ತಹಶೀಲ್ದಾರ್‌ ಸಮ್ಮುಖದಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ಸರ್ವೇ

ವೇಣೂರು: ಬಾಡಾರಿನ ಕೊರಗಜ್ಜನ ಕಟ್ಟೆ ವಿವಾದ

Team Udayavani, Jul 18, 2023, 6:31 AM IST

ತಹಶೀಲ್ದಾರ್‌ ಸಮ್ಮುಖದಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ಸರ್ವೇ

ಬೆಳ್ತಂಗಡಿ: ವೇಣೂರಿನ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವಿವಾದಿತ ಕೊರಗಜ್ಜನ ಕಟ್ಟೆಗೆ ಸಂಬಂಧಿಸಿ ಜು. 17ರಂದು ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸ್‌ ಬಿಗಿ ಭದ್ರತೆಯೊಂದಿಗೆ ಭೂಮಿಯ ಅಳತೆ ಕಾರ್ಯ ನಡೆಸಲಾಯಿತು.

ಬೆಳ್ತಂಗಡಿ ತಹಶೀಲ್ದಾರ್‌ ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ಜಾಗದ ಸರ್ವೇ ಕಾರ್ಯ ನಡೆಸಲಾಗಿದ್ದು, ಸರ್ವೇಯಲ್ಲಿ ಈ ಹಿಂದೆ ಆರೋಪಿ ಬೆಂಕಿ ನೀಡಿದ್ದ ಕೊರಗಜ್ಜನ ಕಟ್ಟೆ ಇರುವ ಸ್ಥಳ ಸರಕಾರಕ್ಕೆ ಸೇರಿದ್ದು ಎಂದು ತಿಳಿದು ಬಂದಿದೆ. ಆದರೆ ಪ್ರಸ್ತುತ ಕೊರಗಜ್ಜನ ಹೊಸ ಕಟ್ಟೆಯನ್ನು ಮಾಡಲು ಹೊರಟಿರುವ ಸ್ಥಳ ಕುಟುಂಬಸ್ಥರ ವರ್ಗ ಜಮೀನಿನಲ್ಲಿರುವ ಬಗ್ಗೆ ಸರ್ವೇ ವೇಳೆ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ
ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ , ಕೊರಗಕಲ್ಲು, ಬಾಡಾರು ಈ ಹೆಸರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿದ್ದ ಕೊರಗಜ್ಜನ ಕಟ್ಟೆಯನ್ನು ಊರಮಂದಿ ಆರಾಧಿಸುತ್ತಾ ಬರುತ್ತಿದ್ದರು. ಆದರೆ ಈ ಸ್ಥಳದಲ್ಲಿದ್ದ ಕೊರಗಜ್ಜನ ಕಟ್ಟೆ ಒಂದು ಕುಟುಂಬವರ್ಗಕ್ಕೆ ಸೇರಿದ್ದು ಎಂಬ ಹಿನ್ನೆಲೆಯಲ್ಲಿ ವಿವಾದವೆದ್ದು ಕುಟುಂಬಸ್ಥರ ಸ್ಥಳದಲ್ಲಿ ಸ್ಥಳ ಸಾನಿಧ್ಯ ಪ್ರಶ್ನೆಯನ್ನು ಇಡಲಾಗಿತ್ತು. ಪ್ರಶ್ನೆಯಲ್ಲಿ ಕಂಡುಬಂದಂತೆ ಇದು ಕುಟುಂಬಕ್ಕೆ ಸೇರಿದ ಕೊರಗಜ್ಜನ ಸಾನಿಧ್ಯ ಎಂಬ ಹಿನ್ನೆಲೆಯಲ್ಲಿ ಕಟ್ಟೆಯನ್ನು ಕುಟುಂಬಸ್ಥರ ಜಾಗದಲ್ಲಿ ನಿರ್ಮಾಣ ಮಾಡುವ ಉದ್ದೇಶದಿಂದ ಕೆಸರು ಕಲ್ಲು ಹಾಕಲಾಗಿದೆ. ಆ ಬಳಿಕ ಸಾರ್ವಜನಿಕ ಸ್ಥಳದಲ್ಲಿ ಇದ್ದ ಕಟ್ಟೆಗೆ ಬೆಂಕಿ ಕೊಡುವ ಘಟನೆ ನಡೆದಿದ್ದು ಪ್ರಕರಣ ಪೋಲೀಸ್‌ ಮೆಟ್ಟಿಲೇರಿತ್ತು.

