ದ.ಕ.ಕ್ಕೆ ಕಡಿಮೆ, ಉಡುಪಿಗೆ ಹೆಚ್ಚು ಪರಿಹಾರ ಮಿತಿ!

ಬೆಳೆ ವಿಮೆ ನೋಂದಣಿ ಜು.10ರ ವರೆಗೆ ವಿಸ್ತರಣೆ

Team Udayavani, Jul 3, 2020, 5:53 AM IST

ದ.ಕ.ಕ್ಕೆ ಕಡಿಮೆ, ಉಡುಪಿಗೆ ಹೆಚ್ಚು ಪರಿಹಾರ ಮಿತಿ!

ಬಂಟ್ವಾಳ/ಕುಂದಾಪುರ: ಕೇಂದ್ರ ಜಾರಿಗೆ ತಂದಿ ರುವ ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಿ ಪರಿಹಾರ ಪಡೆಯಲು ದ.ಕ. ಜಿಲ್ಲೆಗೆ ಒಂದು, ಉಡುಪಿಗೆ ಮತ್ತೂಂದು ಮಿತಿ! ಇದು ಪರಿಹಾರ ಮೊತ್ತದ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕ ಮೂಡಿದೆ.

ದ.ಕ., ಮಂಡ್ಯ, ರಾಯಚೂರು, ಶಿವಮೊಗ್ಗ, ಬಾಗಲಕೋಟೆಯನ್ನು ನೀರಾವರಿ ಜಿಲ್ಲೆಗಳೆಂದು ಗುರುತಿಸಲಾಗಿದ್ದು ಶೇ. 25, ಇತರ ಜಿಲ್ಲೆಗಳಿಗೆ ಶೇ. 30 ಪರಿಹಾರ ಮಿತಿ ನಿಗದಿಪಡಿಸಲಾಗಿದೆ. ಈ ಐದು ಜಿಲ್ಲೆಗಳಿಗೆ ಮೂರು ವರ್ಷಗಳ ಅವಧಿಗೆ ವಿಮಾ ಕಂಪೆನಿಗೆ ಟೆಂಡರ್‌ ಕೂಡಾ ನೀಡಲಾಗಿದೆ. ಬೆಳೆ ನಷ್ಟದ ಪ್ರಮಾಣವನ್ನು ಈ ಮಿತಿಯಲ್ಲಿ ಇರುವುದನ್ನು ಹೆಚ್ಚು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ರಿಸ್ಕ್ ಪ್ರಮಾಣ ಕಡಿಮೆ ಮಾಡಿದಷ್ಟು ರೈತರಿಗೆ ದೊರೆಯುವ ಪರಿಹಾರದ ಮೊತ್ತ ಕಡಿಮೆಯಾಗಲಿದೆ. ಹೆಕ್ಟೇರ್‌ಗೆ 6,400 ರೂ. ಪಾವತಿಸಿದರೆ ಶೇ. 30 ನಷ್ಟ ಪರಿಹಾರ ಎಂದರೆ 51,800 ರೂ. ದೊರೆಯುತ್ತದೆ. ನಷ್ಟದ ಮಿತಿ ಹೆಚ್ಚು ಮಾಡಿದರೆ ಪರಿಹಾರ ಮೊತ್ತ ಜಾಸ್ತಿ ದೊರೆಯಲಿದೆ. ಈ ಕುರಿತು ಸ್ಪಷ್ಟನೆ ಬಯಸಿದಾಗ, ರೈತರಿಗೆ ತೊಂದರೆಯಾಗುವುದಿಲ್ಲ. ಇದು ರಿಸ್ಕ್ ಪರ್ಸೆಂಟೇಜ್‌ನ ಕನಿಷ್ಠ ಪ್ರಮಾಣವಾಗಿದ್ದು ಹವಾ ಮಾನ ವೈಪರೀತ್ಯವಾದರೆ ಈ ಮೊತ್ತ ಹೆಚ್ಚಾಗಲೂ ಬಹುದು ಎಂದು ತೋಟಗಾರಿಕಾ ಸಹಾಯಕ ನಿರ್ದೇಶಕ ನಿಧೀಶ್‌ ಹೊಳ್ಳ ವಿವರಿಸಿದ್ದಾರೆ.

