ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡಲ್ಲ: ಸಚಿವ ಸುನಿಲ್ ಕುಮಾರ್
Team Udayavani, Sep 27, 2022, 11:48 AM IST
ಬಂಟ್ವಾಳ: ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಬಿಸಿರೋಡಿನಲ್ಲಿ ಮಾಧ್ಯಮ ದವರ ಜೊತೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಮಾಜ ಘಾತುಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದಿರುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತಿದೆ. ಕಾಂಗ್ರೇಸ್ ಅಧಿಕಾರವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಹಾಗೂ ಇತ್ತೀಚೆಗೆ ಶಿವಮೊಗ್ಗ ಹಾಗೂ ಪುತ್ತೂರುನಲ್ಲಿ ನಡೆದಿದ್ದ ಕೊಲೆ ಕೃತ್ಯದಲ್ಲಿ ಪಿಎಫ್ ಐ ಸಂಘಟನೆಯ ಕೈವಾಡ ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಹೀಗಾಗಿ ಅವರ ವಿರುದ್ಧ ಎನ್ ಐಎ ಹಾಗೂ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ, ಸಿದ್ಧರಾಮಯ್ಯ ವಿಜೃಂಭಿಸಲು ಅವಕಾಶ ಕೊಟ್ಟಿದ್ದರು. ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ನವರಾತ್ರಿಯಲ್ಲೇ ಹಲವರಿಗೆ ಶುಭ ಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