ಅಣೆಕಟ್ಟು ದುರಸ್ತಿ ಕಾಮಗಾರಿ ಬಹುತೇಕ ಪೂರ್ಣ
Team Udayavani, May 21, 2020, 5:51 AM IST
ಮುಂಡಾಜೆ: ಬೆಳ್ತಂಗಡಿ ತಾ|ನ ಕಲ್ಮಂಜ ಗ್ರಾ.ಪಂ. ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನೇತ್ರಾವತಿ ನದಿಗೆ ಕಾಯರ್ತೋಡಿ ವಾಳ್ಯಸ್ಥರು ಕಟ್ಟುವ ಕೃಷಿ ನೀರಿನ ಕಟ್ಟದ ಅಣೆಕಟ್ಟು ಹಾಗೂ ನೀರು ಹರಿಯುವ ಕಾಲುವೆಗಳು ಕಳೆದ ಮಳೆಗಾಲದ ಭೀಕರ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದ್ದವು. ಸುಮಾರು 125 ಮೀ. ಉದ್ದದ ನೀರಿನ ಕಾಲುವೆ ಸಂಪೂರ್ಣ ಕೊಚ್ಚಿ ಹೋಗಿತ್ತು.
ಈ ವರ್ಷ ಬೇಸಗೆಯಲ್ಲಿ ಕಾಯರ್ತೋಡಿ ವಾಳ್ಯಸ್ಥರು ನೀರಿನ ಕಟ್ಟ ಹಾಕಿದ್ದರೂ ಕಾಲುವೆ ಇಲ್ಲದ ಕಾರಣ ಕೃಷಿಗೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಈ ಪ್ರದೇಶದ ಕೃಷಿಕರಿಗೆ ನೀರಿನ ಸಮಸ್ಯೆ ತೀವ್ರವಾಗಿತ್ತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಯತ್ನದ ಫಲವಾಗಿ ಅಣೆಕಟ್ಟು ಹಾಗೂ ನೀರಿನ ಕಾಲುವೆ ದುರಸ್ತಿಗೆ ಸಣ್ಣ ನೀರಾವರಿ ಇಲಾಖೆಯಿಂದ 48 ಲಕ್ಷ ರೂ. ಕಾಮಗಾರಿಗೆ ಅನುದಾನ ಬಿಡುಗಡೆಗೊಂಡಿತ್ತು. ಇದೀಗ ನೀರಿನ ಅಣೆಕಟ್ಟು ಮತ್ತು ಕಾಲುವೆ ಕೆಲಸ ಬಹುತೇಕ ಪೂರ್ಣಗೊಂಡಿದೆ. ಇನ್ನು ಕಾಯರ್ತೋಡಿಗೆ ನೀರು ಹರಿಸುವ ಕಾಲುವೆಯ ಗೇಟ್ ದುರಸ್ತಿಯ ಕಾಮಗಾರಿ ಮಾತ್ರ ಉಳಿದಿದೆ, ಅದು ಕೂಡ ಸದ್ಯವೇ ಪೂರ್ಣಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