ಕೋವಿಡ್‌-19 ತಡೆಗೆ ತಂಡ ರಚನೆ: ಅಧಿಕಾರಿಗಳಿಗೆ ಡಿಸಿ ಸೂಚನೆ


Team Udayavani, Aug 6, 2020, 12:05 PM IST

ಕೋವಿಡ್‌-19 ತಡೆಗೆ ತಂಡ ರಚನೆ: ಅಧಿಕಾರಿಗಳಿಗೆ ಡಿಸಿ ಸೂಚನೆ

ಪುತ್ತೂರು: ಕೋವಿಡ್‌ ಕುರಿತಂತೆ ಜನರಲ್ಲಿ ಇರುವ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಒದಗಿಸುವ ಸಲುವಾಗಿ ಅಧಿಕಾರಿಗಳು ಸಹಿತ ಶಿಕ್ಷಕರು, ಸ್ಥಳೀಯ ಗ್ರಾ.ಪಂ. ಪಿಡಿಒ, ಆಶಾ, ಅಂಗನವಾಡಿ ಕಾರ್ಯಕತೆರ್ಯರು ಹಾಗೂ ಕಾರ್ಯಪಡೆ ಸದಸ್ಯರನ್ನು ಬಳಸಿಕೊಂಡು ತಂಡವಾಗಿ ಕೆಲಸ ನಿರ್ವಹಿ ಸುವಂತೆ ದ.ಕ. ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾ.ಪಂ. ಸಭಾಂಗಣದಲ್ಲಿ ಕೋವಿಡ್‌- 19 ಕುರಿತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆ. 5ರಂದು ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕೋವಿಡ್‌-19 ಮಹಾಮಾರಿಯನ್ನು ಮುಂದಿನ ದಿನಗಳಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಂದ ಜನರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದ ಅವರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಸಹಿತ ಗ್ರಾ.ಪಂ. ಮಟ್ಟದ ಕೊರೊನಾ ವಾರಿಯರ್ಗಳು ನಿರಂತರ ಕೆಲಸ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಸ್ಕ್ ಒದಗಿಸಿ
ಮನೆ ಮನೆಗಳಿಗೆ ತೆರಳುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ಆಡಳಿತದ ವತಿಯಿಂದ ನೀಡಬೇಕು. ಈ ವಿಚಾರದಲ್ಲಿ ಕೊರತೆ ಉಂಟಾದಲ್ಲಿ ಜಿಲ್ಲಾಡಳಿತದಿಂದ ರ್‍ಯಾಂಡಮ್‌ ಆಗಿ ತಪಾಸಣೆ ಮಾಡಲಿದ್ದೇವೆ. ಮುಖ್ಯವಾಗಿ ಸ್ಥಳೀಯ ಬಿಇಒ ಹಂತದಲ್ಲಿ ಶಿಕ್ಷಕರು, ಟಿಎಚ್‌ಒ, ಸಿಡಿಪಿಒ, ಪಿಡಿಒ ಗ್ರಾ.ಪಂ. ಮಟ್ಟದ ಸ್ಥಳೀಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಕೊರೊನಾ ವಾರಿಯರ್ಸ್‌ಗಳಿಗೆ ತರಬೇತಿ ನೀಡುವ ಕೆಲಸವನ್ನು ಆರಂಭಿಸಬೇಕು ಎಂದು ಸೂಚನೆ ನೀಡಿದರು.

