ತಾ| ಕಚೇರಿಗೆ ಸರ್ಜರಿ:  ಸಂಜೀವ ಮಠಂದೂರು

ಪುತ್ತೂರು ಕೆಡಿಪಿ ತ್ರೈ ಮಾಸಿಕ ಸಭೆಯಲ್ಲಿ ಕಂದಾಯ ಇಲಾಖೆ ವಿರುದ್ಧ ಗರಂ

Team Udayavani, Apr 27, 2022, 9:41 AM IST

sm

ಪುತ್ತೂರು: ಕಂದಾಯ ಇಲಾಖೆಯಲ್ಲಿ ಸರಕಾರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಜಾಗ ಮಂಜೂರಾತಿ ಸೇರಿದಂತೆ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಇದೆ. ಮುಂದಿನ ಒಂದು ತಿಂಗಳೊಳಗೆ ತಾಲೂಕು ಕಚೇರಿ ಕಾರ್ಯ ನಿರ್ವಹಣೆಯಲ್ಲಿ ಮೇಜರ್‌ ಸರ್ಜರಿ ಮಾಡಬೇಕು. ಇಲ್ಲದಿದ್ದರೆ ಅದಕ್ಕೆ ಬೇಕಾದ ಕ್ರಮ ನಾವೇ ಕೈಗೊಳ್ಳತ್ತೇವೆ ಎಂದು ಶಾಸಕ ಸಂಜೀವ ಮಠಂದೂರು ತಹಶೀಲ್ದಾರ್‌ಗೆ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲಿಸಿದ ಬಳಿಕ ಅವರು ಮಾತನಾಡಿದರು. ಕೆಡಿಪಿ ಸದಸ್ಯ ಭಾಸ್ಕರ ರೈ ಕಂಟ್ರಮಜಲು, ಎಸ್‌.ಬಿ.ಜಯರಾಮ ರೈ, ಅಬ್ದುಲ್‌ ಕುಂಞಿ, ಶಂಭು ಭಟ್‌ ಕಂದಾಯ ಇಲಾಖೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಪ್ರಸ್ತಾವಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಮುಂಡೂರು ಗ್ರಾಮದ ಮುಸ್ಲಿಂ ದಫನ ಭೂಮಿಗೆ ಮಂಜೂರಾದ 2 ಎಕ್ರೆ ಜಮೀನಿನಲ್ಲಿ 50 ಸೆಂಟ್ಸ್‌ ಒತ್ತುವರಿ ಆಗಿರುವ ಬಗ್ಗೆ ಸ್ಥಳ ತನಿಖೆ ನಡೆಸುವಂತೆ ತಹಶೀಲ್ದಾರ್‌ ಅವರಿಗೆ ಹಿಂದಿನ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ ಅವರು ಈ ನಿರ್ಣಯ ಪಾಲನೆ ಮಾಡಿಲ್ಲ ಎಂದು ಕೆಡಿಪಿ ಸದಸ್ಯ ಶಂಭು ಭಟ್‌ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ತಹಶೀಲ್ದಾರ್‌, ಶಾಸಕರು, ಕೆಡಿಪಿ ಸದಸ್ಯರ ನಡುವೆ ಕೆಲವು ಹೊತ್ತು ಚರ್ಚೆ ನಡೆಯಿತು. ಕಳೆದ ಒಂದು ವರ್ಷದಿಂದ ಈ ಸಮಸ್ಯೆಯ ಬಗ್ಗೆ ಪ್ರಸ್ತಾವಿ ಸಿದ್ದರೂ ಕಂದಾಯ ಇಲಾಖೆ ಸ್ಪಂದನೆ ನೀಡಿಲ್ಲ ಎಂದು ಅಬ್ದುಲ್‌ ಕುಂಞಿ ದೂರಿದರು.

 800 ಮನೆಗಳ ಪೈಕಿ 574 ಆಯ್ಕೆ

ತಾಲೂಕಿಗೆ 800 ಮನೆಗಳು ಮಂಜೂ ರಾಗಿದ್ದು 574 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಕೆಲವೆಡೆ ಮೀಸಲಾತಿಗೆ ತಕ್ಕಂತೆ ಅರ್ಹ ಫಲಾನುಭವಿಗಳು ಸಿಕ್ಕಿಲ್ಲ. ಉಳಿಕೆ ಮನೆಗಳನ್ನು ಗ್ರಾ.ಪಂ. ಗಳಲ್ಲಿ ಫಲಾನುಭವಿಗಳು ಬಾಕಿ ಇದ್ದರೂ ಹೆಚ್ಚುವರಿ ಆಯ್ಕೆಗೆ ಅವಕಾಶ ನೀಡಿ ಭರ್ತಿ ಮಾಡಲಾಗುವುದು ಎಂದು ಇಒ ನವೀನ್‌ ಭಂಡಾರಿ ಹೇಳಿದರು.

