ಸುಳ್ಯ: ಆನ್‌ಲೈನ್‌ ಆತಂಕ ನಿವಾರಿಸಿದ ಮನೆಪಾಠ

ಜೂನ್‌ನಲ್ಲೇ ಪರ್ಯಾಯ ಕಲಿಕೆ ಆರಂಭ; ಸಮಸ್ಯೆ ಇದ್ದೆಡೆ ಮಕ್ಕಳ ಮನೆಗೇ ಶಿಕ್ಷಕರು

Team Udayavani, Aug 3, 2020, 9:13 AM IST

ಸುಳ್ಯ: ಆನ್‌ಲೈನ್‌ ಆತಂಕ ನಿವಾರಿಸಿದ ಮನೆಪಾಠ

ಸುಳ್ಯ: ಕೋವಿಡ್ ಹಿನ್ನೆಲೆಯಲ್ಲಿ ಈ ಸಾಲಿನ ಶೈಕ್ಷಣಿಕ ಚಟುವಟಿಕೆ ಪ್ರಾರಂಭಕ್ಕೆ ತೊಡಕಾದ ಕಾರಣ ಸರಕಾರವು ಪರ್ಯಾಯವಾಗಿ ಆನ್‌ಲೈನ್‌ ಶಿಕ್ಷಣದ ಚಿಂತನೆಯನ್ನು ಜುಲೈಯಲ್ಲಿ ಮಾಡಿತು. ಆದರೆ ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಜೂನ್‌ನಲ್ಲಿಯೇ ಮನೆ ಪಾಠ, ವಾಟ್ಸ್‌ಆ್ಯಪ್‌ ತರಗತಿ ಪ್ರಾರಂಭಿಸಿ ಮಾದರಿ ಹೆಜ್ಜೆ ಇರಿಸಲಾಗಿತ್ತು!

ಇಲ್ಲಿನ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಬಿಆರ್‌ಸಿಯ ಬಿಆರ್‌ಪಿಗಳು ಮತ್ತು ಶಿಕ್ಷಕರ ತಂಡ ಈ ಪ್ರಯತ್ನಕ್ಕೆ ಚಾಲನೆ ನೀಡಿತ್ತು. ವಾಟ್ಸ್‌ಆ್ಯಪ್‌, ನೆಟ್‌ವರ್ಕ್‌ ಇರುವ ಕಡೆ ಖಾಸಗಿ ಶಾಲೆಗಳು ಹೆತ್ತವರ ಗುಂಪು ಮಾಡಿ ಪ್ರತೀದಿನ ಟಾಸ್ಕ್ ನೀಡಲಾಗುತ್ತಿದೆ. ಆದರೆ ಸರಕಾರಿ ಶಾಲೆಯ, ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳ ಕಲಿಕೆಯ ಬಗ್ಗೆ ಹೆತ್ತವರಿಗೆ ಆತಂಕ ಇತ್ತು. ಸುಳ್ಯದಲ್ಲಿ ಶಿಕ್ಷಣ ಇಲಾಖೆ ಇದನ್ನು ನಿವಾರಿಸಿದೆ.

