ಬೆಳೆ ಪರಿಶೀಲನೆ ನಡೆಸಿದ ಕೃಷಿ ಅಧಿಕಾರಿಗಳ ತಂಡ

ಏಣೇಲು ಗದ್ದೆಯಲ್ಲಿ ಗರಿ ಮಡಚುವ ಹುಳದ ಬಾಧೆ

Team Udayavani, Sep 29, 2022, 10:38 AM IST

3

ಬೆಳ್ತಂಗಡಿ: ಈ ಬಾರಿ ಮೇ ತಿಂಗಳಲ್ಲಿ ಉತ್ತಮ ಮಳೆಯಾದ ಪರಿಣಾಮ ಜೂನ್‌ ಅವಧಿಯಲ್ಲಿ ಏಣೇಲು ಬೇಸಾಯ ನಡೆಸಿದ ಪರಿಣಾಮ ಗದ್ದೆಗಳಲ್ಲಿ ನೀರು ನಿಂತು ಗರಿ ಮಡಚುವ ಹುಳ ಬಾಧೆ ಆವರಿಸಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೃಷಿಕರ ಗದ್ದೆಗಳಲ್ಲಿ ಈ ಸಮಸ್ಯೆ ಉಂಟಾಗಿತ್ತು. ಈ ಕುರಿತು ಉದಯವಾಣಿ ವರದಿ ಪ್ರಕಟಿಸಿತ್ತು.

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗುರಿಪಳ್ಳ ಪರಿಸರದಲ್ಲಿನ ಗದ್ದೆಗಳಲ್ಲಿ ಕೀಟ ಬಾಧೆ ಕಾಣಿಸಿಕೊಂಡು ಹಲವು ಎಕರೆ ಫಸಲು ನಷ್ಟವಾಗಿತ್ತು. ಈ ವಿಚಾರವಾಗಿ ಮಾಹಿತಿ ಪಡೆದ ಹೈದರಾಬಾದ್‌ನ ಐಸಿಎಆರ್‌-ಐಐ ಆರ್‌ಆರ್‌ನ ನಿರ್ದೇಶನದ ಮೇರೆಗೆ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಕೀಟಶಾಸ್ತ್ರ ಹಾಗೂ ಸಸ್ಯರೋಗ ಶಾಸ್ತ್ರದ ವಿಜ್ಞಾನಿಗಳು ಬೆಳ್ತಂಗಡಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಕೀಟಬಾಧೆ ಕಾಣಿಸಿಕೊಂಡ ಗುರಿಪಳ್ಳದ ವಿಷ್ಣು ಭಾರದ್ವಾಜ್‌ ಹಾಗೂ ರಮಾನಂದ ಶರ್ಮ ಮತ್ತು ಪರಿಸರದ ಗದ್ದೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಂಡದಲ್ಲಿ ಬ್ರಹ್ಮಾವರದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಕೀಟಶಾಸ್ತ್ರ ವಿಭಾಗದ ವಿಜ್ಞಾನಿ ಡಾ| ರೇವಣ್ಣ ರೇವಣ್ಣನವರ್‌, ಸಸ್ಯರೋಗ ಶಾಸ್ತ್ರ ವಿಭಾಗದ ವಿಜ್ಞಾನಿ ಸ್ವಾತಿ ಶೆಟ್ಟಿ, ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ರಂಜಿತ್‌ ಕುಮಾರ್‌ ಟಿ.ಎಂ. ಹಾಗೂ ಕೃಷಿ ಅಧಿಕಾರಿ ಹುಮೇರಾ ಜಬೀನ್‌ ಇದ್ದರು.

ಫಸಲು ನಷ್ಟ

ಇದು ಕೊಳವೆ ಹುಳುವಿನ ರೂಪದಲ್ಲಿ ಕಂಡುಬಂದಿದ್ದು ತಡವಾಗಿ ನಾಟಿ ಮಾಡಿದ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಹಾಗೂ ಇದರ ಬಗ್ಗೆ ನಿರ್ಲಕ್ಷé ವಹಿಸಿದರೆ ಫಸಲು ನಷ್ಟವಾಗುತ್ತದೆ ಎಂದು ತಿಳಿಸಿದರು.

ಹತೋಟಿ ಕ್ರಮ

ಈ ಕೀಟಗಳನ್ನು 200 ವ್ಯಾಟ್‌ ವಿದ್ಯುತ್‌ ದೀಪಕ್ಕೆ ಆಕರ್ಷಿಸಿ ನಿಯಂತ್ರಿಸಬಹುದು.ಕೀಟ ಬಾಧೆಗೆ ಒಳಗಾದ ಭತ್ತದ ಗದ್ದೆಯಲ್ಲಿ ತೆಂಗಿನ ನಾರಿನ ಹಗ್ಗವನ್ನು ಪೈರಿನ ಮೇಲೆ ಹಾಯಿಸಿದಾಗ ನೀರಿಗೆ ಬೀಳುವ ಕೀಟ ಗಳನ್ನು ಬಸಿಗಾಲುವೆಯ ಕೊನೆ ಭಾಗ ದಲ್ಲಿ ಆರಿಸಿ ನಾಶಪಡಿಸಬೇಕು. ಸೀಮೆ ಎಣ್ಣೆಯಿಂದ ಒದ್ದೆಗೊಳಿಸಿದ ಗೋಣಿ ಚೀಲಗಳನ್ನು ಭತ್ತದ ಗದ್ದೆಗೆ ನೀರು ಹರಿದು ಬರುವ ಜಾಗದಲ್ಲಿ ಇಟ್ಟರೆ ಕೊಳವೆ ಹುಳು ನಿಯಂತ್ರಣಕ್ಕೆ ಬರು ತ್ತದೆ. ಫೈರಿಫಾಸ್‌ 20 ಇಸಿ 2.5 ಮಿ.ಲೀ. ಅನ್ನು ಒಂದು ಲೀಟರ್‌ ನೀರಿಗೆ ಬೆರೆಸಿ ಭತ್ತದ ಪೈರಿಗೆ ಸಿಂಪಡಿಸಿದರೆ ಕೀಟ ಸಂಪೂರ್ಣ ಹತೋಟಿಗೆ ಬರುತ್ತದೆ. ಆರಂಭಿಕ ಹಂತದಲ್ಲಿ ಕಂಡು ಬಂದರೆ ಬೇವಿನ ಮೂಲದ ಕೀಟನಾಶಕಗಳನ್ನು 2 ಮಿ.ಲೀ. ಪ್ರಮಾ ಣದಲ್ಲಿ 1 ಲೀಟರ್‌ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.