುಡಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.