ಸೊರಗಿದ ಕಿಂಡಿ ಅಣೆಕಟ್ಟಿಗೆ ಕಾಯಕಲ್ಪ


Team Udayavani, Jun 2, 2019, 6:00 AM IST

c-15

ನರಿಮೊಗರು: ಮುಂಡೂರು ಗ್ರಾ. ಪಂ. ವ್ಯಾಪ್ತಿಯ ಸರ್ವೆ ಗ್ರಾಮದ ಸೊರಕೆಯಲ್ಲಿ 20 ವರ್ಷಗಳ ಹಿಂದೆ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಾಣವಾಗಿದ್ದ ಕಿಂಡಿ ಅಣೆಕಟ್ಟಿಗೆ ಅಂತೂ ದುರಸ್ತಿ ಭಾಗ್ಯ ಒದಗಿದೆ. ಇಲಾಖೆಯ ನಿರ್ಲಕ್ಷ್ಯದಿಂದ ಕಿಂಡಿ ಅಣೆಕಟ್ಟು ಉಪಯೋಗ ಶೂನ್ಯವಾಗಿದ್ದರ ಕುರಿತು “ಉದಯವಾಣಿ’ ಸುದಿನ ಫೆ. 7ರಂದು ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಸಣ್ಣ ನೀರಾವರಿ ಇಲಾಖೆಯ ಮೂಲಕ ಕಿಂಡಿ ಅಣೆಕಟ್ಟಿನ ದುರಸ್ತಿಯಾಗಿದೆ. ಜನತೆಯ ಬಹು ವರ್ಷಗಳ ಬೇಡಿಕೆಯೊಂದು ಈಡೇರಿದಂತಾಗಿದೆ.

17 ವರ್ಷ ನಿರ್ವಹಣೆಯಿಲ್ಲ
ಸುಮಾರು 35 ಮೀ. ಅಗಲ ಮತ್ತು 2 ಮೀಟರ್‌ ಎತ್ತರವಿರುವ ಈ ಅಣೆಕಟ್ಟು ಪ್ರಸ್ತುತ ಸುಮಾರು 2 ಕೋಟಿ ರೂ. ವೆಚ್ಚದ ಯೋಜನೆಯಾಗಿದ್ದು, ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿತ್ತು. ನಿರ್ಮಾಣಗೊಂಡ ಮೂರು ವರ್ಷಗಳ ಕಾಲ ಹಲಗೆ ಹಾಕಲು ಆಸಕ್ತಿ ತೋರಿದ್ದ ಇಲಾಖೆ ನಿರ್ವಹಣ ವೆಚ್ಚ ಭರಿಸಿತ್ತು. ಅನಂತರ 17 ವರ್ಷಗಳ ಕಾಲ ಅಣೆಕಟ್ಟನ್ನು ನಿರ್ವಹಿಸುವ ಗೋಜಿಗೆ ಹೋಗಿರಲಿಲ್ಲ. ಈ ನಡುವೆ ಅಣೆಕಟ್ಟೆಯ ಒಂದು ಬದಿಯ ತಡೆಗೋಡೆ ಕುಸಿದು ಹೋಗಿದ್ದು ಹಲಗೆಗಳು ಶಿಥಿಲಗೊಂಡಿತ್ತು.

ಮೂರು ವರ್ಷಗಳಿಂದ ಕಿಂಡಿ ಅಣೆಕಟ್ಟಿನ ಫಲಾನುಭವಿಗಳಲ್ಲಿ ಒಬ್ಬರಾದ ಜಿ.ಪಂ. ಮಾಜಿ ಸದಸ್ಯ ಸುರೇಶ್‌ ಕುಮಾರ್‌ ಸೊರಕೆ ಅವರು ವರ್ಷಕ್ಕೆ 25 ಸಾವಿರ ರೂ. ಖರ್ಚು ಮಾಡಿ ಶಿಥಿಲಗೊಂಡಿರುವ ಹಲಗೆಗೆ ಟಾರ್ಪಲ್‌ ಹೊದಿಸಿ ಹಲಗೆ ಅಳವಡಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಹಲಗೆಗಳು ಶಿಥಿಲಗೊಂಡಿದೆ ಹಾಗೂ ಹೊಳೆಯ ಒಂದು ಬದಿಯಲ್ಲಿ ತಡೆಗೋಡೆ ಇಲ್ಲದ ಕಾರಣ ಗರಿಷ್ಠ ಸಾಮರ್ಥ್ಯದ ತನಕ ನೀರು ಶೇಖರಣೆಯಾಗುತ್ತಿರಲಿಲ್ಲ.

