Bantwala: ಅಂತರಾಜ್ಯ ಕಳ್ಳನನ್ನು ಹಿಡಿದು ಥಳಿಸಿ, ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಯಾರು ಇಲ್ಲದ ಮನೆ, ಲೈಟ್‌ ಆಫ್ ಆಗಿದ್ದ ಮನೆಯೇ ಈ ಕಳ್ಳರ ಟಾರ್ಗೆಟ್

Team Udayavani, Oct 22, 2023, 2:37 PM IST

8-bantwala

ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ‌ಹಿಡಿದು ಥಳಿಸಿದಲ್ಲದೆ, ಪೊಲೀಸರಿಗೊಪ್ಪಿಸಿದ ಘಟನೆ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ.

ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಕರಕ್ಕಲ್ ನಿವಾಸಿ ಪ್ರವೀಣ್ ಎಂಬಾತ ಪೊಲೀಸರ ಅತಿಥಿಯಾಗಿದ್ದಾನೆ. ಈತನ ಸ್ನೇಹಿತ ಪರಾರಿಯಾಗಿದ್ದಾನೆ. ಕಳ್ಳತನಕ್ಕೆ ಬಳಸುವ ಬೈಕ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಜೊತೆಯಾಗಿ ಕಳವು ನಡೆಸಿದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಂಚಿ ಮಸೀದಿ ಬಳಿಯ ಕಮರುದ್ದೀನ್ ಹಾಗೂ ಜಲಾಲುದ್ದೀನ್ ಸಹೋದರರ ಎರಡು ಮನೆ ಹಾಗೂ ಕಾಡಂಗಡಿ ಎಂಬಲ್ಲಿ ಹಮೀದ್ ಎಂಬವರ ಮನೆಗೆ ಕಳ್ಳರು ನುಗ್ಗಿದ್ದಾರೆ.

ಅತೀ  ಶ್ರೀಮಂತ ಮನೆಯಾಗಿದ್ದು, ಅತ್ಯಂತ ಭದ್ರತೆಯಿಂದ ಕೂಡಿದ ಮನೆಗಳಾಗಿವೆ. ಅದರಲ್ಲಿ ಒಂದು ಮನೆ ಇತ್ತೀಚೆಗಷ್ಟೇ ಗೃಹಪ್ರವೇಶವಾಗಿತ್ತು ಎಂದು ಹೇಳಲಾಗಿದೆ.

ಮಂಚಿ ಮಸೀದಿ ಬಳಿಯಿರುವ ಸಹೋದರರಾದ ಕಮಾರುದ್ದೀನ್ ಹಾಗೂ ಜಲಾಲುದ್ದೀನ್ ಅವರ ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿಸಿ ಕಪಾಟುಗಳನ್ನು ಒಡೆದು ಜಾಲಡಿದ್ದಾರೆ. ಆದರೆ ಯಾವುದೇ ಬೆಲೆಬಾಳುವ ವಸ್ತುಗಳು ಕೈಗೆ ಸಿಗದ ಹಿನ್ನೆಲೆ ಅಲ್ಲಿಂದ ವಾಪಾಸಾಗಿದ್ದಾರೆ.

ಅಲ್ಲೇ ಸ್ವಲ್ಪ ದೂರದಲ್ಲಿ ಕಾಡಂಗಡಿ ಎಂಬಲ್ಲಿರುವ ಹಮೀದ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನ ಒಳಗಿದ್ದ ಸುಮಾರು 3 ಸಾವಿರ ರೂ.ನಗದು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.

ಬೈಕಿನಲ್ಲಿ ಬಂದ ಕಳ್ಳರಿಬ್ಬರು ಯಾರು ಇಲ್ಲದ ಮನೆಯನ್ನು ಆಯ್ದುಕೊಂಡು ಕಳ್ಳತನ ಮಾಡುವ ಬಗ್ಗೆ ಸಾರ್ವಜನಿಕರು ಹಿಡಿದು ಥಳಿಸುವ ವೇಳೆ ಕಳ್ಳ ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಈ ಮೂರು ಮನೆಯಲ್ಲಿ ಯಾರು ಇರಲಿಲ್ಲ. ಈ ಮೂರು ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದರು. ಹಾಗಾಗಿ ಮನೆಯ ಲೈಟ್ ಆಫ್ ಆಗಿತ್ತು. ಲೈಟ್ ಉರಿಯದ ಮನೆಗಳನ್ನು ನೋಡಿಕೊಂಡು ಅಲ್ಲಿ ಯಾರಾದರೂ ಇದ್ದಾರಾ ಎಂಬುದನ್ನು ಖಚಿತಪಡಿಸಿಕೊಂಡು ಬಳಿಕ ಮನೆಗೆ ನುಗ್ಗುವುದು ಇವರ ಕಾಯಕವಂತೆ.

