ಸಂತ್ರಸ್ತರ ಮನೆಗೆ ಭೇಟಿ ನೀಡಿದ ತಹಶೀಲ್ದಾರ್‌

ಪಡಿತರ ಸಿಗದಿರುವ ಬಗ್ಗೆ ಉದಯವಾಣಿ ವರದಿ ಹಿನ್ನೆಲೆ

Team Udayavani, Apr 17, 2020, 5:13 AM IST

ಸಂತ್ರಸ್ತರ ಮನೆಗೆ ಭೇಟಿ ನೀಡಿದ ತಹಶೀಲ್ದಾರ್‌

ಸುಳ್ಯ: ಬುಟ್ಟಿ ಹೆಣೆದು ಬದುಕುವ ಪೆರುವಾಜೆ ಜಾಲ್ಪಣೆಯ ಹುಕ್ರು ಮತ್ತು ಬಟ್ಯ ಅವರಿಗೆ ಒಂದು ವರ್ಷದಿಂದ ಪಡಿತರ ಸೌಲಭ್ಯ ದೊರೆಯದಿರುವ ಬಗ್ಗೆ ಎ.16ರಂದು “ಆಧಾರ್‌ ಗೊಂದಲ: ಕುಟುಂಬಕ್ಕೆ ಸಿಗದ ಪಡಿತರ’ ತಲೆಬರಹದಲ್ಲಿ ಉದಯವಾಣಿ ಸುದಿನ ವರದಿ ಪ್ರಕಟಿಸಿದ ಬೆನ್ನಲ್ಲೇ ತಾಲೂಕು ಆಡಳಿತ ಗುರುವಾರ ಸಂತ್ರಸ್ತರ ಮನೆಗೆ ಭೇಟಿ ನೀಡಿದೆ.

ತಹಶೀಲ್ದಾರ್‌ ನೇತೃತ್ವದಲ್ಲಿ
ಮನೆಗೆ ಭೇಟಿ : ಸ್ಪಂದನೆ
ವರದಿ ಗಮನಿಸಿದ ತಾಲೂಕು ಆಡಳಿತ ಎ.16ರಂದು ತಹಶೀಲ್ದಾರ್‌ ಅನಂತಶಂಕರ, ಕಂದಾಯ ನಿರೀಕ್ಷಕರಾದ ಆರ್‌.ಶಂಕರ್‌, ಕೊರಗಪ್ಪ, ಗ್ರಾಮಕರಣಿಕೆ ನೇತೃತ್ವದಲ್ಲಿ ಬಟ್ಯ ಅವರ ಮನೆಗೆ ಭೇಟಿ ನೀಡಿ ಮೊದಲ ಹಂತದಲ್ಲಿ ಅಕ್ಕಿ ವಿತರಿಸಿತು. ಆಹಾರ ನಿರೀಕ್ಷಕಿ ವಸಂತಿ, ಆಹಾರ ಶಿರಸ್ತೇದಾರೆ ಕಮಲಾ ಅವರು ತುರ್ತು ಸಹಕಾರಕ್ಕೆ ಸಹಯೋಗ ನೀಡಿದರು. ಜತೆಗೆ ಪಡಿತರ ಸಿಗದಿರಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕೋವಿಡ್ 19 ಲಾಕ್‌ಡೌನ್‌ ಮುಗಿದ ತತ್‌ಕ್ಷಣ ಆಧಾರ್‌ ಸಮಸ್ಯೆ ಸರಿಪಡಿಸಿ ಈ ಎರಡು ಕುಟುಂಬಗಳಿಗೆ ಸರಕಾರದಿಂದ ಪಡಿತರ ಸೌಲಭ್ಯ ಒದಗಿಸುವ ಬಗ್ಗೆ ತಹಶೀಲ್ದಾರ್‌ ಭರವಸೆ ನೀಡಿದರು.

ಆಧಾರ್‌ ಕಾರ್ಡ್‌ ಸಮಸ್ಯೆಯಿದ್ದಲ್ಲಿ ತಮ್ಮ ಇಲಾಖೆ ಮೂಲಕ ಅದಕ್ಕೆ ಸ್ಪಂದನೆ ನೀಡ ಲಾಗುವುದು ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನ
ಉದಯವಾಣಿ ವರದಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಎಂ.ಕೆ.ಮಂಜುನಾಥ ಅವರು ತಹಶೀಲ್ದಾರ್‌ ಅನಂತಶಂಕರ ಅವರ ನೇತೃತ್ವದಲ್ಲಿ ಅಗತ್ಯ ಕ್ರಮಕ್ಕೆ ಮುಂದಾದರು. ಪತ್ರಿಕಾ ವರದಿ ಕುರಿತು ಆಡಳಿತ ವ್ಯವಸ್ಥೆಯ ತುರ್ತು ಸ್ಪಂದನೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.