ಸಹೋದ್ಯೋಗಿಯಿಂದಲೇ ಶಿಕ್ಷಕಿಯ ಕೊಲೆ; ಇಬ್ಬರ ಬಂಧನ

ಮೀಯಪದವು ಶಾಲೆಯ ರೂಪಶ್ರೀ ನಿಗೂಢ ಸಾವಿಗೆ ತಿರುವು

Team Udayavani, Jan 25, 2020, 1:19 AM IST

jan-38

ಕುಂಬಳೆ: ಜಿಲ್ಲೆಯಲ್ಲಿ ಭಾರೀ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದ್ದ ಮೀಯಪದವು ಶ್ರೀ ವಿದ್ಯಾವರ್ಧಕ ಶಾಲೆಯ ಶಿಕ್ಷಕಿ ಬಿ.ಕೆ.ರೂಪಶ್ರೀ (40) ಅವರ ಸಾವಿನ ನಿಗೂಢತೆಯನ್ನು ಕ್ರೈಂಬ್ರಾಂಚ್‌ ತಂಡವು ಭೇದಿಸಿದ್ದು, ಇದೊಂದು ಕೊಲೆ ಕೃತ್ಯ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ರೂಪಶ್ರೀ ಅವರ ಸಹೋದ್ಯೋಗಿ, ಚಿಗುರುಪಾದೆ ನಿವಾಸಿಯಾಗಿರುವ ಶಿಕ್ಷಕ ವೆಂಕಟರಮಣ ಕಾರಂತ ಹಾಗೂ ಈತನಿಗೆ ಸಹಾಯ ಮಾಡಿದ್ದ ಕಾರು ಚಾಲಕ ನಿರಂಜನ ಎಂಬವರನ್ನು ಬಂಧಿಸಲಾಗಿದೆ.

ಆರಂಭದಿಂದಲೂ ಇದೊಂದು ಕೊಲೆ ಎಂದೇ ಜನರು ಹೇಳುತ್ತಿದ್ದರು ಹಾಗೂ ವೆಂಕಟರಮಣನ ವಿರುದ್ಧವೇ ಶಂಕೆ ಬಲವಾಗಿತ್ತು. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆಯನ್ನೂ ಮಾಡಿದ್ದರು. ವೆಂಕಟರಮಣ ಮತ್ತು ರೂಪಶ್ರೀ ನಡುವೆ ಹಣಕಾಸಿನ ವ್ಯವಹಾರ ಇತ್ತು ಮತ್ತು ಇದೇ ಕಾರಣದಿಂದ ಕೊಲೆ ಮಾಡ ಲಾಗಿದೆ ಎಂದು ಶಂಕಿಸಲಾಗಿದೆ. ಈಕೆಯನ್ನು ಆರೋಪಿಯ ಮನೆಯಲ್ಲಿ ಕೊಂದು ಕಾರಿನಲ್ಲಿ ಸಾಗಿಸಿ ಸಮುದ್ರಕ್ಕೆ ಎಸೆಯಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ
ರೂಪಶ್ರೀಯ ನಾಪತ್ತೆಯಾಗಿದ್ದ ವ್ಯಾನಿಟಿ ಬ್ಯಾಗ್‌ ಕೂಡ ಗುರುವಾರ ಪತ್ತೆಯಾಗಿದೆ. ರೂಪಶ್ರೀ ಜ.16ರಂದು ಮಧ್ಯಾಹ್ನದ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದು, ಜ.18ರಂದು ಬೆಳಗ್ಗೆ ಕುಂಬಳೆ ಪೆರುವಾಡು ಕಡಪ್ಪುರದಲ್ಲಿ ಆಕೆಯ ಮೃತದೇಹ ಬಹುತೇಕ ನಗ್ನವಾಗಿ ಪತ್ತೆಯಾಗಿತ್ತು. ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯಲ್ಲಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದಾಗಿ ತಿಳಿದು ಬಂದಿತ್ತು. ಆದರೆ ಸಮುದ್ರಕ್ಕೆ ತಲುಪಿದ್ದ ಕುರಿತು ತನಿಖೆ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಗೆ ನೇತೃತ್ವ ವಹಿಸಿದ್ದ ಡಾ| ಕೆ. ಗೋಪಾಲಕೃಷ್ಣ ಪಿಳ್ಳೆ ಪೊಲೀಸರಿಗೆ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಮೊದಲಿಗೆ ಮಂಜೇಶ್ವರ ಮತ್ತು ಕುಂಬಳೆ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಆದರೆ ನಿಗೂಢತೆ ಹೆಚ್ಚಾದ ಹಿನ್ನೆಲೆಯಲ್ಲಿ ತನಿಖೆಯನ್ನು ಜಿಲ್ಲಾ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು. ಅದು ತನಿಖೆಯಲ್ಲಿ ಪ್ರಗತಿ ಸಾಧಿಸಿ, ಕೊಲೆ ಎಂದು ನಿರ್ಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮೊಬೈಲ್‌ ಕಣ್ಣಾಮುಚ್ಚಾಲೆ
ಸಾವಿನ ಬೆನ್ನಲ್ಲೇ ರೂಪಶ್ರೀಯ ಮೊಬೈಲ್‌ ಫೋನ್‌ ನಾಪತ್ತೆಯಾಗಿತ್ತು. ಅನಂತರ ಅದನ್ನು ಬೇರೆ ಬೇರೆ ಸ್ಥಳಾಂತರಿಸಲಾಗಿತ್ತು. ಇದನ್ನು ಕೇಂದ್ರೀಕರಿಸಿ ತನಿಖೆ ಮುಂದುವರಿಯುತ್ತಿದ್ದಂತೆ ಅದು ಶಿಕ್ಷಕಿಯ ಮನೆಯ ಕಿಟಿಕಿ ಪಕ್ಕದಲ್ಲಿ ಪತ್ತೆಯಾಗಿತ್ತು. ಆ ಬಳಿಕ ಆಕೆಯ ಬ್ಯಾಗ್‌ ಗುರುವಾರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು. ಬ್ಯಾಗ್‌ನಲ್ಲಿ ಸಿಕ್ಕಿದ ಗುರುತು ಚೀಟಿಯಿಂದ ಅದು ರೂಪಶ್ರೀಯದ್ದೆಂದು ದೃಢಪಟ್ಟಿತು.