ನಿನ್ನೆ ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಒಂದು ಕಡೆ ಜೋರಾಗಿ ಮಳೆ, ಇನ್ನೊಂದು ಕಡೆ ಸಿಡಿಲು. ಈ ನಡುವೆ ಇವರಿಬ್ಬರು ಕಳ್ಳರು ಲೈಟ್ ಉರಿಯದ ಮಸೀದಿ ಬಳಿ ಇರುವ ಸಹೋದರರ ಎರಡು ಮನೆಗಳಿಗೆ ನುಗ್ಗಿದ್ದಾರೆ‌. ಅಲ್ಲಿ ಜಾಲಾಡಿ ಏನು ಸಿಗದ ಬಳಿಕ ಕಾಡಂಗಡಿಯ ಹಮೀದ್ ಅವರ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಮೂರು ಸಾವಿರ ಹಣವನ್ನು ಕದ್ದು ಹೋಗುವ ವೇಳೆ ಹಮೀದ್ ಅವರ ಸಂಬಂಧಿಕರ ಕಣ್ಣಿಗೆ ಕಾಣಿಸಿಕೊಂಡಿದ್ದಾನೆ.

ಸಿಡಿಲು ಮಳೆಯ ಹಿನ್ನೆಲೆಯಲ್ಲಿ ಮನೆಯ ಇನ್ ವರ್ಟ್ ರ್ ಆಫ್ ಮಾಡಿ ಬಿಡುವಂತೆ ಹಮೀದ್ ಸಮೀಪದ ಸಂಬಂಧಿಕರೋರ್ವರಲ್ಲಿ ತಿಳಿಸಿದ್ದು, ಇನ್ ವರ್ಟ್ ರ್ ಆಫ್ ಮಾಡಲು ಬಂದಿರುವ ವ್ಯಕ್ತಿಗೆ ಮನೆಯ ಕಡೆಯಿಂದ ಇಬ್ಬರು ವ್ಯಕ್ತಿಗಳು ಓಡಿ ಹೋಗುವ ದೃಶ್ಯ ಕಂಡು ಬಂದಿದೆ. ಕೂಡಲೇ ಅವರು ಸ್ನೇಹಿತರಿಗೆ ತಿಳಿಸಿ ಹುಡುಕುವ ಪ್ರಯತ್ನ ಮಾಡಿದ್ದಾರೆ. ಬೈಕಿನಲ್ಲಿ ಬಂದ ಕಳ್ಳರು ಇವರನ್ನು ನೋಡಿ ಓಡುವ ಭರದಲ್ಲಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.

ಇಬ್ಬರು ಕಳ್ಳರು ಬೇರೆ ಬೇರೆ ದಿಕ್ಕಿನಲ್ಲಿ ಪರಾರಿಯಾಗಲು ಯತ್ನಿಸಿ ಓರ್ವ ಮಾತ್ರ ಕೊನೆಗೂ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಒಂದು ಕಡೆ ಮಳೆ ಇನ್ನೊಂದು ಕಡೆ ಕತ್ತಲು ಆದರೂ ಕಳ್ಳತನದ ಬಗ್ಗೆ ಕೋಪಗೊಂಡಿದ್ದ ಗ್ರಾಮಸ್ಥರು ಜೊತೆಯಾಗಿ ಕಳ್ಳರ ಜಾಡು ಹಿಡಿದು ಹುಡುಕಿದ್ದಾರೆ.

ರಾತ್ರಿ ಸುಮಾರು 8 ಗಂಟೆಗೆ ಹುಡುಕುವ ಪ್ರಯತ್ನ ಮಾಡಿದ ಗ್ರಾಮಸ್ಥರಿಗೆ ಮುಂಜಾವಿನ ವೇಳೆ ಓರ್ವ ಕಳ್ಳನನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ. ಇನ್ನೊರ್ವ ಕಳ್ಳ ಇವರ ಕೈ ಗೆ ಸಿಗದೆ ಪರಾರಿಯಾಗಿದ್ದಾನೆ‌.

ಕೈಗೆ ಸಿಕ್ಕಿದ ಕಳ್ಳನಿಗೆ ಸಾರ್ವಜನಿಕರು ಸರಿಯಾಗಿ ಗೂಸಾ ನೀಡಿ ಬಳಿಕ ಕಳ್ಳತನದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು. ಅ ಬಳಿಕ ಈತನನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಇನ್ನೋರ್ವ ಆರೋಪಿಗಾಗಿ‌ ಶೋಧ ಕಾರ್ಯು ಮುಂದುವರಿಸಿದ್ದಾರೆ.

ಪೊಲೀಸ್ ‌ವಶದಲ್ಲಿರುವ ಆರೋಪಿಯ ತನಿಖೆಯ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗಬಹುದು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.