ಸಮಸ್ಯೆ ನೂರಾರು, ಅಭಿವೃದ್ಧಿ ಹಿನ್ನಡೆ

ವಿಟ್ಲ ಪ.ಪಂ.: ಜನಪ್ರತಿನಿಧಿಗಳಿಗೆ ಸಿಕ್ಕಿಲ್ಲ ಅಧಿಕಾರ

Team Udayavani, Nov 10, 2022, 10:31 AM IST

2

ವಿಟ್ಲ: ವಿಟ್ಲ ಪ.ಪಂ. ಎರಡನೇ ಅವಧಿಯ ಚುನಾವಣೆ 2021ರ ಡಿ. 27ರಂದು ನಡೆದು, ಡಿ.30ಕ್ಕೆ ಮತ ಎಣಿಕೆಯಾಗಿ ವಿಜಯೀ ಅಭ್ಯರ್ಥಿಗಳ ಅಧಿಕೃತ ಘೋಷಣೆಯಾಗಿದೆ. ಆದರೆ ಆಮೇಲಿನ ಯಾವ ಪ್ರಕ್ರಿ ಯೆಯೂ ನಡೆದಿಲ್ಲ. 10 ತಿಂಗಳ ಬಳಿಕವೂ ಮೀಸಲಾತಿ ಘೋಷಣೆಯಾಗಿಲ್ಲ. ಪರಿಣಾಮವಾಗಿ ನೂತನ ಆಡಳಿತ ವ್ಯವಸ್ಥೆಗೆ ಚಾಲನೆ ಸಿಕ್ಕಿಲ್ಲ. ಸರಕಾರ ಈ ರೀತಿ ಅವಗಣಿಸುತ್ತಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ವಿಟ್ಲ ಪ.ಪಂ. ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ, ಕಾಂಗ್ರೆಸ್‌ 5 ಸ್ಥಾನ ಮತ್ತು 1 ಸ್ಥಾನ ಎಸ್‌ಡಿಪಿಐ ಜಯಗಳಿಸಿದ್ದು, ಬಿಜೆಪಿಗೆ ಅಧಿಕಾರ ನಡೆಸುವ ಯೋಗ ಸತತ ಎರಡನೇ ಬಾರಿ ಲಭಿಸಿದೆ. ಕಾಂಗ್ರೆಸ್‌ ಕಳೆದ ಅವಧಿಯಲ್ಲಿದ್ದ ಒಂದು ಸ್ಥಾನ ಕಳೆದುಕೊಂಡು 5 ಸ್ಥಾನಕ್ಕೆ ಕುಸಿದರೆ, ಎಸ್‌ಡಿಪಿಐ ಖಾತೆ ತೆರೆದಿದೆ. ಆದರೆ ಇವರೆಲ್ಲರಿಗೂ ಆಯಾ ಸ್ಥಾನಗಳನ್ನು ಅಲಂಕರಿಸುವ ಯೋಗ ಇನ್ನೂ ಕೂಡಿಬಂದಿಲ್ಲ. ಈ ನಡುವೆ ಸರಕಾರ ಮೂವರನ್ನು ನಾಮನಿರ್ದೇಶನ ಮಾಡಿದೆ. ಸದಸ್ಯರ ಸಂಖ್ಯೆ 21ಕ್ಕೇರಿದೆ. ಆದರೆ ಇವರೆಲ್ಲರಿಗೂ ಚುಕ್ಕಾಣಿ ಸಿಕ್ಕಿಲ್ಲ ಮತ್ತು ಇನ್ನೂ ಮುಖ್ಯಾಧಿಕಾರಿ ಮತ್ತು ತಹಶೀಲ್ದಾರ್‌ ಅವರ ಅಧಿಕಾರಾವಧಿ ಮುಂದುವರಿದಿದೆ.

ಯಾರಿಗೆ ಅಧ್ಯಕ್ಷ ಯೋಗ ?