ಜಿಲ್ಲಾ ಕ್ರೈಂ ಬ್ರಾಂಚ್‌ ಡಿವೈಎಸ್‌ಪಿ ಸತೀಶ್‌ಕುಮಾರ್‌, ಎಸ್‌.ಐ. ಬಾಬು, ಮಂಜೇಶ್ವರ ಅಡಿಶನಲ್‌ ಎಸ್‌ಐ ಪಿ.ಬಾಲಚಂದ್ರನ್‌, ಕುಂಬಳೆ ಪೊಲೀಸ್‌ ಸಿವಿಲ್‌ ಪೊಲೀಸ್‌ ಆಫೀಸರ್‌ ಪ್ರದೀಶ್‌ ಗೋಪಾಲ್‌ ನೇತೃತ್ವದ ವಿಶೇಷ ತನಿಖಾ ತಂಡ ಪ್ರಕರಣವನ್ನು ಬಯಲಿಗೆಳೆದಿದೆ.

ಮನೆಗೆ ಕರೆಸಿಕೊಂಡು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದರು!
ಯಾವುದೋ ಕಾರ್ಯ ನಿಮಿತ್ತ ಶಿಕ್ಷಕಿಯನ್ನು ಮನೆಗೆ ಕರೆಸಿಕೊಂಡ ವೆಂಕಟರಮಣನು ಆಕೆಯನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ತುಂಬಿಸಿ ಸ್ಪಿಫ್ಟ್ ಕಾರಿನಲ್ಲಿ ಕೊಂಡೊಯ್ದು ಸಮುದ್ರಕ್ಕೆ ಎಸೆದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆಂದು ತನಿಖಾ ತಂಡವು ತಿಳಿಸಿದೆ. ಕಾರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರಿನಲ್ಲಿ ಮಹಿಳೆಯ ಕೂದಲು ಪತ್ತೆ
ಕಣ್ಣೂರಿನಿಂದ ಬಂದಿರುವ ಫಾರೆನ್ಸಿಕ್‌ ತಜ್ಞರು ವೆಂಕಟರಮಣನ ಕಾರನ್ನು ಪರಿಶೀಲಿಸಿದಾಗ ಅದರಲ್ಲಿ ಮಹಿಳೆಯ ಕೂದಲು ಪತ್ತೆಯಾಗಿತ್ತು. ಇದು ಕೊಲೆ ಶಂಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿತ್ತು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.