ಪ್ರವಾಹ ಬಂದಾಗ ಮುಳುಗುವ ಚೆಲ್ಯಡ್ಕ ಸೇತುವೆಗೆ ಮುಕ್ತಿ ಇಲ್ಲ


Team Udayavani, May 30, 2018, 11:45 AM IST

30-may-6.jpg

ನಿಡ್ಪಳ್ಳಿ : ಬಹಳ ಕಾಲದಿಂದ ಕೇವಲ ಗುಂಡಿ ಮುಚ್ಚುವ ಕೆಲಸ ಮಾತ್ರ ನಡೆಯುತ್ತಿರುವ ಚೆಲ್ಯಡ್ಕ – ದೇವಸ್ಯ ರಸ್ತೆ ಹಾಗೂ ಚೆಲ್ಯಡ್ಕ ಮುಳುಗು ಸೇತುವೆಯ ಸಮಸ್ಯೆಗೆ ಮುಕ್ತಿ ಸಿಗುವ ಲಕ್ಷಣವೇ ಇಲ್ಲ.

ಪುತ್ತೂರಿನಿಂದ ಪರ್ಲಡ್ಕ, ದೇವಸ್ಯ, ಪಾಣಾಜೆ ರಸ್ತೆಯಲ್ಲಿ ದೇವಸ್ಯದ ವರೆಗೆ ಲೋಕೋಪಯೋಗಿ ಇಲಾಖೆ ಸುಸಜ್ಜಿತ ಕಾಮಗಾರಿ ನಿರ್ವಹಿಸಿದೆ. ಆದರೆ, ಅಲ್ಲಿಂದ ಮುಂದೆ ಚೆಲ್ಯಡ್ಕದ ವರೆಗೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಸೂಕ್ತವಾಗಿಲ್ಲ. ಸದ್ಯ ದೇವಸ್ಯದಿಂದ ಕಾಪಿಕಾಡ್‌ ವರೆಗೆ ಶಾಸಕರು ಅನುದಾನ ಮಂಜೂರು ಮಾಡಿದ್ದರಿಂದ ರಸ್ತೆ ಅಗಲಗೊಳಿಸಿ, ಡಾಮರು ಹಾಕಿಸುವ ಕೆಲಸ ನಡೆದಿದೆ.

ನತದೃಷ್ಟ ಮುಳುಗು ಸೇತುವೆ
ಇದೇ ರಸ್ತೆಯಲ್ಲಿ ಚೆಲ್ಯಡ್ಕ ಮುಳುಗು ಸೇತುವೆ ಇದ್ದು, ಪ್ರತಿ ಮಳೆಗಾಲದಲ್ಲಿ ಏನಿಲ್ಲವೆಂದರೂ ಐದಾರು ಸಲ ಪ್ರವಾಹದ ನೀರಿನಲ್ಲಿ ಮುಳುಗುತ್ತದೆ. ಒಂದು ಸಲ ಪ್ರವಾಹ ಬಂದರೆ ಐದಾರು ತಾಸು ಸೇತುವೆಯ ಮೇಲೆ ನೀರು ಹರಿಯುತ್ತಿರುತ್ತದೆ. ಮಳೆಗಾಲದಲ್ಲಿ ಜಲಾ ವೃತವಾಗುವ ಸಂದರ್ಭ ಮಾತ್ರ ಜನಪ್ರ ತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ನೆನಪಾಗುವ ಈ ಸೇತುವೆ, ಆಮೇಲೆ ವಿಸ್ಮತಿಗೆ ಸರಿಯುತ್ತದೆ. ಈ ಸೇತುವೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಈ ಭಾಗದ ಜನರ ಬೇಡಿಕೆ ಹಲವು ವರ್ಷಗಳಿಂದ ಈಡೇರಲೇ ಇಲ್ಲ.

ಹಿಂದೊಮ್ಮೆ ಬಸ್ಸು ಬಿದ್ದು ಪ್ರಾಣಾಪಾಯ
ಕೆಲವು ವರ್ಷಗಳ ಹಿಂದೆ ಭಾರಿ ಮಳೆಗೆ ಸೇತುವೆ ಸ್ವಲ್ಪ ಮುಳುಗಿತ್ತು. ಖಾಸಗಿ ಬಸ್‌ ಚಾಲಕ ಸೇತುವೆಯ ಮೇಲಿಂದ ಬಸ್‌ ದಾಟಿಸುವ ಪ್ರಯತ್ನ ಮಾಡಿದ್ದ. ಆಗ ಬಸ್‌ ಹೊಳೆಗೆ ಬಿದ್ದು ಪ್ರಾಣಾಪಾಯ ಸಂಭವಿಸಿತ್ತು. ಸೇತುವೆಯ ಎರಡೂ ಬದಿಗಳಲ್ಲಿ ತಡೆಬೇಲಿ ಇಲ್ಲದಿರುವುದೂ ವಾಹನ ಹೊಳೆಗೆ ಬೀಳಲು ಕಾರಣವಾಗಿದೆ. ಸಣ್ಣ ವಾಹನಗಳೂ ಹೊಳೆಗೆ ಬಿದ್ದಿವೆ.