ಈ ಕುರಿತು ಹಲವು ವರ್ಷಗಳಿಂದ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡುತ್ತಾ ಬಂದಿರುವ ಸುರೇಶ್‌ ಕುಮಾರ್‌ ಸೊರಕೆ ವಿನೂತನ ಮಾದರಿಯ ಹಲಗೆಗಳನ್ನು ನೀಡುವಂತೆ, ಕಾಂಕ್ರೀಟ್‌ ತಡೆಗೋಡೆ ನಿರ್ಮಾಣ ಹಾಗೂ ಇತರ ದುರಸ್ತಿ ಕಾರ್ಯಗಳನ್ನು ಮಾಡುವಂತೆಯೂ ಮನವಿ ಮಾಡಿದ್ದರು. ತಡೆಗೋಡೆ ನಿರ್ಮಾಣಕ್ಕೆ 2017ರಲ್ಲಿ ಗುತ್ತಿಗೆ ಪಡೆದುಕೊಂಡವರು ಕಾಮಗಾರಿಯನ್ನು ಪ್ರಾರಂಭಿಸಿರಲಿಲ್ಲ. ಈಗ ಕಿಂಡಿ ಅಣೆಕಟ್ಟಿನ ದುರಸ್ತಿ ನಡೆಯುತ್ತಿದೆ.

ಏನು ಪ್ರಯೋಜನ?
ಈ ಕಿಂಡಿ ಅಣೆಕಟ್ಟಿನಲ್ಲಿ ಗರಿಷ್ಠ ಸಾಮರ್ಥ್ಯದ ವರೆಗೆ ನೀರು ನಿಂತರೆ ಒಲೆಮುಂಡೋವು ತನಕ 2 ಕಿ.ಮೀ. ವರೆಗೆ ನೀರು ಶೇಖರಿಸಿಡುವ ಅವಕಾಶ ಇದ್ದು, ಸರ್ವೆ ಹಾಗೂ ಸವಣೂರು ಗ್ರಾ.ಪಂ. ವ್ಯಾಪ್ತಿಯ ಪುಣcಪ್ಪಾಡಿ ಗ್ರಾಮಗಳ ಅಂತರ್ಜಲ ಮಟ್ಟ ಸುಧಾರಣೆ ಆಗುವುದರಲ್ಲಿ ಸಂದೇಹವಿಲ್ಲ.

ಹಲವರಿಗೆ ಪ್ರಯೋಜನ
ಸರ್ವೆ, ಪುಣcಪ್ಪಾಡಿ ಗ್ರಾಮಗಳ ಅಂತರ್ಜಲ ವೃದ್ಧಿಗಾಗಿ ನಾನು ಜಿ.ಪಂ. ಸದಸ್ಯನಾಗಿದ್ದಾಗ ಅನುಷ್ಠಾನ ಗೊಂಡ ಈ ಯೋಜನೆಯನ್ನು ಉಳಿಸಿಕೊಳ್ಳಬೇಕೆಂಬ ಆಸಕ್ತಿಯಿಂದ ಆಣೆ ಕಟ್ಟೆಯ ನಿರ್ವಹಣೆ ಮಾಡುತ್ತಿದ್ದೇನೆ. ಈಗ ಇಲಾಖೆಯ ವತಿ ಯಿಂದಲೇ ದುರಸ್ತಿ ನಡೆಯುತ್ತಿದೆ. ಇದರಿಂದ ಹಲವರಿಗೆ ಪ್ರಯೋಜನವಾಗಲಿದೆ.
– ಸುರೇಶ್‌ ಕುಮಾರ್‌ ಸೊರಕೆ ಜಿ.ಪಂ. ಮಾಜಿ ಸದಸ್ಯರು

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.