ದೀಪ ಇಡುವಂತಿಲ್ಲ
ಈಗ ಜಮೀನಿನ ಸರ್ವೇ ಕಾರ್ಯ ನಡೆದಿದ್ದು, ವಿವಾದಿತ ಕೊರಗಜ್ಜನ ಕಟ್ಟೆ ಸರಕಾರಿ ಜಾಗದಲ್ಲಿರುವುದು ಕಂಡುಬಂದಿದ್ದು, ಕೆಸರು ಕಲ್ಲು ಹಾಕಿರುವ ಕೊರಗಜ್ಜ ಸಾನಿಧ್ಯ ಕುಟುಂಬದ ವರ್ಗ ಜಮೀನಿನಲ್ಲಿ ಇದೆ ಎಂದು ತಿಳಿದುಬಂದಿದೆ. ಪ್ರಸ್ತುತ ಸರಕಾರಿ ಜಾಗದಲ್ಲಿರುವ ಗುಡಿಗೆ ತಾತ್ಕಾಲಿಕವಾಗಿ ಸರಕಾರದ ವತಿಯಿಂದಲೇ ಚಪ್ಪರ ಹಾಕಿಕೊಡಲಾಗುವುದು. ಡಿಸೆಂಬರ್‌ವರೆಗೆ ಯಾವುದೇ ಜೀರ್ಣೋದ್ಧಾರ ಕಾರ್ಯ ಮಾಡುವಂತಿಲ್ಲ. ಸಾರ್ವಜನಿಕ ಟ್ರಸ್ಟ್ ಹಾಗೂ ರಾಜೇಶ್‌ ಕುಟುಂಬದ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಒಂದು ತಿಂಗಳ ಮಟ್ಟಿಗೆ ಕಟ್ಟೆಯಲ್ಲಿ ಯಾರೂ ದೀಪ ಉರಿಸುವಂತಿಲ್ಲ. ಇಚ್ಚೆಯಿದ್ದವರು ದೈವದ ಗುಡಿಗೆ ಕೈ ಮುಗಿದು ಹೋಗಬಹುದು. ಈ ಪ್ರದೇಶದಲ್ಲಿ ಜಾರಿ ಮಾಡಿದ್ದ 144 ಸೆಕ್ಷನ್‌ ನಿಷೇಧಾಜ್ಞೆ ಹಿಂಪಡೆಯಲಾಗಿದೆ. ಮುಜರಾಯಿ ಇಲಾಖೆಯ ಒಪ್ಪಿಗೆ ಪಡೆದು ಮುಂದಿನ ಕಾರ್ಯ ಮಾಡುವಂತೆ ಬೆಳ್ತಂಗಡಿ ತಹಶಿಲ್ದಾರ್‌ ಸುರೇಶ್‌ ಕುಮಾರ್‌ ಟಿ. ಎರಡೂ ಕಡೆಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ವೇ ಇಲಾಖೆ ಅಧಿಕಾರಿಗಳು, ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಉಪನಿರೀಕ್ಷಕ ನಂದಕುಮಾರ್‌, ವೇಣೂರು ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಸೌಮ್ಯ ಮತ್ತು ಆನಂದ್ , ಪೊಲೀಸ್‌ ಸಿಬಂದಿ ಸೂಕ್ತ ಭದ್ರತೆ ಒದಗಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.