ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ


Team Udayavani, Jan 19, 2021, 2:00 AM IST

ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ

ಬಂಟ್ವಾಳ: ಹಲವು ಕಡೆ ಗುಡ್ಡ ಕುಸಿತದ ಘಟನೆಗಳು ನಡೆದು ಜೀವ ಹಾನಿ, ಆಸ್ತಿಪಾಸ್ತಿ ಹಾನಿಯ ಘಟನೆಗಳು ನಮ್ಮ ಕಣ್ಣ ಮುಂದಿದೆ. ಕೆಲವೊಂದಕ್ಕೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದೆ ಹಾಗಾಗುತ್ತದೆ. ಬಂಟ್ವಾಳ ಪುರಸಭೆ ವ್ಯಾಪ್ತಿಯ ಗೂಡಿನಬಳಿಯಲ್ಲೂ ಇಂತಹ ಗುಡ್ಡವೊಂದು ಅಪಾಯದ ಸ್ಥಿತಿಯ ಲ್ಲಿದ್ದು, ಸಂಬಂಧಪಟ್ಟವರು ಈಗಲೇ ಎಚ್ಚೆತ್ತು ಕೊಳ್ಳಬೇಕಿದೆ.

ಗೂಡಿನಬಳಿಯ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾದಲ್ಲಿ ಸ್ಥಳೀಯ ಮನೆಗಳಿಗೆ ಹಾನಿಯಾಗುವ ಜತೆಗೆ ರಸ್ತೆ ಸಂಪರ್ಕವೂ ಕಡಿತಗೊಳ್ಳುತ್ತದೆ. ಜತೆಗೆ ಪುರಸಭೆ ಹಲವು ವಾರ್ಡ್‌ಗಳ ನೂರಾರು ಮನೆಗಳಿಗೆ ನೀರಿನ ಸಂಪರ್ಕವೂ ಕಡಿತಗೊಳ್ಳುತ್ತದೆ. ಹೀಗಾಗಿ ಅಪಾಯ ಸಂಭವಿಸುವ ಮೊದಲು ಬೃಹತ್‌ ತಡೆಗೋಡೆ ನಿರ್ಮಾಣದ ಅಗತ್ಯವಿದೆ.

ಗುರುಪುರ ಘಟನೆ ನೆನಪು :

ಗೂಡಿನಬಳಿಯ ಅಪಾಯದ ಸ್ಥಿತಿ ಕಳೆದ ಮಳೆಗಾಲದಲ್ಲಿ ಗುರುಪುರ ಮಠದಗುಡ್ಡೆ (ಬಂಗ್ಲೆಗುಡ್ಡೆ)ಯಲ್ಲಿ ನಡೆದ ಘಟನೆಯನ್ನು ನೆನಪಿಸುತ್ತದೆ. ಗೂಡಿನ ಬಳಿಯ ಪ್ರದೇಶವೂ ಅದೇ ರೀತಿಯ ಜನ ವಸತಿಯ ಪ್ರದೇಶವಾಗಿದ್ದು, ಗುಡ್ಡದ ತಳಭಾಗದಲ್ಲಿ ಹಲವಾರು ಮನೆಗಳಿವೆ.

ಗುಡ್ಡೆ ಕುಸಿತ-ಗೋಣಿಚೀಲ ಪರಿಹಾರ :

