ಸೂಕ್ತ ಪಾರ್ಕಿಂಗ್‌ ತಾಣವೇ ಇಲ್ಲ

ಬಿ.ಸಿ.ರೋಡ್‌ನ‌ಲ್ಲಿ ವಾಹನ ದಟ್ಟಣೆ ಹೆಚ್ಚಳ ; ವಾಹನ ನಿಲುಗಡೆಯೇ ಸಮಸ್ಯೆ

Team Udayavani, Aug 23, 2022, 10:26 AM IST

1

ಬಂಟ್ವಾಳ: ಬಿ.ಸಿ.ರೋಡ್‌ ನಗರದಲ್ಲಿ ದಿನೇ ದಿನೆ ವಾಹನಗಳ ಸಂಖ್ಯೆ ಏರುತ್ತಿದೆ. ಆದರೆ ವಾಹನಗಳನ್ನು ನಿಲ್ಲಿಸುವುದಕ್ಕೆ ಸೂಕ್ತ ಪಾರ್ಕಿಂಗ್‌ ತಾಣ ಗುರುತಿಸಲು ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗಬೇಕಾದ ಪರಿಸ್ಥಿತಿ ಇದ್ದು, ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ.

ಬಂಟ್ವಾಳ ತಾಲೂಕು ಕೇಂದ್ರವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡ್‌ನ‌ಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳ ಜತೆಗೆ ತಾಲೂಕು ಕಚೇರಿ, ನ್ಯಾಯಾಲಯ, ತಾ.ಪಂ., ಮೆಸ್ಕಾಂ ಹೀಗೆ ಬಹುತೇಕ ಸರಕಾರಿ ಕಚೇರಿಗಳು ಒಂದೇ ಕಡೆ ಕೇಂದ್ರಿಕೃತವಾಗಿರುವುದರಿಂದ ಅಲ್ಲಿಗೆ ವಾಹನಗಳ ಮೂಲಕ ಆಗಮಿಸುವವರು ವಾಹನ ನಿಲುಗಡೆಗೆ ಪರದಾಡಬೇಕಿದೆ.

ನಗರ ಪ್ರದೇಶಗಳಲ್ಲಿ ಪಾರ್ಕಿಂಗ್‌ ಸಮಸ್ಯೆ ಇರುವುದು ಸಾಮಾನ್ಯ ವಿಚಾರ. ಆದರೆ ಬಹುತೇಕ ನಗರಗಳಲ್ಲಿ ಸಾಕಷ್ಟು ಪಾರ್ಕಿಂಗ್‌ ತಾಣಗಳನ್ನು ಗುರುತಿಸಿ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಆದರೆ ಬಿ.ಸಿ.ರೋಡ್‌ನ‌ಲ್ಲಿ ಮಾತ್ರ ಒಂದು ವಾಹನ ನಿಲ್ಲಿಸುವುದಕ್ಕೂ ಅಧಿಕೃತ ಪಾರ್ಕಿಂಗ್‌ ತಾಣವೇ ಇಲ್ಲ. ಹೀಗಾಗಿ ಬೈಕೋ, ಕಾರಿನಲ್ಲೋ ಬಂದವರು ರಸ್ತೆ ಬದಿ ಅಥವಾ ಇನ್ನೆಲ್ಲೋ ವಾಹನ ನಿಲ್ಲಿಸಬೇಕಾದ ಸ್ಥಿತಿ ಇದೆ.

ಬಿ.ಸಿ.ರೋಡ್‌ನ‌ ಕೈಕುಂಜೆ ರಸ್ತೆಯ ಎರಡೂ ಭಾಗದಲ್ಲೂ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಅವುಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ ತೊಂದರೆಯಾಗುತ್ತಿದೆ. ಕೆಲವೊಮ್ಮೆ ರಸ್ತೆಯಲ್ಲೇ ವಾಹನಗಳು ನಿಲ್ಲುತ್ತಿದೆ. ಇನ್ನು ನಗರ ಪೊಲೀಸ್‌ ಠಾಣೆಯ ವಠಾರದಲ್ಲೂ ವಾಹನ ನಿಲ್ಲುತ್ತಿದ್ದು, ನ್ಯಾಯಾ ಲಯ- ಠಾಣೆಗೆ ತೆರಳುವ ರಸ್ತೆಯಲ್ಲೂ ವಾಹನ ನಿಂತಿರುತ್ತವೆ.

ಪೇ ಪಾರ್ಕಿಂಗ್‌ ಕೂಡ ಇಲ್ಲ

ಬಂಟ್ವಾಳ ಪುರಸಭೆಯಲ್ಲಿ ಸಾಕಷ್ಟು ಬಾರಿ ಪಾರ್ಕಿಂಗ್‌ ವಿಚಾರ ಚರ್ಚೆಯಾಗಿದ್ದು, ಇನ್ನೂ ಕೂಡ ಒಂದೇ ಒಂದು ಪಾರ್ಕಿಂಗ್‌ ಸ್ಥಳವನ್ನು ಗುರುತಿಸುವುದಕ್ಕೆ ಸಾಧ್ಯವಾಗಿಲ್ಲ. ಒಂದಷ್ಟು ಸರಕಾರಿ ಜಾಗಗಳನ್ನು ಗುರುತಿಸಿ ಪಾರ್ಕಿಂಗ್‌ ಗೆ ಬೇಕಾದ ವ್ಯವಸ್ಥೆ ಕಲ್ಪಿಸಿದರೆ ಪೇ ಪಾರ್ಕಿಂಗ್‌ ವ್ಯವಸ್ಥೆಯನ್ನಾದರೂ ಮಾಡಬಹುದು.