ಮಕ್ಕಳ ಮನೆಗೆ ಮಾಸ್ಟ್ರೆ!
ಸರಕಾರಿ ಶಾಲಾ ಶಿಕ್ಷಕರ ತಂಡವು ಮಕ್ಕಳಿಗೆ ಹೇಗೆ ಪಾಠ ಮಾಡಬಹುದು ಎಂಬ ಯೋಜನೆ ರೂಪಿಸಿತು. ಮೇ ಅಂತ್ಯದ ವೇಳೆಗೆ ಸರಕಾರಿ ಶಾಲಾ ವಿದ್ಯಾರ್ಥಿಗಳ ಹೆತ್ತವರ ಜತೆ ಮಾತುಕತೆ ನಡೆಸಲಾಯಿತು. ವಾಟ್ಸ್‌ಆ್ಯಪ್‌ ಇರುವ ಹೆತ್ತವರ ಗುಂಪು ರಚಿಸಿ, ಮಕ್ಕಳಿಗೆ ಟಾಸ್ಕ್ ಕೊಟ್ಟು ಬರೆಸಲು ಹೇಳಿದರು. ಅನಂತರ ನೆಟ್‌ವರ್ಕ್‌ ಮತ್ತು ವ್ಯಾಟ್ಸ್‌ಆ್ಯಪ್‌ ಇಲ್ಲದವರ ಮನೆಗೆ ತೆರಳಿ ಪಾಠಕ್ಕೆ ಸಿದ್ಧರಾಗುವಂತೆ ಮಕ್ಕಳಿಗೆ ಸೂಚಿಸಲಾಯಿತು. ಜೂನ್‌ ಮೊದಲ ವಾರದಿಂದಲೇ ಶಿಕ್ಷಕರು ಮನೆ ಮನೆಗೆ ತೆರಳಿ ಪಾಠ ಮಾಡಿದರು, ಬರೆಯಿಸಿದರು, ಓದಿಸಿದರು. ಪರಿಸರ ಅಧ್ಯಯನ, ಇವಿಎಸ್‌, ಇಂಗ್ಲಿಷ್‌ ಮೊದಲಾದವುಗಳ ಬಗ್ಗೆ ವೀಡಿಯೋ ಮಾಡಿ ನೀಡಿದರು. ಇದರಿಂದ ಸಿಂಕ್ರೋನಸ್‌ (ನೇರ) ಆನ್‌ಲೈನ್‌ ತರಗತಿಗೆ ನೆಟ್‌ವರ್ಕ್‌, ವಿದ್ಯುತ್‌ ಅಲಭ್ಯತೆಯಿಂದ ಉಂಟಾಗಬಹುದಾದ ಸಮಸ್ಯೆಯನ್ನು ಯಶಸ್ವಿಯಾಗಿ ನಿವಾರಿಸಲಾಗಿದೆ.

ನೆಟ್‌ವರ್ಕ್‌, ವಿದ್ಯುತ್‌ ಸಮಸ್ಯೆ ಇದ್ದಲ್ಲಿ ಮನೆಪಾಠ
ಹಾಲೆಮಜಲು, ದೇವರಕಾನ, ಕೋಲ್ಚಾರು, ಅಚಪ್ಪಾಡಿ, ಮೆಟ್ಟಿನಡ್ಕ, ಮಡಪ್ಪಾಡಿ, ಬೆಳ್ಳಾರೆ, ವಳಲಂಬೆ, ಗುತ್ತಿಗಾರು, ಹಾಡಿಕಲ್ಲು, ವಾಲ್ತಾಜೆ, ಕರಂಗಲ್ಲು, ಐನೆಕಿದು, ಪೆರುವಾಜೆ, ಪಡಿ³ನಂಗಡಿ, ಪಾಂಡಿಗದ್ದೆ, ಕೇನ್ಯ, ಪೈಕ, ತಂಟೆಪ್ಪಾಡಿ ಇತ್ಯಾದಿ ತಾ|ನ ಗ್ರಾಮೀಣ ಭಾಗಗಳು. ಇಲ್ಲೆಲ್ಲ ನೆಟ್‌ವರ್ಕ್‌ ಸಮಸ್ಯೆ ಇದ್ದು, ಇಲ್ಲಿನ ಶಾಲೆಗಳ ಶಿಕ್ಷಕರು ನಿರಂತರ ಪ್ರಯತ್ನ ಮಾಡಿದ್ದಾರೆ. ಪುತ್ತೂರು ತಾಲೂಕಿನ ಕೆಲವು ಸರಕಾರಿ ಶಾಲೆಗಳ ಶಿಕ್ಷಕರೂ ಗ್ರಾಮೀಣ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಪಾಠ ಮಾಡಿದ್ದಾರೆ.

ಸುಳ್ಯದ ಸರಕಾರಿ ಶಾಲೆಗಳ ಎಲ್ಲ ಮಕ್ಕಳಿಗೂ ಕಲಿಕೆಯಲ್ಲಿ ಯಾವುದೇ ಕೊರತೆ ಆಗಬಾರದು ಎಂದು ಜೂನ್‌ನಿಂದಲೇ ಶಿಕ್ಷಕರೆಲ್ಲ ಒಂದು ತಂಡವಾಗಿ ಕೆಲಸ ಮಾಡಿದ್ದಾರೆ. ಇದನ್ನು ಮುಂದುವರಿಸಲಾಗುತ್ತದೆ. ದ.ಕ. ಜಿಲ್ಲೆಯಲ್ಲಿ ಮೊದಲ ಪ್ರಯತ್ನ ಇದು, ಹೀಗಾಗಿ ಉತ್ತಮ ಪ್ರಗತಿ ಸಾಧ್ಯವಾಗಿದೆ.
– ಮಹದೇವ ಎಸ್‌.ಪಿ., ಕ್ಷೇತ್ರ ಶಿಕ್ಷಣಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.