ತೂಗುಯ್ನಾಲೆಯಲ್ಲಿ ಉಜಿರಡ್ಕ ನಿವಾಸಿಗಳ ಬದುಕು

ಮಳೆಗಾಲದಲ್ಲಿ 1 ಕಿ.ಮೀ. ದೂರಕ್ಕೆ 20 ಕಿ.ಮೀ. ಸುತ್ತು ಬಳಸಿ ಸಾಗಬೇಕು

Team Udayavani, Jun 18, 2019, 5:00 AM IST

t-21

ಸುಬ್ರಹ್ಮಣ್ಯ: ನೂರಾರು ಮನೆಗಳ ಜನರಿಗೆ ದಿನ ಸಂಚಾರಕ್ಕೆ ಈ ರಸ್ತೆ ಅವಲಂಬಿತವಾಗಿದೆ. ಬೇಸಗೆಯಲ್ಲಿ ತೊಂದರೆ ಇಲ್ಲ. ಮಳೆಗಾಲದಲ್ಲಿ ತಮ್ಮೂರಿನ ಮನೆಗಳಿಗೆ ತೆರಳಬೇಕಾದರೆ ರಸ್ತೆ ಮಧ್ಯೆ ಸಿಗುವ ಹೊಳೆ ದಾಟಬೇಕು. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ದಾಟಲು ಸಾಧ್ಯವಾಗದೆ ಸಂಚಾರ ಬಂದ್‌. ಹೀಗಾಗಿ ಇಲ್ಲಿನವರು ಸುತ್ತು ಬಳಸಿ ತೆರಳಬೇಕು.

ಇಂತಹ ಸಂಕಷ್ಟಗಳ ಸರಮಾಲೆ ಹೊತ್ತು ಮಳೆಗಾಲದ ಅವಧಿ ಕಳೆಯುವವರು ನಾಲ್ಕೂರು ಗ್ರಾಮದ ಉಜಿರಡ್ಕ ನಿವಾಸಿಗಳು. ತಮ್ಮೂರಿಗೆ ತೆರಳುವ ರಸ್ತೆ ಮಧ್ಯೆ ಹರಿಯುವ ಹೊಳೆಗೆ ಸೇತುವೆ ನಿರ್ಮಿಸಿ ಕೊಡುವಂತೆ ಅವರು ಬೇಡಿಕೆ ಇರಿಸಿ ದಶಕಗಳೇ ಕಳೆದಿವೆ. ಇದುವರೆಗೆ ಈಡೇರಿಲ್ಲ. ಭರವಸೆಗಳ ಮಹಾಪೂರವೇ ಹರಿದು ಬಂದಿದ್ದರೂ ಅವೆಲ್ಲವೂ ಇಲ್ಲಿ ಹುಸಿಯಾಗಿವೆ.

ಸುತ್ತು ಬಳಸಿ ಸಂಚಾರ
ಗುತ್ತಿಗಾರು ಗ್ರಾ.ಪಂ. ವ್ಯಾಪ್ತಿಯಲ್ಲಿದೆ ಉಜಿರಡ್ಕ ಪ್ರದೇಶ. ಇಲ್ಲಿ ದಶಕಗಳಿಂದ ಹಲವಾರು ಬಡ ಕುಟುಂಬಗಳು ವಾಸಿಸುತ್ತಿವೆ. ಪರಿಶಿಷ್ಟ ಜಾತಿ ಜತೆ ಇತರ ವರ್ಗದ ಕುಟುಂಬಗಳು ಇಲ್ಲಿವೆ.

ಕೂಲಿ ಕೆಲಸವೇ ಇವರಿಗೆ ಜೀವನಾಧಾರ. ದಿನ ನಿತ್ಯದ ವ್ಯಾವಹಾರಿಕ ಚಟುವಟಿಕೆಗಳಿಗೆ ಸಮೀಪದ ಯೇನೆಕಲ್ಲು, ಸುಬ್ರಹ್ಮಣ್ಯಕ್ಕೆ ತೆರಳಲು ಇಲ್ಲಿಯ ನಾಗರಿಕರು ಸೇತುವೆ ಇಲ್ಲದ ಕಾರಣ 1 ಕಿ.ಮೀ. ಸಂಚಾರಕ್ಕೆ ಸುತ್ತು ಬಳಸಿ 20 ಕಿ.ಮೀ. ದೂರವಾಗಿ ತೆರಳಬೇಕು.