ಕೆಎಂಎಫ್‌ ಪ್ರಾಡೆಕ್ಟ್ ಸ್ಟಾಲ್‌ ತೆರೆಯಿರಿ

ಕೆಎಂಎಫ್‌ನಲ್ಲಿ ಹಾಲಿನ ಉತ್ಪನ್ನ ಆಧಾರಿತ ಉತ್ಪನ್ನಗಳು ಗ್ರಾಹಕರಿಗೆ ದೊರೆಯುವ ನಿಟ್ಟಿನಲ್ಲಿ ಬಸ್‌ನಿಲ್ದಾಣದ ಬಳಿ ಕೆಎಂಎಫ್‌ ಉತ್ಪನ್ನಗಳ ಸ್ಟಾಲ್‌ ತೆರೆದರೆ ಉತ್ತಮ. ಇದಕ್ಕೆ ನಗರಸಭೆಯು ಸಹಕಾರ ನೀಡಲಿದೆ ಎಂದು ದ.ಕ.ಕೆಎಂಎಫ್‌ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಅವರಿಗೆ ಶಾಸಕರು ಸಲಹೆ ನೀಡಿದರು.

ಈ ಬಾರಿ ಹದಿನೈದು ದಿನ ಮೊದಲೇ ಶಾಲೆ ಪುನಾರಂಭ

ಈ ಶೈಕ್ಷಣಿಕ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ತರಗತಿಗಳು ಮೇ 15 ರಿಂದ ಪ್ರಾರಂಭಗೊಳ್ಳಲಿದೆ. ಅಂದರೆ ಹದಿನೈದು ದಿನ ಮೊದಲೇ ಆರಂಭಗೊಳ್ಳಲಿದೆ. ಹೀಗಾಗಿ ಶಾಲಾ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ಸಿದ್ಧಗೊಳಿಸುವಂತೆ ಶಾಸಕರು ಶಿಕ್ಷಣಾಧಿಕಾರಿಗೆ ಸೂಚಿಸಿದರು. ಶಾಲಾ ಕಟ್ಟಡಗಳ ಬಗ್ಗೆ ಮಾಹಿತಿ ನೀಡಿದ ಬಿಇಒ ಲೋಕೇಶ್‌ ತಾಲೂಕಿನಲ್ಲಿ 296 ಕೊಠಡಿಗಳಿಗೆ ಬೇಡಿಕೆ ಇದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಲಾ ಪ್ರಾರಂಭೋತ್ಸಕ್ಕೆ ಸ್ಥಳೀಯಾಡಳಿತದ ಸಹಕಾರದೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.

ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಬೇಡಿಕೆ

ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರವೇಶಕ್ಕೆ ಅರ್ಜಿ ದುಪ್ಪಟ್ಟಾಗಿದೆ. ಆದರೆ ಈಗಿನ ನಿಯಮ ಪ್ರಕಾರ ಇಲಾಖೆಯಿಂದ ಶಿಕ್ಷಕರನ್ನು ಕೇಳುವಂತಿಲ್ಲ ಎಂದ ಬಿಇಒ ಸರಕಾರದಿಂದ ಒಪ್ಪಿಗೆ ದೊರೆತ ಬಳಿಕವಷ್ಟೇ ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು ಎಂದರು.

ಕೋವಿಡ್‌ ಮುನ್ನೆಚ್ಚೆರಿಕೆ ವಹಿಸುವಂತೆ ಸೂಚನೆ

ಕೋವಿಡ್‌ ನಾಲ್ಕನೇ ಅಲೆಯ ಲಕ್ಷಣ ಕಂಡು ಬಂದಿದ್ದು ಮುನ್ನೆಚ್ಚೆರಿಕೆ ಕ್ರಮವಾಗಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ಸರಕಾರ ಆದೇಶಿಸಿದೆ. ಇದರ ಪಾಲನೆಗೆ ಆರೋಗ್ಯ ಇಲಾಖೆ ಸಹಿತ ಸ್ಥಳೀಯಾಡಳಿತ ಗಮನ ಹರಿಸುವಂತೆ ಶಾಸಕರು ಸೂಚಿಸಿದರು. ಆರೋಗ್ಯ ಇಲಾಖೆ ಅಧಿಕಾರಿ ಉತ್ತರಿಸಿ, ತಾಲೂಕಿನಲ್ಲಿ ಈ ತನಕ ಕೊರೊನಾ ಸಕ್ರಿಯ ಪ್ರಕರಣ ಕಂಡು ಬಂದಿಲ್ಲ. ಕೋವಿಡ್‌ ಪರೀಕ್ಷೆ ನಡೆಯುತ್ತಿಲ್ಲ. ಈ ಹಿಂದೆ ತೆರೆಯಲಾಗಿದ್ದ ಕೋವಿಡ್‌ ಸೆಂಟರ್‌, ವಾರ್ಡ್‌ಗಳನ್ನು ಮುಚ್ಚಲಾಗಿದ್ದು ಅನಿವಾರ್ಯ ಸ್ಥಿತಿ ಉಂಟಾದರೆ ಪುನರ್‌ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾ.ಪಂ. ಆಡಳಿತಾಧಿಕಾರಿ ಕೆ.ಎಸ್. ಸಂಧ್ಯಾ, ಡಿವೈಎಸ್‌ಪಿ ಗಾನಾ ಪಿ.ಕುಮಾರ್, ನಗರಸಭೆ ಪೌರಾಯುಕ್ತ ಮಧು ಎಸ್‌. ಮನೋಹರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.