ತಾ| ಕಚೇರಿಯಲ್ಲಿ ಬ್ರೋಕರ್ ಹಾವಳಿ ತಡೆಗೆ ಆಗ್ರಹ
Team Udayavani, Jul 6, 2019, 5:00 AM IST
ಪುಂಜಾಲಕಟ್ಟೆ: ತಾ| ಕಚೇರಿಯಲ್ಲಿ ಆಧಾರ್ಕಾರ್ಡ್ ತಿದ್ದುಪಡಿ, ಆರ್ಟಿಸಿ ಪಡೆ ಯಲು ಬ್ರೋಕರ್ಗಳ ಹಾವಳಿ ತಡೆಗಟ್ಟಲು ಕುಕ್ಕಿಪಾಡಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಂಟ್ವಾಳ ತಾ|ನ ಕುಕ್ಕಿಪಾಡಿ ಗ್ರಾ.ಪಂ. ಸಭಾಭವನದಲ್ಲಿ ಜರಗಿದ ಕುಕ್ಕಿಪಾಡಿ ಗ್ರಾ.ಪಂ.ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಆಗ್ರಹಿಸಿದ್ದಾರೆ.
ಮಾರ್ಗದರ್ಶಿ ಅಧಿಕಾರಿಯಾಗಿದ್ದ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಈ ಬಗ್ಗೆ ತಹಶೀಲ್ದಾರರಿಗೆ ಗ್ರಾಮಸಭೆಯ ನಿರ್ಣಯದೊಂದಿಗೆ ಪತ್ರ ಬರೆಯಲು ಸೂಚಿಸಿದರು. ಗ್ರಾಮಸ್ಥರ ಕುಂದುಕೊರತೆ ಗಳ ಬಗ್ಗೆ ವಿವರ ಪಡೆಯಲಾಯಿತು. ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.
ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರಶಾಂತಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಪಂ.ಅ. ಅಧಿಕಾರಿ ತುಳಸಿ, ಗ್ರಾ.ಪಂ. ಸದಸ್ಯರಾದ ಸುಧಾಕರ ಶೆಟ್ಟಿ, ಸುಧೀಂದ್ರ ಶೆಟ್ಟಿ, ಯೋಗೀಶ್ ಆಚಾರ್ಯ, ಲಿಂಗಪ್ಪ ಪೂಜಾರಿ, ವನಜಾ, ರತ್ನಾ, ಸುಜಾತಾ, ಬೇಬಿ, ಶೋಭಾ, ಹರಿಣಿ, ವಿನಯಾ, ಮಹಿಳಾ- ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮೆಸ್ಕಾಂ, ಪಂಚಾಯತ್ರಾಜ್ ಎಂಜಿನಿಯರಿಂಗ್ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆ, ಪಶುಸಂಗೋಪನ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾ ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಗಣೇಶ್ ಶೆಟ್ಟಿಗಾರ್ ಸ್ವಾಗತಿಸಿ, ವಂದಿಸಿದರು.