ಮರದ ಸೇತುವೆಯೇ ಆಧಾರ
ನಿವಾಸಿಗಳು ತೆರಳುವ ರಸ್ತೆಗೆ ಅಡ್ಡಲಾಗಿ ಹರಿಯುವ ಕಲ್ಲಾಜೆ ಹೊಳೆ ದಾಟಬೇಕು. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುತ್ತದೆ. ಮಹಿಳೆಯರು, ಮಕ್ಕಳು, ವೃದ್ಧರು ಸಹಿತ ನಾಗರಿಕರು ಇಲ್ಲಿ ಸಂಚಾರದ ವೇಳೆ ನರಕಯಾತನೆ ಅನುಭವಿಸುತ್ತಾರೆ. ಸ್ಥಳೀಯರು ಸೇರಿಕೊಂಡು ಮಳೆಗಾಲದ ವೇಳೆ ಇಲ್ಲಿ ತಮ್ಮ ಅನುಕೂಲಕ್ಕಾಗಿ ತಾತ್ಕಾಲಿಕ ಮರದ ಸೇತುವೆ ನಿರ್ಮಿಸಿಕೊಳ್ಳುತ್ತಾರೆ. ಈ ಬಾರಿ ಅದೂ ಆಗಿಲ್ಲ. ಇಲ್ಲಿ ಸೇತುವೆ ನಿರ್ಮಾಣದ ಅಗತ್ಯವಿದೆ. ಇದರಿಂದ ಸುತ್ತು¤ ಬಳಸಿ ಸಾಗುವ ಸಂಕಟ ದೂರವಾಗುತ್ತದೆ. ಜತೆಗೆ ಸಮಯ ಉಳಿತಾಯವೂ ಆಗುತ್ತದೆ. ಮಳೆಗಾಲದಲ್ಲಿ ಮಕ್ಕಳು ಶಾಲೆಗೆ ತೆರಳುವಾಗ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಮರದ ತೂಗುಸೇತುವೆ ಮೇಲೆ ದಾಟುವ ಪ್ರಯತ್ನ ನಡೆಸಿ ಅನೇಕ ಸಂದರ್ಭ ಅನಾಹುತ ಸಂಭವಿಸಿದ್ದೂ ಉಂಟು.

ದೇಗುಲಕ್ಕೂ ಹತ್ತಿರ ದಾರಿ
ಮಂಜೇಶ್ವರ – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಯೇನೆಕಲ್ಲು ಬೂದಿಪಳ್ಳ ಎನ್ನುವಲ್ಲಿ ಬಲ ಭಾಗಕ್ಕೆ ರಸ್ತೆ ಕವಲೊಡೆಯುತ್ತದೆ. ಸೇತುವೆ ಆಗಬೇಕಿರುವ ರಸ್ತೆ ಮೂಲಕ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ತೆರಳಲು ಅನುಕೂಲವಿದೆ. ಐತಿಹಾಸಿಕ ಹಿನ್ನೆಲೆ ಹೊಂದಿದ ಈ ದೇವಸ್ಥಾನಕ್ಕೆ ಸುಬ್ರಹ್ಮಣ್ಯ, ಪಂಜ, ಯೇನೆಕಲ್ಲು, ಬಳ್ಪ, ಕಡಬ ಭಾಗದಿಂದ ಬರುವ ಭಕ್ತರಿಗೆ ವರ್ಷವಿಡೀ ತುಂಬಿ ಹರಿಯುವ ಕಲ್ಲಾಜೆ ಹೊಳೆ ಅಡ್ಡಿಯಾಗುತ್ತಿದೆ. ಹೀಗಾಗಿ ಸೇತುವೆ ನಿರ್ಮಾಣದ ಕೂಗು ಹಿಂದಿನಿಂದಲೇ ಇದೆ.

ಹೇಳಿದರೂ ಪ್ರಯೋಜನವಿಲ್ಲ
ಭರವಸೆ ನೀಡಿ ಸೇತುವೆ ನಿರ್ಮಾಣ ಕೈ ಬಿಡುತ್ತಿರುವುದು ಬೇಸರ ತಂದಿದೆ. ಇದರಿಂದ ನಾವು ವಂಚಿತರಾಗಿದ್ದೇವೆ. ಮಳೆಗಾಲದಲ್ಲಿ ನಾವು ತುಂಬಾ ತೊಂದರೆ ಅನುಭವಿಸುತ್ತಿರುತ್ತೇವೆ. ನಮ್ಮ ಕಷ್ಟ ಯಾರಲ್ಲಿ ಹೇಳಿದರೂ ಸುಖವಿಲ್ಲ ಎಂದು ಚಿನ್ನಮ್ಮ ಉಜಿರಡ್ಕ ತಿಳಿಸಿದ್ದಾರೆ.

ಓಡಾಡಿದ್ದೆ ಬಂತು
ಸೇತುವೆ ಇಲ್ಲದೆ ಇಲ್ಲಿಯ ನಿವಾಸಿ ಗಳು ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡಿದ್ದರು. ಪ್ರತಿ ಚುನಾವಣೆ ವೇಳೆ ಪಕ್ಷಗಳ ಮುಖಂಡರು ಭರವಸೆ ನೀಡಿದ್ದರು. ಸ್ಥಳೀಯರು ಬೆಂಗಳೂರಿಗೆ ತೆರಳಿ ಶಾಸಕರು, ಸಂಸದರು, ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಹತ್ತಾರು ಬಾರಿ ಓಡಾಟ ನಡೆಸಿದ್ದರೂ, ಸೇತುವೆ ಕನಸು ಮಾತ್ರ.

ಗಮನಕ್ಕೆ ತಂದಿದ್ದೇವೆ
ಅಲ್ಲಿ ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನದ ಆವಶ್ಯಕತೆ ಇದೆ. ಗ್ರಾ.ಪಂ. ಕಡೆಯಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾ ಗದು. ಶಾಸಕ, ಸಂಸದರ ಗಮನಕ್ಕೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಅನುದಾನ ಬರಬಹುದೆನ್ನುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.
– ಅಚ್ಯುತ ಗುತ್ತಿಗಾರು
ಅಧ್ಯಕ್ಷರು, ಗುತ್ತಿಗಾರು ಗ್ರಾ.ಪಂ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.