ಕೊನೆ ದಿನ
ತೋಟಗಾರಿಕಾ ಬೆಳೆಗಳಾದ ಅಡಿಕೆ, ಕರಿಮೆಣಸು, ವೀಳ್ಯದೆಲೆ, ದ್ರಾಕ್ಷಿ, ದಾಳಿಂಬೆ, ಲಿಂಬೆ, ಪರಂಗಿ, ಶುಂಠಿ, ಹೂಕೋಸು ಬೆಳೆಗಳನ್ನು ಜು. 10ರ ಒಳಗೆ ನೋಂದಾಯಿಸಬೇಕು. ಮಾವು ಬೆಳೆಯನ್ನು ಜು. 31ರ ಒಳಗೆ, ಹಿಂಗಾರು ಹಂಗಾಮಿನ ಬೆಳೆಗಳಾದ ದ್ರಾಕ್ಷಿ, ಮಾವು, ದಾಳಿಂಬೆ, ಮೆಣಸಿನಕಾಯಿ ಬೆಳೆಗಳನ್ನು ನ. 15ರ ಒಳಗೆ ನೋಂದಾಯಿಸಬೇಕು.

ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ವಿಮೆ ಮಾಡಿಸಬಹುದು. ಬೆಳೆ ವಿಮೆ ನೋಂದಣಿಗೆ ಜೂ.30 ಕೊನೆ ದಿನವಾಗಿತ್ತು. ಜೂ. 25ರಂದು ಆದೇಶವಾಗಿ ಜೂ.26ರಂದು ಕಚೇರಿಗಳಿಗೆ ಬಂದಿದ್ದು ಜೂ. 27, 28 ಸರಕಾರಿ ರಜೆ ದಿನ. ಕೇವಲ ಎರಡು ದಿನಗಳ ಗಡುವು ನೀಡಿ ಸರಕಾರ ಆದೇಶ ನೀಡಿದ್ದು ರೈತರಲ್ಲಿ ಗೊಂದಲ ಮೂಡಿಸಿತ್ತು. ದ.ಕ., ಉಡುಪಿಯ ಪ್ರಧಾನ ಬೆಳೆ ಅಡಿಕೆ ಬೆಳೆಗಾರರಿಗೆ ಇದರಿಂದ ತೊಂದರೆಯಾಗಿತ್ತು. ಎಲ್ಲ ಜಿಲ್ಲೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸರಕಾರ ನೋಂದಣಿ ಅವಧಿಯನ್ನು 10 ದಿನ ವಿಸ್ತರಿಸಿದೆ.

ಕಡ್ಡಾಯ ಅಲ್ಲ
ಬೆಳೆ ಸಾಲ ಪಡೆದ ರೈತರಿಗೆ ಸಹಕಾರಿ ಸಂಸ್ಥೆಗಳು, ಬ್ಯಾಂಕುಗಳು ಕಡ್ಡಾಯ ಬೆಳೆವಿಮೆ ಮಾಡಿಸುತ್ತಿವೆೆ. ಆದರೆ ಸರಕಾರದ ಸುತ್ತೋಲೆಯಂತೆ ಬೆಳೆವಿಮೆ ಕಡ್ಡಾಯವಲ್ಲ. ಬೆಳೆ ಸಾಲ ಪಡೆದ ರೈತ ಬೆಳೆವಿಮೆ ನೋಂದಣಿಗಿಂತ 7 ದಿನಗಳ ಮುಂಚೆ ತನಗೆ ಬೆಳೆವಿಮೆ ಅಗತ್ಯವಿಲ್ಲ ಎಂದು ಅಫಿದವಿತ್‌ ನೀಡಿದರೆ ಅವರನ್ನು ವಿಮೆ ವ್ಯಾಪ್ತಿಯಿಂದ ಹೊರಗಿಡಲಾಗುವುದು. ಆದರೆ ಅಂತಹ ರೈತರಿಗೆ ಬೆಳೆ ನಷ್ಟವಾದಾಗ ಯಾವುದೇ ವಿಮಾ ಪರಿಹಾರ ದೊರೆಯುವುದಿಲ್ಲ.

