ತೆಂಕಿಲ ಗುಡ್ಡ ಕುಸಿತ: 11 ಕುಟುಂಬ ಸ್ಥಳಾಂತರ


Team Udayavani, Aug 14, 2019, 5:00 AM IST

S-15

ಪುತ್ತೂರು: ಭೂಕಂಪನದ ಸಾಧ್ಯತೆ ಇರುವ ಬಗ್ಗೆ ಭೂ ವಿಜ್ಞಾನಿಗಳು ಎಚ್ಚರಿಕೆ ನೀಡಿದ ಬೆನ್ನಲೇ ನಗರದ ತೆಂಕಿಲ ದರ್ಖಾಸು ಪ್ರದೇಶದ 11 ಕುಟುಂಬಗಳನ್ನು ಪುತ್ತೂರು ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ ಅವರ ಸೂಚನೆಯಂತೆ ಸ್ಥಳಾಂತರಿಸಲಾಗಿದೆ.

ತೆಂಕಿಲ ದರ್ಖಾಸು ಪ್ರದೇಶಕ್ಕೆ ಸಹಾಯಕ ಆಯುಕ್ತರು ಭೇಟಿ ನೀಡಿ, ಬಿರುಕು ಬಿಟ್ಟಿರುವ ಜಮೀನಿನ ಆಸುಪಾಸಿನ ಮನೆಗಳನ್ನು ಪರಿಶೀಲನೆ ನಡೆಸಿ, ಮಳೆ ಕಡಿಮೆಯಾಗುವ ತನಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಗರಸಭೆಗೆ ಸೂಚನೆ ನೀಡಿದ್ದರು.

ಇಂದಿರಾ ಕ್ಯಾಂಟೀನ್‌ ಆಹಾರ
ತೆಂಕಿಲ ದರ್ಖಾಸು ಪರಿಸರದ ಮೂರು ಕುಟುಂಬಗಳಿಗೆ ನಗರಸಭೆಯ ಸಮುದಾಯ ಭವನದಲ್ಲಿ ವಸತಿ ಮತ್ತು ಆಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದು ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ತಿಳಿಸಿದ್ದಾರೆ. ಗಂಗಾಧರ, ಮಾಲಿನಿ ಹಾಗೂ ಸುರೇಶ್‌ ಕುಟುಂಬದ 13 ಮಂದಿ ಸಮುದಾಯ ಭವನದಲ್ಲಿ ಆಶ್ರಯ ಪಡೆದಿದ್ದಾರೆ.

ಗುರುವ ಅವರ ಕುಟುಂಬದ ಸದಸ್ಯರು ಮಿತ್ತೂರಿನ ಸಂಬಂಧಿಕರ ಮನೆಗೆ, ಪೂವಪ್ಪ ಅವರ ಕುಟುಂಬ ನಿಡ³ಳ್ಳಿಯಲ್ಲಿನ ಸಂಬಂಧಿಕರ ಮನೆಗೆ, ಸೇಸಪ್ಪ ಗೌಡರ ಕುಟುಂಬ ನಗರದ ಕಮ್ನಾರುನಲ್ಲಿರುವ ಸಂಬಂಧಿಕರ ಮನೆಗೆ, ಶ್ರೀಧರ ನಾಯ್ಕ ಅವರ ಕುಟುಂಬ ತೆಂಕಿಲ ಬೈಪಾಸ್‌ನ ಸಂಬಂಧಿಕರ ಮನೆಗೆ ತೆರಳಿ ಆಶ್ರಯ ಪಡೆದಿವೆ. ನಿವಾಸಿಗಳನ್ನು ನಗರಸಭೆ ವಾಹನದಲ್ಲಿ ಅವರ ಸಂಬಂಧಿಕರ ಮನೆಗೆ ಕಳುಹಿಸಿಕೊಡಲಾಯಿತು.

ಉಪಾಹಾರ ವ್ಯವಸ್ಥೆ
ಸಮುದಾಯ ಭವನಕ್ಕೆ ಸ್ಥಳಾಂತರಗೊಂಡಿರುವ ಕುಟುಂಬದ ಶಾಲಾ ಮಕ್ಕಳು ಶಾಲೆಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಉಪಾಹಾರ ಸಿದ್ಧಪಡಿಸಿ ಬುತ್ತಿಗಳಿಗೆ ಹಾಕಿ ನೀಡಲಾಗಿದೆ. ಮಕ್ಕಳು ಶಾಲಾ ಹಾಜರಾತಿಯಿಂದ ತಪ್ಪಿಸಿಕೊಳ್ಳದಂತೆ ನಗರಸಭೆ ಈ ಕ್ರಮ ಕೈಗೊಂಡಿದೆ.

