ಬೆಳ್ತಂಗಡಿಯನ್ನು ದೇಶಕ್ಕೆ ಮಾದರಿ ತಾಲೂಕು ಮಾಡುವುದೇ ಗುರಿ: ಪೂಂಜ

ಮಡಂತ್ಯಾರ್‌, ನಡ, ಕಲ್ಲೇರಿಯಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಭೆ

Team Udayavani, May 5, 2023, 6:12 PM IST

1-sd-sad

ಬೆಳ್ತಂಗಡಿ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ನೆರೆ ಬಂದಾಗ, ಕೊರೊನಾ ಸಂದರ್ಭದಲ್ಲಿ ನೊಂದವರಿಗೆ ಹೃದಯಪೂರ್ವಕವಾಗಿ ನೆರವಾಗಿದ್ದನ್ನು ಇಂದಿಗೂ ಅವರು ಸ್ಮರಿಸುತ್ತಿರುವುದು ನನಗೆ ಸಾರ್ಥಕತೆ ತಂದಿದೆ. ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ ಕಾಲೇಜು ಕಟ್ಟಡ, ಗ್ರಂಥಾಲಯ ನಿರ್ಮಾಣ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ಮಾಣ ಸೇರಿದಂತೆ ದಾಖಲೆಯಾಗಿ 3500 ಕೋಟಿ ರೂ. ಅನುದಾನ ತಂದಿದ್ದು ಮುಂದೆ ಎರಡನೇ ಬಾರಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದರೆ ತಾಲೂಕನ್ನು ದೇಶಕ್ಕೆ ಮಾದರಿ ತಾಲೂಕಾಗಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಮಡಂತ್ಯಾರ್‌, ನಡ, ಕಲ್ಲೇರಿಯಲ್ಲಿ ಗುರುವಾರ ಚುನಾವಣ ಬಹಿರಂಗ ಪ್ರಚಾರ ಸಭೆ ನಡೆಸಿ ತಾಲೂಕಿನಲ್ಲಿ ತನ್ನ ಅವಧಿಯಲ್ಲಿ ಆದ ಅಭಿವೃದ್ಧಿ ವಿಚಾರ ಮುಂದಿಟ್ಟು ಜನರಲ್ಲಿ ಮತ ಯಾಚಿಸಿದರು.

ಮುಂದಿನ ಎರಡು ವರ್ಷದಲ್ಲಿ ತಾಲೂಕಿನಲ್ಲಿ ಯಾವುದೇ ಮಣ್ಣಿನ ರಸ್ತೆ ಇಲ್ಲದ ರೀತಿಯಲ್ಲಿ ರಸ್ತೆಗಳ ಅಭಿವೃದ್ಧಿ ಮಾಡುವೆ. ತಾಲೂಕಿನ ವಿದ್ಯಾವಂತ ಯುವಕರು ದೂರದ ಊರಿಗೆ ಉದ್ಯೋಗಕ್ಕೆ ವಲಸೆ ಹೋಗದೆ ಸ್ಥಳೀಯವಾಗಿ ಉದ್ಯೋಗ ಸಿಗುವ ನಿಟ್ಟಿನಲ್ಲಿ ಉಜಿರೆಯಲ್ಲಿ 108 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಲಯ ಪ್ರಾರಂಭಿಸಿ ವಿವಿಧ ಕೈಗಾರಿಕೆ ಆರಂಭಿಸಲಾಗುವುದು.

ತಾಲೂಕಿನಲ್ಲಿ ಶಾಂತಿ ಸಾಮರಸ್ಯ ಬೆಳೆಯುವ ರೀತಿಯಲ್ಲಿ ಎಲ್ಲ ಸಮಾಜವನ್ನು ಸಮಾನ ರೀತಿಯಲ್ಲಿ ಕಾಣುತ್ತಾ ಎಲ್ಲಾ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ರಾಜ್ಯ ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಮಾತನಾಡಿ, ಕಳೆದ ಬಾರಿ ಹರೀಶ್‌ ಪೂಂಜರನ್ನು ಶಾಸಕರನ್ನಾಗಿ ಮಾಡಿದ ಫಲ ತಾಲೂಕಿನ ಜನ ಅನುಭವಿಸುತ್ತಿದ್ದಾರೆ. ರಾಜ್ಯಕ್ಕೆ ಮಾದರಿ 3,500 ಕೋಟಿ ರೂ.ಅನುದಾನ ತಂದವರನ್ನು ಮತ್ತೂಮ್ಮೆ ಶಾಸಕರನ್ನಾಗಿ ಮಾಡಿದರೆ 7,000 ಕೋಟಿ ರೂ.ಗೂ ಅಧಿಕ ಅನುದಾನ ತಂದು ತಾಲೂಕನ್ನು ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪಡಿಸಲಿದ್ದಾರೆ ಎಂದರು.

ಕಾಮಿಡಿ ಕಿಲಾಡಿ ಖ್ಯಾತಿಯ ಅನಿಶ್‌ ವೇಣೂರು, ಹಿತೇಶ್‌ ಕಾಪಿನಡ್ಕ ಮಾತನಾಡಿದರು. ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್‌ ಗೌಡ, ಶ್ರೀನಿವಾಸ್‌ ರಾವ್‌, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಶಶಿಪ್ರಭಾ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮಚ್ಚಿನ ಗ್ರಾ.ಪಂ. ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಎಪಿಎಂಸಿ ಮಾಜಿ ಸದಸ್ಯ ಸೆಲೆಸ್ಟೀನ್‌, ಅಭ್ಯರ್ಥಿ ಪ್ರಮುಖ್‌ ಜಯಾನಂದ್‌ ಗೌಡ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಾವೋದರ ಗೌಡ, ಹಿರಿಯರಾದ ದಾಮೋದರ ಸಾಲಿಯಾನ್‌, ಪದ್ಮನಾಭ ಅರ್ಕಜೆ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನ ಕಾರ್ಯಕರ್ತರು ಉಪಸ್ಥಿತರಿದ್ದರು. ವಸಂತ ಮರಕಡ ಪ್ರಾಸ್ತಾವಿಸಿ ಮಾತನಾಡಿದರು.

ಗುರುವಾರ ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು, ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.