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸದಸ್ಯರಲ್ಲಿ ಅಧ್ಯಕ್ಷರಾಗುವ ಯೋಗ ಯಾರಿಗೆ ಎಂಬ ಸಹಜ ಕುತೂಹಲ ಎಲ್ಲರಲ್ಲಿತ್ತು. ಆದರೆ ಇದೀಗ ಗ್ರಾಮಸ್ಥರು ಆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಯಾರಾದರೂ ಆಗಬಹುದು, ಸಮಯಕ್ಕೆ ಸರಿಯಾಗಿ ನಮ್ಮ ಕೆಲಸ ಮಾಡಿಕೊಡಿ ಎಂದು ಅವಲತ್ತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಮೀಸಲಾತಿ ಪ್ರಕಟವಾಗದೇ ಇರುವುದರಿಂದ ಅಧ್ಯಕ್ಷ ಗಾದಿಗೆ ಯಾರ ಹೆಸರನ್ನು ಸೂಚಿಸುವ ಹಾಗಿಲ್ಲ.

ಸಮಸ್ಯೆಗಳು ನೂರಾರು !

ನೂರಾರು ಸಮಸ್ಯೆಗಳನ್ನು ಹೊತ್ತಿರುವ ಪಂಚಾಯತ್‌ ಆಡಳಿತ ವ್ಯವಸ್ಥೆಯಿಲ್ಲದೇ ಕಂಗೆಟ್ಟಿದೆ. ಸಿಬಂದಿ ಕೊರತೆ, ಗ್ರಾಮಸ್ಥರಿಗೆ ಖಾತೆ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಪ್ರಕ್ರಿಯೆ ಸ್ಥಗಿತ, ತಾಂತ್ರಿಕ ತೊಂದರೆಗಳಿವೆ. ಪ್ರಸ್ತುತ ಪಂಚಾಯತ್‌ ಕಚೇರಿಯ ಕಟ್ಟಡ ಹಳೆಯದಾಗಿದ್ದು, ಹೊಸ ಕಟ್ಟಡ ನಿರ್ಮಾಣ ವಾಗಬೇಕಾಗಿದೆ. ಆದರೆ ಹೊಸ ಕಟ್ಟಡ ನಿರ್ಮಿಸಲು ಸ್ಥಳ ನಿಗದಿಯಾಗಿಲ್ಲ. ಕುಡಿಯುವ ನೀರು ಸರಬರಾಜು ವ್ಯವಸ್ಥೆಯಲ್ಲಿ ತೊಂದರೆಯಿದೆ. ಪ್ರಮುಖ ರಸ್ತೆ ಹದಗೆಟ್ಟಿದ್ದು, ಅಭಿ ವೃದ್ಧಿಪಡಿಸಬೇಕಾಗಿದೆ. ಲೋಕೋ ಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಮಾಡಬೇಕಾಗಿದೆ.

ಹುದ್ದೆ ಭರ್ತಿಯಾಗಲಿ

ಪ.ಪಂ. ಆದ ಬಳಿಕ ಮುಖ್ಯಾಧಿಕಾರಿ ಹುದ್ದೆಯೊಂದೇ ಭರ್ತಿಯಾಗಿತ್ತು. ಏಳೆಂಟು ವರ್ಷಗಳಿಂದ ಎಂಜಿನಿಯರ್‌, ಕಂದಾಯ ಅಧಿಕಾರಿ, ಆರೋಗ್ಯ ಅಧಿಕಾರಿ ಇನ್ನಿತರ ಹುದ್ದೆಗಳು ಭರ್ತಿಯಾಗಲೇ ಇಲ್ಲ. ಕೆಲವು ಅಧಿಕಾರಿಗಳಿಗೆ ವಾರದಲ್ಲಿ ಎರಡು ದಿನ, ಮೂರು ದಿನ ವಿಟ್ಲಕ್ಕೆ ಪ್ರಭಾರ ರೂಪದ ಅಧಿಕಾರವನ್ನು ಕೊಡಲಾಗಿತ್ತು. ಆದರೆ ನಾಗರಿಕರ ಸಮಸ್ಯೆ ಪರಿಹಾರವಾಗುತ್ತಿರಲಿಲ್ಲ. ಇದೀಗ ಎಂಜಿನಿಯರ್‌ ಹುದ್ದೆ ಭರ್ತಿಯಾಗಿದ್ದು, ಉಳಿದ ಹುದ್ದೆಗಳೂ ಭರ್ತಿಯಾಗಲೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ಅನುದಾನಕ್ಕೂ ಕಡಿವಾಣ