ಗ್ರಾ.ಪಂ. ವ್ಯಾಪ್ತಿಯಲ್ಲಿ ಕೊರೊನಾ ಜತೆಗೆ ಡೆಂಗ್ಯೂ, ಮಲೇರಿಯಾ, ಇಲಿ ಜ್ವರದ ಕುರಿತು ಗಮನ ಹರಿಸಬೇಕಾಗಿದೆ. ಎಲ್ಲೆಲ್ಲಿ ಕೊಳಚೆ ನೀರು ನಿಲ್ಲುತ್ತದೆ ಎಂಬುದನ್ನು ತಿಳಿದು ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ ಎಂದರು.
ಕೆಲವು ಆಸ್ಪತ್ರೆಗಳಲ್ಲಿ ಕೋವಿಡ್‌ ಆಗಿರಲಿ, ನಾನ್‌ ಕೋವಿಡ್‌ ಆಗಿರಲಿ ಜಾಸ್ತಿ ಬಿಲ್‌ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಕುರಿತು ನಮಗೆ ತಿಳಿಸಿ. ಗಂಭೀರ ಆರೋಗ್ಯ ಸಮಸ್ಯೆ ಇರು ವವರನ್ನು ಆಯುಷ್ಮಾನ್‌ ಯೋಜನೆಗೆ ಒಳಪಡಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಸಹಾಯಕ ಆಯುಕ್ತ ಡಾ| ಯತೀಶ್‌ ಉಳ್ಳಾಲ್‌, ತಹಶೀಲ್ದಾರ್‌ ರಮೇಶ್‌ ಬಾಬು, ತಾ.ಪಂ. ಇಒ ನವೀನ್‌ ಭಂಡಾರಿ, ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಉಪಸ್ಥಿತರಿದ್ದರು.

250- 300 ಮಂದಿಯ ತಂಡ
ತಾಲೂಕು ಮಟ್ಟದ ಅ ಧಿಕಾರಿಗಳು ಸಹಿತ ಸ್ಥಳೀಯ ಗ್ರಾ.ಪಂ. ಮಟ್ಟದ ಆಶಾ ಕಾರ್ಯಕತೆರ್ಯರು, ಕಾರ್ಯಪಡೆ ಸದಸ್ಯರು, ಪಿಡಿಒ ಮೊದಲಾದವರನ್ನೊಳಗೊಂಡ 250ರಿಂದ 300 ಮಂದಿಯ ತಂಡ ಮಾಡಿ ಪ್ರತಿದಿನ ಸುಮಾರು 20 ಮನೆಗಳನ್ನಾದರೂ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬೇಕು. ಜ್ವರ, ಶೀತ ಲಕ್ಷಣಗಳು ಕಂಡು ಬಂದಲ್ಲಿ ಬಿಪಿ, ಶುಗರ್‌ ಚೆಕ್‌ ಮಾಡಿ ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ ಮಾಡಲು ಮನ ವೊಲಿಸಬೇಕು. ಫೀಲ್ಡ್‌ ಮಾಹಿತಿ ಸರಿಯಾಗಿ ಸಿಗಬೇಕು. ಶೀಘ್ರ ತಾಲೂಕಿಗೆ ತಲಾ ಎರಡರಂತೆ ಲ್ಯಾಬ್‌ ಟೆಕ್ನೀಶಿಯನ್‌, ಡಾಟಾ ಎಂಟ್ರಿ ಆಪರೇಟರ್‌ರನ್ನು ನೀಡಲಿದ್ದು, ಮನೆ ಭೇಟಿ ಸಂದರ್ಭ ಇವರು ಆಶಾ ಕಾರ್ಯಕರ್ತೆಯರೊಂದಿಗೆ ಸಹಕರಿಸ ಲಿದ್ದಾರೆ ಎಂದು ಡಿಸಿ ತಿಳಿಸಿದರು.

ಸಹಭಾಗಿತ್ವ ಅಗತ್ಯ
ಕೋವಿಡ್‌-19 ತಡೆಗಟ್ಟುವ ವಿಚಾರದಲ್ಲಿ ಸಮುದಾಯದ ಸಹಭಾಗಿತ್ವದ ಆವಶ್ಯಕತೆಯಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ ಇದೆ. ಇದನ್ನು ಟಿಎಚ್‌ಒ ಅವರು ಗಮನಿಸಿ ತಾಂತ್ರಿಕ ತೊಂದರೆಗಳಿರುವ ಆಸ್ಪತ್ರೆಗಳ ವೈದ್ಯರನ್ನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಪಡೆಯವಂತೆ ಮಾಡಬೇಕು. ಒಂದೇ ಕಡೆ ಕೋವಿಡ್‌-ನಾನ್‌ಕೋವಿಡ್‌ ಚಿಕಿತ್ಸೆ ನೀಡಲು ಸಮಸ್ಯೆಯಾಗುತ್ತಿದೆ. ಈ ಕುರಿತು ಡಾಕ್ಟರ್‌ ಅಸೋಸಿಯೇಶನ್‌ ಅವರಲ್ಲಿ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.