ರಾಜ್ಯದ ಪ್ರಥಮ ಕತ್ತೆ ಸಾಕಾಣಿಕೆ ಕೇಂದ್ರ; ಜೂ. 8: ಬಂಟ್ವಾಳದ ಇರಾದಲ್ಲಿ ಉದ್ಘಾಟನೆ
Team Udayavani, Jun 6, 2022, 6:25 AM IST
ಬಂಟ್ವಾಳ: ಬಂಟ್ವಾಳದ ಇರಾದಲ್ಲಿ ದೇಶದ 2ನೇ ಹಾಗೂ ಕರ್ನಾಟಕದ ಪ್ರಥಮ ಬೃಹತ್ ಕತ್ತೆ ಸಾಕಾಣಿಕೆ ಹಾಗೂ ಮಾದರಿ ತರಬೇತಿ ಕೇಂದ್ರ ಆರಂಭಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದು, ಜೂ. 8ರಂದು ವಿವಿಧ ಕ್ಷೇತ್ರದ ಗಣ್ಯರು, ಅಧಿಕಾರಿಗಳ ಸಮ್ಮುಖದಲ್ಲಿ ಕೇಂದ್ರ ಆರಂಭಗೊಳ್ಳಲಿದೆ.
ಐಸಿರಿ ಫಾಮ್ಸ್ì ಅವರ ಮೂಲಕ ಸಮಗ್ರ ಕೃಷಿ ಮತ್ತು ಪಶು ಸಂಗೋಪನೆ, ಪಶು ವೈದ್ಯಕೀಯ ಸೇವೆಗಳು, ತರಬೇತಿ ಮತ್ತು ಮೇವು ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಕೇಂದ್ರ ಅನುಷ್ಠಾನಗೊಳ್ಳಲಿದ್ದು, ರಾಮನಗರ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಶ್ರೀನಿವಾಸ ಗೌಡ ಅವರ ಮಾಲಕತ್ವದಲ್ಲಿ ಕೇಂದ್ರ ಕಾರ್ಯಾಚರಿಸಲಿದೆ. ಕತ್ತೆ ಹಾಲು ಶ್ರೇಷ್ಠ ಪೌಷ್ಟಿಕಾಂಶವನ್ನು ಒಳಗೊಂಡಿರುವ ಜತೆಗೆ ಬಹಳ ದುಬಾರಿಯಾಗಿದ್ದು, ಹೀಗಾಗಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ.
ಎಲ್ಲ ರೀತಿಯ ಸಿದ್ಧತೆಗಳೊಂದಿಗೆ ಈಗಾಗಲೇ 20 ಕತ್ತೆಗಳ ಮೂಲಕ ಕೇಂದ್ರವನ್ನು ಆರಂಭಿಸುತ್ತಿದ್ದು, ಉದ್ಘಾಟನೆಗೆ ರಾಜ್ಯದ ಪಶು ಸಂಗೋಪನಾ ಸಚಿವರು ಆಗಮಿಸಬೇಕಿತ್ತು. ಆದರೆ ಅವರು ರಾಜ್ಯಸಭಾ ಚುನಾವಣೆಯ ಬಳಿಕ ಜೂ. 15ರ ಸುಮಾರಿಗೆ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಜೂ. 8ರಂದು ವಿಧಾನಸಭಾ ವಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಸೇರಿದಂತೆ ಪಶು ಸಂಗೋಪನ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಲಿದೆ ಎಂದು ಕೇಂದ್ರದ ಮಾಲಕ ಶ್ರೀನಿವಾಸ ಗೌಡ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