ತೆಂಕಿಲದಲ್ಲಿ ಗುಡ್ಡ ಬಿರುಕು ಬಿಟ್ಟ ಸ್ಥಳ ಅಪಾಯಕಾರಿ ಹಂತದಲ್ಲಿ ಇರುವುದು ಮೇಲ್ನೋಟಕ್ಕೆ ಕಂಡಿದೆ. ಸುರಕ್ಷತೆ ದೃಷ್ಟಿಯಿಂದ ನಿವಾಸಿಗಳನ್ನು ಸ್ಥಳಾಂತರಿಸಿದ್ದು, ಸ್ಥಳೀಯಾಡಳಿತ ಮೂಲಕ ನಗರದ ಸಮುದಾಯ ಭವನದಲ್ಲಿ ವಸತಿ, ಊಟೋಪಹಾರ ಒದಗಿಸಲಾಗಿದೆ. ಆರೋಗ್ಯದ ಕಡೆಗೂ ಗಮನಹರಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ನಗರದ ಸಮುದಾಯ ಭವನಕ್ಕೆ ಆ. 13ರಂದು ಭೇಟಿ ನೀಡಿದ ಅವರು ನಿವಾಸಿಗಳ ಆರೋಗ್ಯ ಮತ್ತು ಸ್ಥಳದ ಕುರಿತು ಮಾಹಿತಿ ಪಡೆದು ಬಳಿಕ ಮಾತನಾಡಿದರು.

ಶಾಶ್ವತ ವ್ಯವಸ್ಥೆಗೆ ಕ್ರಮ
ಕೆಲವರು ಸಂಬಂಧಿಕರ ಮನೆಯ ಆಶ್ರಯ ಪಡೆದಿದ್ದಾರೆ. ಮಳೆ ಇಳಿಮುಖವಾದ ಬಳಿಕ ಸ್ಥಳದ ವಸ್ತುಸ್ಥಿತಿ ಪರಿಶೀಲಿಸಿ ವಾಸಸ್ಥಳಕ್ಕೆ ಮರಳುವ ಬಗ್ಗೆ ಯೋಚಿಸಲಾಗುವುದು. ಅಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದ್ದಲ್ಲಿ ಕುಟುಂಬಗಳಿಗೆ ಶಾಶ್ವತ ಬದಲಿ ವ್ಯವಸ್ಥೆ ಕಲ್ಪಿಸುವುದಾಗಿ ಶಾಸಕ ಸಂಜೀವ ಮಠಂದೂರು ಭರವಸೆ ನೀಡಿದ್ದಾರೆ.

ಸ್ಥಳಾಂತರಕ್ಕೆ ನಿರಾಕರಣೆ
ಗುಡ್ಡ ಬಿರುಕು ಬಿಟ್ಟು ಆತಂಕದ ಸ್ಥಿತಿಯಲ್ಲಿರುವ ತೆಂಕಿಲ ದರ್ಖಾಸು ಪ್ರದೇಶದಲ್ಲಿ ವಾಸವಾಗಿರುವ 10 ಕುಟುಂಬಗಳ ಸದಸ್ಯರು ಮನೆ ಬಿಟ್ಟು ಸ್ಥಳಾಂತರಗೊಳ್ಳಲು ನಿರಾಕರಿಸಿದರು. ಮನೆಗಳಿಗೆ ಏನೂ ಆಗುವುದಿಲ್ಲ. ನಿಮ್ಮ ಸುರಕ್ಷತೆಗಾಗಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗುವುದು ಎಂದು ಸಹಾಯಕ ಆಯುಕ್ತರು ನಿವಾಸಿಗಳ ಮನವೊಲಿಸಿದರು. ಮುಂದಿನ ವ್ಯವಸ್ಥೆಗಳನ್ನು ಸರಕಾರಿ ಮಟ್ಟದಲ್ಲಿ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ನಿವಾಸಿಗಳು ಸ್ಥಳಾಂತರವಾಗಲು ಒಪ್ಪಿಗೆ ನೀಡಿದರು.

ಸಮುದಾಯ ಭವನದಲ್ಲೇ ಓದು, ಅಭ್ಯಾಸ
ಒಂದು ವಾರದ ಬಳಿಕ ಶಾಲೆಗಳು ಪುನಾರಂಭವಾದ ಹಿನ್ನೆಲೆಯಲ್ಲಿ ಸಮುದಾಯ ಭವನದಲ್ಲಿರುವ ಕುಟುಂಬಗಳ ಮಕ್ಕಳು ಸೋಮವಾರ ರಾತ್ರಿ ಅಲ್ಲೇ ಓದು, ಅಭ್ಯಾಸ ಪ್ರಕ್ರಿಯೆ ನಡೆಸಿದ್ದು ಕಂಡು ಬಂತು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.