ಬೆಳ್ತಂಗಡಿ ವಾರದ ಸಂತೆ ಎಪಿಎಂಸಿಗೆ ತಾತ್ಕಾಲಿಕ ಸ್ಥಳಾಂತರ
Team Udayavani, Apr 20, 2020, 4:55 AM IST
ಬೆಳ್ತಂಗಡಿ: ಕೋವಿಡ್ 19 ವೈರಸ್ ಆತಂಕದ ನಡುವೆ ವಾರದ ಸಂತೆಯಂದು ಸಂತೆ ಮಾರುಕಟ್ಟೆಯಲ್ಲಿ ಅತೀಹೆಚ್ಚು ಜನ ಸೇರುತ್ತಿರುವುದರಿಂದ ಬೆಳ್ತಂಗಡಿ ಸೋಮವಾರ ಸಂತೆಯನ್ನು ತಾತ್ಕಾಲಿಕವಾಗಿ ಎಪಿಎಂಸಿ ಯಾರ್ಡ್ಗೆ ಸ್ಥಳಾಂತರಿಸುವ ಕುರಿತು ಶಾಸಕ ಹರೀಶ್ ಫೂಂಜ ರವಿವಾರ ಸ್ಥಳ ಪರಿಶೀಲನೆ ನಡೆಸಿದರು.
ಮಾಹಿತಿ ನಾಮಫಲಕ ಅಳವಡಿಕೆ
ನ.ಪಂ.ಮುಖ್ಯಾಧಿಕಾರಿ ಸುಧಾಕರ್ ಮಾತನಾಡಿ, ಎಲ್ಲ ವ್ಯಾಪಾರಿಗಳಿಗೆ ಮಾಹಿತಿ ನೀಡಲಾಗಿದೆ.ರಸ್ತೆ ಬದಿ ತರಕಾರಿ ಮಾರಾಟಗಾರಿಗೆ ಇಲ್ಲಿಗೆ ಬರಲು ತಿಳಿಸಲಾಗಿದೆ ಎಂದರು.
ಈ ಕುರಿತು ಸ್ಥಳದಲ್ಲಿ ಮಾಹಿತಿ ನಾಮಫಲಕವನ್ನು ಅಳವಡಿಸಲಾಗುತ್ತದೆ. ಸಾರ್ವಜನಿಕರಿಗೆ ಪಾರ್ಕಿಂಗ್ ಸಹಿತ ಖರೀದಿಗೆ ಮಾರ್ಕಿಂಗ್ ವ್ಯವಸ್ಥೆ ಮಾಡಲಾ ಗುವುದು. ಸೂಕ್ತ ಮೂಲ ಸೌಕರ್ಯವನ್ನೂ ಒದಗಿಸಲಾಗುತ್ತದೆ. ಎ. 20ರಂದು ಎ.ಪಿ.ಎಂ.ಸಿ.ಯಲ್ಲೇ ವಾರದ ಸಂತೆ ನಡೆಯ ಲಿದೆ ಎಂದರು. ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ನ.ಪಂ. ಎಂಜಿನಿಯರ್ ಮಹಾ ವೀರ ಆರಿಗ ಉಪಸ್ಥಿತರಿದ್ದರು.
ಅಗತ್ಯ ಮುನ್ನೆಚ್ಚರಿಕೆ ಕ್ರಮ
ಈ ಸಂದರ್ಭ ಮಾತನಾಡಿದ ಶಾಸಕರು, ವಾರದ ಸಂತೆಯಿಂದ ಯಾವುದೇ ತೊಂದರೆಗೊಳಗಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ವ್ಯಾಪಾರಸ್ಥರಿಗೆ ನಗರ ಪಂಚಾಯತ್ನಿಂದ ಸೂಚನೆ ನೀಡಲಾಗಿದೆ. ಸೋಮವಾರ ವಾರದ ಸಂತೆಯಂದು ತೆರೆದಿರುವ ಹಸಿ ಮೀನು, ಒಣ ಮೀನು, ತರಕಾರಿ, ಹಣ್ಣುಹಂಪಲು, ತಳ್ಳುಗಾಡಿ ಸಹಿತ ಎಲ್ಲ ಅಂಗಡಿಗಳು ಎ.ಪಿ.ಎಂ.ಸಿ.ಗೆ ಸ್ಥಳಾಂತರಗೊಳ್ಳಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