ಗೂಡಿನಬಳಿಯಿಂದ ಎತ್ತರ ಪ್ರದೇಶ ದಲ್ಲಿರುವ ಮನೆಗಳು ಹಾಗೂ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪಕ್ಕದಲ್ಲೇ ಹತ್ತಾರು ಮನೆಗಳಿದ್ದು, ಒಂದು ವೇಳೆ ಈ ಗುಡ್ಡ ಕುಸಿದಲ್ಲಿ ಹತ್ತಾರು ಮನೆಗಳಿಗೆ ಹಾನಿಯಾಗಲಿದೆ. ಕಳೆದ ಕೆಲವು ತಿಂಗಳ ಹಿಂದೆ ಇಲ್ಲಿ ಗುಡ್ಡ ಕುಸಿತ ಉಂಟಾದಾಗ ತಹಶೀಲ್ದಾರ್‌ ಸೂಚನೆಯಂತೆ ಎಂಜಿನಿಯರ್‌ ಪರಿಶೀಲನೆ ನಡೆಸಿ ಮರಳು ತುಂಬಿದ ಗೋಣಿ ಚೀಲಗಳನ್ನು ಇರಿಸಲಾಗಿತ್ತು. ನೂರಾರು ಗೋಣಿಗಳನ್ನು ಒಂದರ ಮೇಲೊಂದರಂತೆ ಇಡಲಾಗಿದೆ. ಆದರೆ ಇದೀಗ ಬಿಸಿಲಿನ ತೀವ್ರತೆಗೆ ಗೋಣಿಗಳು ಹರಿದು ಮರಳು ಕೆಳಗೆ ಬೀಳುತ್ತಿದೆ. ಒಂದು ವೇಳೆ ಜೋರಾಗಿ ಮಳೆ ಬಂದು ನೀರು ಒಳ ನುಗ್ಗಿದರೆ ಗೋಣಿ ಚೀಲಗಳು ಕೂಡ ಕೆಳಗೆ ಬೀಳುವ ಸ್ಥಿತಿ ಇದೆ. ರಸ್ತೆಗೆ ತಾಗಿಕೊಂಡೇ ಗುಡ್ಡ ಕುಸಿದಿದ್ದು, ಇನ್ನು ಸ್ಪಲ್ಪ ಕುಸಿದರೂ, ಈ ಭಾಗಕ್ಕೆ ರಸ್ತೆ ಸಂಪರ್ಕ ಕಡಿತಗೊಳ್ಳಲಿದೆ. ಇಲ್ಲಿ 2 ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಎರಡೂ ಕಡೆಯೂ ಗೋಣಿ ಚೀಲಗಳನ್ನು ಇಡಲಾಗಿದೆ.

ಗುಡ್ಡ ಜರಿದರೆ ರಸ್ತೆ ಸಂಪರ್ಕ ಕಡಿತ :ವಾರ್ಡ್‌ಗಳಿಗೆ ನೀರು ಪೂರೈಸುವ ಟ್ಯಾಂಕ್‌ :

ಗೂಡಿನಬಳಿಯಲ್ಲಿ ಗುಡ್ಡದ ಮೇಲ್ಭಾಗದಲ್ಲಿ ಪುರಸಭೆಯ ಹಲವು ವಾರ್ಡ್‌ಗಳಿಗೆ ನೀರು ಪೂರೈಕೆ ಮಾಡುವ ಟ್ಯಾಂಕ್‌ ಇದ್ದು, ಟ್ಯಾಂಕ್‌ಗೆ ನೀರು ಪೂರೈಕೆ ಮಾಡುವ ಪೈಪ್‌ ಹಾಗೂ ಅದರಿಂದ ನೀರು ಪೂರೈಕೆಯಾಗುವ ಟ್ಯಾಂಕ್‌ ಇದೇ ರಸ್ತೆಯ ತಳಭಾಗದಲ್ಲಿದೆ. ಹೀಗಾಗಿ ಗುಡ್ಡ ಕುಸಿಯುವ ವೇಳೆ ಪೈಪ್‌ಲೈನ್‌ ಸಂಪರ್ಕ ಕಡಿತಗೊಂಡರೆ ಭಾರೀ ನಷ್ಟವಾಗಲಿದೆ. ಜತೆಗೆ ಹಲವು ತಿಂಗಳುಗಳ ಕಾಲ ನೀರು ಪೂರೈಕೆಗೂ ತೊಂದರೆ ಎದುರಾಗುವ ಆತಂಕವಿದೆ.

ದ.ಕ. ಜಿಲ್ಲಾಧಿಕಾರಿಗಳಿಂದ ಸಮಸ್ಯೆ ಕುರಿತು ಪರಿಶೀಲನೆಗೆ ಪುರಸಭೆಗೆ ಬಂದಿದೆ. ಅದಕ್ಕೆ ತಡೆಗೋಡೆ ಅಗತ್ಯವಾಗಿದ್ದು, ಹೆಚ್ಚಿನ ಅನುದಾನ ಬೇಕಾಗುತ್ತದೆ. ಆದರೆ ಪುರಸಭೆಯ ಅನುದಾನದಿಂದ ಅದು ಅಸಾಧ್ಯವಾಗಿದೆ. ಹೀಗಾಗಿ ಶಾಸಕರ ಮೂಲಕ ಸರಕಾರದಿಂದ ಅನುದಾನಕ್ಕಾಗಿ ಮನವಿ ಮಾಡಲಾಗುವುದು. ಸಾಮಾನ್ಯ ತಡೆಗೋಡೆಗಿಂತಲೂ ಹೆಚ್ಚು ಬಲಿಷ್ಠ ಇರುವ ತಡೆಗೋಡೆ ಬೇಕಾಗುತ್ತದೆ.-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಪುರಸಭೆ, ಬಂಟ್ವಾಳ.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.