ಕಳ್ಳತನ ಪ್ರಕರಣ ಭೇದಿಸಿದ ವಿಟ್ಲ ಪೊಲೀಸರು; ಆರೋಪಿಗೆ ನ್ಯಾಯಾಂಗ ಬಂಧನ
Team Udayavani, Oct 30, 2022, 4:20 PM IST
ವಿಟ್ಲ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಆರೋಪಿಯೋರ್ವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಕೂಟಪರಂಬ ಗ್ರಾಮದ ಮಹಮ್ಮದ್ ಕೆ.ಯು.(42) ಬಂಧಿತ ಆರೋಪಿ.
ಘಟನೆ ವಿವರ: ಮನೆ ಸದಸ್ಯರು ಮನೆಯಲ್ಲಿರುವಾಗಲೇ ಕಳ್ಳರು ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಸುಮಾರು 4,28,000 ರೂ. ಮೌಲ್ಯದ ಒಟ್ಟು 107 ಗ್ರಾಂ. ನಷ್ಟು ಆಭರಣ ಕಳ್ಳತನ ಮಾಡಿದ ಘಟನೆ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿ ಮಾ.10 ರಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅದರಂತೆ ಕಳವುಗೈದ ಮಾಲನ್ನು ಕಾಸರಗೂಡಿನ ಜ್ಯುವೆಲರಿ ಅಂಗಡಿಯಿಂದ ಸುಮಾರು 3,71,600 ರೂ. ಮೌಲ್ಯದ 80.10 ಗ್ರಾಂ ನಷ್ಟು ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಕಳ್ಳತನ ಪ್ರಕರಣ ದಾಖಲಾದ ಕೂಡಲೇ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಬಂಟ್ವಾಳ ಡಿವೈಎಸ್ಪಿ ಪ್ರತಾಪಸಿಂಗ್ ತೋರಟ್ ಅವರ ಮಾರ್ಗದರ್ಶನದಲ್ಲಿ ವಿಟ್ಲದ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್ ಇ ಇವರ ನೇತೃತ್ವದಲ್ಲಿ ಠಾಣಾ ಪಿಎಸ್ ಐ ಸಂದೀಪ್ ಕುಮಾರ್ ಶೆಟ್ಟಿ ಪಿಎಸ್ ಐ (ಕಾಮತ್ತುಸು), ರುಕ್ಮಾ ನಾಯ್ಕ್ ಪಿಎಸ್ಐ (ತನಿಖೆ-1) ಹಾಗೂ ಸಿಬಂದಿಗಳು ಪತ್ತೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