ಬೆಳೆ ವಿಮೆಯಿಂದ ರೈತರು ದೂರ ಸರಿಯಲು ಕಾರಣ ವಿಮೆಯನ್ನು ಘಟಕವಾಗಿ ಪರಿಗಣಿಸಿರುವುದು. ಇಡೀ ಗ್ರಾಮದ ಬೆಳೆ ನಾಶವಾಗದ ಹೊರತು ಇದರಲ್ಲಿ ಒಬ್ಬರು, ಇಬ್ಬರು ರೈತರ ಬೆಳೆ ನಷ್ಟವಾದರೆ ವಿಮಾ ಪರಿಹಾರ ಪಡೆಯಲು ಅವಕಾಶ ಇಲ್ಲ. ಬೆಳೆ ನಾಶವಾಗಿ 72 ಗಂಟೆಗಳ ಒಳಗೆ ರೈತರು ವಿಮಾ ಸಂಸ್ಥೆಗೆ ಮಾಹಿತಿ ನೀಡಿ ಅವರು ಸರ್ವೆ ಮಾಡಿ ಪರಿಹಾರ ಮೊತ್ತವನ್ನು ನೇರ ರೈತರ ಖಾತೆಗೆ ಜಮೆ ಮಾಡುವುದು ಈ ವಿಮೆಯ ಆಶಯ. ಇದಕ್ಕಾಗಿ ಅವರು ಪಂಚಾಯತ್‌ನಲ್ಲಿ ದಾಖಲಾಗುವ ಮಳೆಮಾಪನದ ಅಂಕಿ ಅಂಶವನ್ನು ಅವಲಂಬಿಸುತ್ತಾರೆ.

ರೈತರಿಗೆ ಪರಿಹಾರ ನೀಡುತ್ತಿಲ್ಲ
ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ರೈತರು ಪ್ರೀಮಿಯಂ ಮೊತ್ತದಲ್ಲಿ ಶೇ. 5ರಷ್ಟು ಕಟ್ಟುತ್ತಿದ್ದು, ಉಳಿದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪಾವತಿಸುತ್ತಿವೆ. ವಿಮಾ ಸಂಸ್ಥೆಗೆ ಸಮರ್ಪಕವಾಗಿ ಹಣ ಪಾವತಿಸುವ ಸರಕಾರ ರೈತರಿಗೆ ಕೊಳೆರೋಗಕ್ಕೆ ಹಣವನ್ನೇ ಬಿಡುಗಡೆ ಮಾಡಿಲ್ಲ. ಕಳೆದ ಸಾಲಿನಲ್ಲಿ ಕೊಳೆರೋಗಕ್ಕೆ ಹೆಕ್ಟೇರ್‌ಗೆ 28,000 ರೂ. ಘೋಷಣೆಯಾಗಿದ್ದರೂ ಯಾರಿಗೂ ಸಿಕ್ಕಿಲ್ಲ.
-ರವಿಕಿರಣ್‌ ಪುಣಚ, ರಾಜ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ

ರಾಜ್ಯದಿಂದ ಬೇಡಿಕೆ ಇತ್ತು
ಹವಾಮಾನ ಆಧಾರಿತ ಬೆಳೆ ವಿಮೆಯ ವಿಮಾ ಕಂತು ಪಾವತಿಯ ದಿನಾಂಕ ವಿಸ್ತರಣೆ ಕುರಿತು ಇಡೀ ರಾಜ್ಯದಲ್ಲಿ ಬೇಡಿಕೆ ಇತ್ತು. ಹೀಗಾಗಿ ಕರ್ನಾಟಕ ಸರಕಾರ ಕೇಂದ್ರಕ್ಕೆ ಮನವಿ ಮಾಡಿ 10 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
-ಎಚ್‌.ಆರ್‌.ನಾಯಕ್‌
ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ, ದ.ಕ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.