ಅಪಾಯ ಸಂಭವಿಸುವ ಮೊದಲು ತೆರವಾಗಬೇಕಿದೆ ಶಿಥಿಲ ಕಟ್ಟಡ


Team Udayavani, Jul 16, 2021, 6:00 AM IST

ಅಪಾಯ ಸಂಭವಿಸುವ ಮೊದಲು ತೆರವಾಗಬೇಕಿದೆ ಶಿಥಿಲ ಕಟ್ಟಡ

ಕಡಬ: ಸುಮಾರು 96 ವರ್ಷ ಗಳ ಇತಿಹಾಸವನ್ನು ಹೊಂದಿರುವ ಕಡ‌ಬ ಪೇಟೆಯ ಹೃದಯಭಾಗದಲ್ಲಿರುವ ಸರಕಾರಿ ಪ್ರವಾಸಿ ಬಂಗಲೆ (ನಿರೀಕ್ಷಣ ಮಂದಿರ) ಶಿಥಿಲಗೊಂಡು ಇತಿಹಾಸದ ಪುಟ ಸೇರುವ ಕಾಲ ಸನ್ನಿಹಿತವಾಗಿದೆ.

ಹಳೆಯ ಪ್ರವಾಸಿ ಬಂಗಲೆಯನ್ನು ದುರಸ್ತಿಗೊಳಿಸುವ ಸಲುವಾಗಿ 2 ವರ್ಷ ಗಳ ಹಿಂದೆ ಪರಿಶೀಲನೆಗೆ ಆಗಮಿಸಿದ್ದ ಜಿ.ಪಂ. ಅಧಿಕಾರಿಗಳು ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ದುರಸ್ತಿಗೆ ಯೋಗ್ಯ ವಾಗಿಲ್ಲ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಇದುವರೆಗೆ ಕಾರ್ಯಗತವಾಗಿಲ್ಲ. ಕಟ್ಟಡದ ಹಿಂಭಾಗ ಭಾಗಶಃ ಕುಸಿದಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಪೂರ್ತಿಯಾಗಿ ಧರಾಶಾಯಿಯಾಗುವ ಸಾಧ್ಯತೆಗಳಿವೆ. ಭಿಕ್ಷುಕರು ಹಾಗೂ ಅಲೆಮಾರಿಗಳು ಈ ಶಿಥಿಲ ಕಟ್ಟಡದಲ್ಲಿ ಆಶ್ರಯ ಪಡೆಯುವುದರಿಂದ ಕಟ್ಟಡ ಕುಸಿದರೆ ಜೀವಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಅಪಾಯ ಸಂಭವಿಸುವ ಮೊದಲು ಈ ಶಿಥಿಲ ಕಟ್ಟಡವನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್‌ ಭಂಡಾರಿ ಈ ಹಿಂದೆ ತಾ.ಪಂ.ನ ನಿರ್ವಹಣೆಯಲ್ಲಿದ್ದ ಈ ಕಟ್ಟಡದ ಸ್ಥಿತಿಗತಿಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಚಟುವಟಿಕೆಯ ತಾಣವಾಗಿತ್ತು :

ಒಂದು ಕಾಲದಲ್ಲಿ ಅತ್ಯಂತ ಚಟುವಟಿಕೆಯ ತಾಣವಾಗಿದ್ದ ಈ ಪ್ರವಾಸಿ ಬಂಗಲೆ ಇದೀಗ ಯಾವುದೇ ಚಟುವಟಿಕೆಗಳಿಲ್ಲದೆ ಅನಾಥವಾಗಿದೆ. ಕಡಬದ ಕೊಡುಗೈ ದಾನಿ ಎಂದೇ ಹೆಸರು ಪಡೆದಿರುವ ದಿ|ಮೇಲೂರು ಚಂದಯ್ಯ ಶೆಟ್ಟಿ ಅವರು 1925ನೇ ಇಸವಿಯಲ್ಲಿ ಈ ಕಟ್ಟಡವನ್ನು ನಿರ್ಮಿಸಿಕೊಟ್ಟಿrರುವ ಬಗ್ಗೆ ಲಭ್ಯ ದಾಖಲೆಗಳಲ್ಲಿ ಉಲ್ಲೇಖವಿದೆ. ಬಂಗಲೆ ಇರುವ ಜಾಗ ಸೇರಿದಂತೆ ಒಟ್ಟು 2.29 ಎಕರೆ ಜಮೀನನ್ನು ಅವರು ಅಂದಿನ ಕಾಲದಲ್ಲಿ ಸರಕಾರಿ ಆಸ್ಪತ್ರೆಗೆ ದಾನವಾಗಿ ಕೊಟ್ಟಿದ್ದರು. ಸಮುದಾಯ ಆಸ್ಪತ್ರೆಯ ಆವರಣದಲ್ಲಿರುವ ಈ ಕಟ್ಟಡ ಆರಂಭದಲ್ಲಿ ವೈದ್ಯಾಧಿಕಾರಿಗಳ ವಸತಿಗೃಹವಾಗಿತ್ತು. ಪುತ್ತೂರು ಬಿಡಿಒ ಕಚೇರಿ ಇದರ ನಿರ್ವಹಣೆಯನ್ನು ನೋಡಿಕೊಳ್ಳುತ್ತಿತ್ತು.

ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿಸಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಲ್ಲಿ ತಾ.ಪಂ. ಹಾಗೂ ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತುಕೊಂಡಿತ್ತಾದರೂ ಈಗ ಈ ಕಟ್ಟಡವನ್ನು ಯಾರೂ ಕೇಳು ವವರಿಲ್ಲದಂತಾಗಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಜಮೀನನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿದೆ. ಮುಂದೆ ಸಮುದಾಯ ಆಸ್ಪತ್ರೆಯು ತಾಲೂಕು ಆಸ್ಪತ್ರೆಯಾಗಿ ಉನ್ನತೀಕರಣವಾಗಬೇಕಿರುವುದರಿಂದ ಹೆಚ್ಚಿನ ಜಾಗದ ಅಗತ್ಯವಿರುವುದರಿಂದ ಸಂಬಂಧಪಟ್ಟವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಕಡಬದ ಹಳೆಸ್ಟೇಶನ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಗುರುತಿಸಲಾದ ಜಮೀನಿನಲ್ಲಿ ಹೊಸದಾಗಿ ಸುಸಜ್ಜಿತ ನಿರೀಕ್ಷಣ ಮಂದಿರ ನಿರ್ಮಿಸಲಾಗುವುದು. ಕಟ್ಟಡದ ವಿನ್ಯಾಸ ನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಕಡಬ ಪೇಟೆಯಲ್ಲಿರುವ ಹಳೆಯ ಪ್ರವಾಸಿ ಬಂಗಲೆ‌ಯ ಶಿಥಿಲ ಕಟ್ಟಡವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು.ಎಸ್‌.ಅಂಗಾರ, ಮೀನುಗಾರಿಕೆ ಮತ್ತು ಬಂದರು ಸಚಿವರು

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.