ಅಡಿಪಾಯವೂ ಶಿಥಿಲ
ಸೇತುವೆಯನ್ನು ಅದೆಷ್ಟೋ ವರ್ಷಗಳ ಹಿಂದೆ ನಿರ್ಮಿಸಿರುವುದರಿಂದ ಅಡಿಪಾಯವನ್ನು ಕಗ್ಗಲ್ಲಿನ ಕಂಬದಿಂದ ಕಟ್ಟಲಾಗಿದೆ. ಆದರೆ, ನೀರಿನೊಂದಿಗೆ ತೇಲಿ ಬಂದ ಮರದ ದಿಮ್ಮಿಗಳ ಹೊಡೆತಕ್ಕೆ ಕಂಬದ ಕಲ್ಲುಗಳು ಜಾರಿ ಹೋಗಿ ಶಿಥಿಲಗೊಂಡಿದೆ. ಇದು ಇದೆ ರೀತಿ ಮುಂದುವರಿದರೆ ಸೇತುವೆ ಕುಸಿಯುವುದರಲ್ಲಿ ಸಂದೇಹವಿಲ್ಲ.

ಮುಳುಗಿದರೆ ಸಂಪರ್ಕ ಕಡಿತ
ಈ ಸೇತುವೆ ಮುಳುಗಿದರೆ ಉಪ್ಪಳಿಗೆಯಿಂದ ಗುಮ್ಮಟೆಗದ್ದೆ, ಅಜ್ಜಿಕಲ್ಲು, ಒಳತ್ತಡ್ಕ ಪ್ರದೇಶದ ಜನರ ಸಂಪರ್ಕ ಕಡಿತಗೊಳ್ಳುತ್ತದೆ. ಖಾಸಗಿ ಬಸ್ಸುಗಳು ಇದೇ ರಸ್ತೆಯಲ್ಲಿ ಸಂಚರಿಸಲು ಪರವಾನಿಗೆ ಹೊಂದಿರುವುದರಿಂದ ಪ್ರಯಾಣಿಕರು ಈ ಬಸ್ಸನ್ನೇ ಅವಲಂಬಿಸಿದ್ದಾರೆ. ಇಲ್ಲಿ ಸೇತುವೆ ಮುಳುಗಿದರೆ ಬಸ್ಸು ಸಂಟ್ಯಾರ್‌ ರಸ್ತೆಯಲ್ಲಿ ಸಾಗುತ್ತದೆ. ಈ ಭಾಗದ ಜನರಿಗೆ ಪರ್ಯಾಯ ವ್ಯವಸ್ಥೆ ಇಲ್ಲ. ಆದುದರಿಂದ ಚೆಲ್ಯಡ್ಕ ಮುಳುಗು ಸೇತುವೆಯನ್ನು ಸರ್ವಋತು ಸೇತುವೆಯನ್ನಾಗಿ ಮಾಡಬೇಕೆಂದು ಸಾರ್ವಜನಿಕರು ಒತ್ತಡ ಹಾಕುತ್ತಿದ್ದಾರೆ.

ಪರ್ಯಾಯ ಸೇತುವೆ ನಿರ್ಮಾಣವಾಗಲಿ
ಅನೇಕ ವರ್ಷಗಳ ಬೇಡಿಕೆಯಾದ ಚೆಲ್ಯಡ್ಕ ಮುಳುಗು ಸೇತುವೆ ಮೇಲ್ದರ್ಜೆಗೇರಿಸಲು ಅಸಾಧ್ಯವಾದರೆ ಪರ್ಯಾಯ ಸೇತುವೆಯನ್ನು ನಿರ್ಮಿಸುವ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಇದರಿಂದ ಚೆಲ್ಯಡ್ಕ ಮೂಲಕ ಬೆಟ್ಟಂಪಾಡಿ, ಪಾಣಾಜೆಗೆ ಮತ್ತು ದೇವಸ್ಯ, ಪುತ್ತೂರಿಗೆ ಸಂಚರಿಸುವವರಿಗೆ ಬಹಳ ಅನುಕೂಲವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ದಾಮೋದರ ಪಾಟಾಳಿ
ಅರಂತ್ನಡ್ಕ, ರಿಕ್ಷಾ ಚಾಲಕರು

ನಬಾರ್ಡ್‌ ಅನುದಾನಕ್ಕೆ ಪ್ರಯತ್ನ
ಚೆಲ್ಯಡ್ಕ – ದೇವಸ್ಯ ರಸ್ತೆಯನ್ನು ಲೋಕೋಪಯೋಗಿ ರಸ್ತೆಯನ್ನಾಗಿ ಪರಿವರ್ತಿಸಿ ದುರಸ್ತಿ ಮಾಡಲು ಪ್ರಯತ್ನಿಸಲಾಗುವುದು. ಚೆಲ್ಯಡ್ಕ ಸೇತುವೆಯನ್ನು ಮೇಲ್ದರ್ಜೆಗೇರಿಸಲು 2 ಕೋಟಿ ರೂ.ಗಿಂತಲೂ ಹೆಚ್ಚಿನ ಹಣ ಬೇಕಾಗುವುದರಿಂದ ನಬಾರ್ಡ್‌ ಅನುದಾನಕ್ಕೆ ಪ್ರಯತ್ನಿಸುತ್ತೇನೆ. 
 - ಸಂಜೀವ ಮಠಂದೂರು
     ಪುತ್ತೂರು ಶಾಸಕರು

ಗಂಗಾಧರ ನಿಡ್ಪಳ್ಳಿ 

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.