ಸುಬ್ರಹ್ಮಣ್ಯ : ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸುನಿಲ್‌ ಭೇಟಿ


Team Udayavani, Aug 4, 2022, 9:16 AM IST

ಸುಬ್ರಹ್ಮಣ್ಯ : ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸುನಿಲ್‌ ಭೇಟಿ

ಸುಬ್ರಹ್ಮಣ್ಯ : ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಸ್ಥಳಕ್ಕೆ ಸಚಿವ ಸುನಿಲ್‌ ಕುಮಾರ್‌ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಆ ಬಳಿಕ ಸಚಿವರು ಪಂಜದಲ್ಲಿರುವ ಮೃತ ಮಕ್ಕಳ ಅಜ್ಜನ ಮನೆಗೆ ಭೇಟಿ ನೀಡಿ ತಂದೆ- ತಾಯಿ, ಮನೆಯವರಿಗೆ ಸಾಂತ್ವನ ಹೇಳಿದರು.

ಮಳೆಹಾನಿ ಪ್ರದೇಶಗಳಿಗೆ ಭೇಟಿ
ಮಳೆಹಾನಿಗೆ ಒಳಗಾದ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದರು. ಹಾನಿಗೆ ಒಳಗಾದವರಿಗೆ ಕಾನೂನು ಚೌಕಟ್ಟಿನೊಳಗೆ ಪರಿಹಾರ ನೀಡುವ ಕಾರ್ಯ ನಡೆಸಲಾಗಿದೆ. ಕೃಷಿಹಾನಿ ಬಗ್ಗೆಯೂ ಪರಿಹಾರ ನೀಡಲಾಗುತ್ತದೆ ಎಂದರು.

ಸಚಿವರು ಮಳೆಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಸೇತುವೆ ಹಾನಿ, ರಸ್ತೆ ಹಾನಿ, ಕೃಷಿ ಹಾನಿ, ಮನೆ ಹಾನಿ, ಮನೆ ಕುಸಿತ, ಗುಡ್ಡ ಕುಸಿತ ಸೇರಿದಂತೆ ಮಳೆಹಾನಿ ಘಟನ ಸ್ಥಳಗಳಿಗೆ ತೆರಳಿ ವೀಕ್ಷಣೆ ನಡೆಸಿದರು.

ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾ. ಪಂ. ವ್ಯಾಪ್ತಿಯ ಮಳೆಹಾನಿ ಪ್ರದೇಶಕ್ಕೆ ತೆರಳಿದ ಸಚಿವರು ಮಳೆಯ ರುದ್ರನರ್ತನಕ್ಕೆ ನಲುಗಿದ ಹರಿಹರ ಪೇಟೆ ಹಾಗೂ ಕಲ್ಮಕಾರಿನ ಸ್ಥಿತಿ ಕಂಡು ದಿಗ್ಬ್ರಮೆ ವ್ಯಕ್ತಪಡಿಸಿ, ಇಲ್ಲಿನ ಜನರಿಗೆ ಆದಷ್ಟು ಬೇಗ ಸಂಪರ್ಕ ಕಲ್ಪಿಸುವ ತುರ್ತು ಕಾರ್ಯಕ್ಕೆ ಅಧಿಕಾರಿಗಳು ಗಮನಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಅಂಗಡಿ ಹಾನಿ: ಪರಿಹಾರಕ್ಕೆ ಪ್ರಯತ್ನ
ಮನೆ ಹಾನಿಗೆ 95 ಸಾವಿರ ರೂ. ನೀಡಲಾಗಿದೆ. ಮನೆ ನಿರ್ಮಿಸುವುದಿದ್ದಲ್ಲಿ 4 ಲಕ್ಷ ರೂ. ನೀಡಲಾಗುವುದು. ಅಂಗಡಿಗಳಿಗೆ ಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅವಕಾಶ ಇಲ್ಲ. ಆದರೂ ಸಿಎಂ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್‌ ಘೋಷಿಸಲು ಮನವಿ ಮಾಡಲಿದ್ದೇನೆ. ಅಂಗಡಿ ಹಾನಿಗೂ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿದರು.

ಯೇನೆಕಲ್ಲು: ಮನೆಗಳಿಗೆ ಭೇಟಿ
ಭಾರೀ ಮಳೆಗೆ ಹಾನಿಗೊಳಗಾದ ಯೇನೆಕಲ್ಲಿನ ಕುಶಾಲಪ್ಪ, ರವಿ, ಮತ್ತಿತರರ ಮನೆಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯವರಿಂದ ಮಾಹಿತಿ ಪಡೆದು ಕೊಂಡರು. ಆ ಬಳಿಕ ಹಾನಿಗೊಳಗಾದ ಯೇನೆ ಕಲ್ಲಿನ ಹೆದ್ದಾರಿಯ ಸೇತುವೆಯನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಪುತ್ತೂರು ಎಸಿ ಗಿರೀಶ್‌ ನಂದನ್‌, ಸುಳ್ಯ ತಹಶೀಲ್ದಾರ್‌ ಅನಿತಾಲಕ್ಷ್ಮೀ, ಕಡಬ ತಹಶೀಲ್ದಾರ್‌ ಅನಂತಶಂಕರ, ಕಡಬ ಇಒ ನವೀನ್‌ ಭಂಡಾರಿ, ಎಸಿಎಫ್ ಪ್ರವೀಣ್‌ ಶೆಟ್ಟಿ, ಆರ್‌ಎಫ್ಇ ಮಂಜುನಾಥ, ಆರ್‌ಐಗಳಾದ ಕೊರಗಪ್ಪ ಹೆಗ್ಡೆ, ಅವಿನ್‌ ರಂಗತ್ತಮಲೆ, ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ದೇರಾಜೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.