ಅಧಿಕಾರಿಗಳಿಲ್ಲದೆ ಇರುವುದರಿಂದ ಎಲ್ಲ ತೆರಿಗೆ, ವಸೂಲಾತಿ ಚಟುವಟಿಕೆಗಳು ಹಿಂದೆ ಬಿದ್ದಿವೆ. ಪರಿಣಾಮವಾಗಿ ಸರಕಾರ ಪಂಚಾಯತ್‌ಗೆ ನೀಡುವ ಅನುದಾನಕ್ಕೂ ಕಡಿವಾಣ ಬೀಳುತ್ತದೆ. ವಿಟ್ಲದ ಜನತೆಗೆ ಓಡಾಟ ಹೆಚ್ಚಾಗಿದೆ. ಯೋಜನ ಪ್ರಾಧಿಕಾರವಿಲ್ಲ. ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ, ಕೆಪಿಟಿಸಿಎಲ್‌ ಕೇಂದ್ರ, ಪೊಲೀಸರ ವಸತಿಗೃಹಕ್ಕೆ ತೆರಳುವ ರಸ್ತೆ ಸರಿಯಿಲ್ಲ. ಈ ರಸ್ತೆಯಲ್ಲೇ ವಾರದ ಸಂತೆ ನಡೆಯುತ್ತಿದ್ದು ಮಂಗಳವಾರ ಇಲ್ಲಿ ವಾಹನ ಸಂಚಾರ ದುಸ್ತರವೆನಿಸಿದೆ. ವಾರದ ಸಂತೆಯನ್ನು ಬೇರೆ ಕಡೆ ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ.

ಅಭಿವೃದ್ಧಿಗೆ ಸ್ಪಂದಿಸಲಾಗುತ್ತಿಲ್ಲ: ಮೀಸಲಾತಿ ಸಮಸ್ಯೆ ನಿವಾರಣೆಯಾಗಿ ಜನಪ್ರತಿನಿಧಿಗಳಿಗೆ ಅಧಿಕಾರ ಸಿಗಬೇಕು. ಸಾಮಾನ್ಯ ಸಭೆಗಳಿಲ್ಲದೆ, ಯಾವುದೇ ನಿರ್ಣಯಗಳನ್ನು ಕೈಗೊಳ್ಳಲಾಗದೇ ಜನಪ್ರತಿನಿಧಿಗಳಿಗೆ ಊರಿನ ಅಭಿವೃದ್ಧಿಗೆ ಸ್ಪಂದಿಸಲಾಗುತ್ತಿಲ್ಲ. ರಾಜ್ಯದೆಲ್ಲೆಡೆ ಪಟ್ಟಣ, ನ.ಪಂ. ಆಡಳಿತ ವ್ಯವಸ್ಥೆ ಸುಗಮವಾಗಿ ನಡೆಯದಿದ್ದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳುತ್ತದೆ. ಅನುದಾನವಿಲ್ಲದೇ ಸೊರಗಿಹೋಗುತ್ತವೆ. ಸಂಬಂಧಪಟ್ಟವರು ಸೂಕ್ತ ಕ್ರಮಕೈಗೊಂಡಿದ್ದರೆ ಊರಿಗೆ ಅನುಕೂಲವಾಗುತ್ತಿತ್ತು. –ಭವಾನಿ ರೈ ಕೊಲ್ಯ, ಮಾಜಿ ಅಧ್ಯಕ್ಷರು, ವಿಟ್ಲ ಗ್ರಾ.ಪಂ.

ಕ್ರಮ ಕೈಗೊಳ್ಳಬೇಕು: ವಿಟ್ಲ ಪೇಟೆ ಮತ್ತು ಜಂಕ್ಷನ್‌ನಿಂದ ಹೊರಡುವ ನಾಲ್ಕೂ ರಸ್ತೆಗಳು ಹೊಂಡಗುಂಡಿಗಳಿಂದ ಆವೃತವಾಗಿವೆ. ಸಂಚಾರ ಅಸಾಧ್ಯವಾಗಿದೆ. ಸಂಬಂಧಪಟ್ಟವರು ಗಮನಹರಿಸಿ, ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಟ್ಲ ಪ.ಪಂ. ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬರದೇ ಇಂತಹ ನೂರಾರು ಸಮಸ್ಯೆಗಳು ಬಗೆಹರಿಯುತ್ತಿಲ್ಲ. –ದಿನೇಶ್‌, ನಾಗರಿಕರು, ವಿಟ್ಲ

-ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.