ನಗರದ ಮಧ್ಯ ಭಾಗದಲ್ಲಿ ಖಾಸಗಿ ಖಾಲಿ ಜಾಗಗಳನ್ನಾದರೂ ಲೀಸಿಗೆ ಪಡೆದು ಪೇ ಪಾರ್ಕಿಂಗ್‌ ಮೂಲಕ ವ್ಯವಸ್ಥೆ ಕಲ್ಪಿಸಿದರೆ ನಗರದ ಒತ್ತಡ ಕಡಿಮೆ ಮಾಡಬಹುದು. ನಗರದಲ್ಲಿ ಇದ್ದ ಒಂದಷ್ಟು ಭಾಗಗಳಲ್ಲಿ ಹಲವು ಬಗೆಯ ಬಾಡಿಗೆ ವಾಹನಗಳ ಪಾರ್ಕಿಂಗ್‌ ಸ್ಥಳಗಳಾಗಿ ಮಾರ್ಪಟ್ಟಿದ್ದು, ಪುರಸಭೆಯ ಬಳಿ ಕೇಳಿದರೆ ನಾವು ಯಾರಿಗೂ ಪಾರ್ಕಿಂಗ್‌ ತಾಣಕ್ಕೆ ಅನುಮತಿ ನೀಡಿಲ್ಲ ಎಂಬ ಉತ್ತರ ನೀಡುತ್ತಾರೆ. ಆದರೆ ಬಾಡಿಗೆ ವಾಹನದವರು ತಮ್ಮ ಸ್ಥಳದಲ್ಲಿ ಒಂದು ಬೈಕನ್ನು ನಿಲ್ಲಿಸಿದರೂ ತಗಾದೆ ತೆಗೆಯುತ್ತಾರೆ.

ಕಳೆದ ಮೂರು ತಿಂಗಳ ಹಿಂದೆ ಪುರಸಭೆಯ ನಿಯೋಗವೊಂದು ಬಿ.ಸಿ.ರೋಡ್‌ನ‌ಲ್ಲಿ ಪಾರ್ಕಿಂಗ್‌ ತಾಣಕ್ಕೆ ಸ್ಥಳ ಪರಿಶೀಲನೆ ನಡೆಸಿತ್ತು. ಕಳೆದ ಸಾಮಾನ್ಯ ಸಭೆಯಲ್ಲೂ ಸಾಕಷ್ಟು ಹೊತ್ತು ಪಾರ್ಕಿಂಗ್‌ ವಿಚಾರವೇ ಚರ್ಚೆಯಾಗಿತ್ತು. ಆದರೆ ಅದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇನ್ನೂ ಆರಂಭವಾಗಿಲ್ಲ. ಆದರೆ ಬಿ.ಸಿ.ರೋಡ್‌ನ‌ಲ್ಲಿ ದಿನ ಕಳೆದಂತೆ ವಾಹನಗಳು ಹೆಚ್ಚುತ್ತಲೇ ಇದ್ದು, ಪಾರ್ಕಿಂಗ್‌ ಸಮಸ್ಯೆಯೂ ವೃದ್ಧಿಯಾಗುತ್ತಲೇ ಇದೆ.

ಸರಕಾರಿ ಕಟ್ಟಡದಲ್ಲೂ ಪಾರ್ಕಿಂಗ್‌ ಇಲ್ಲ

ಬಿ.ಸಿ.ರೋಡ್‌ನ‌ ಬಹುತೇಕ ಖಾಸಗಿ ಕಟ್ಟಡಗಳಲ್ಲಿ ಪಾರ್ಕಿಂಗ್‌ ತಾಣಗಳಿಲ್ಲ. ಅಲ್ಲಿಗೆ ಆಗಮಿಸಿದ ಗ್ರಾಹಕ ಎಲ್ಲೋ ವಾಹನ ನಿಲ್ಲಿಸಿ ಬರಬೇಕಾದುದು ಒಂದೆಡೆಯಾದರೆ, ಸರಕಾರಿ ಕಟ್ಟಡಗಳಲ್ಲೂ ಪಾರ್ಕಿಂಗ್‌ ಸ್ಥಳಗಳಿಲ್ಲ. ಹೀಗಾಗಿ ಬಿ.ಸಿ.ರೋಡ್‌ ನಗರದ ಪಾರ್ಕಿಂಗ್‌ ಸಮಸ್ಯೆಯ ವಿಚಾರ ನಿತ್ಯ ಜೀವಂತವಾಗಿದೆ.ಬಿ.ಸಿ.ರೋಡ್‌ನ‌ ತಾಲೂಕು ಆಡಳಿತ ಸೌಧದ ಆವರಣದೊಳಗೆ ಒಂದಷ್ಟು ವಾಹನಗಳನ್ನು ನಿಲ್ಲಿಸುವುದಕ್ಕೆ ಅವಕಾಶವಿದ್ದರೂ, ಒಂದಷ್ಟು ಬೇರೆ ಕಡೆಗೆ ಕೆಲಸಕ್ಕೆ ಹೋಗುವವರು ಆವರಣದೊಳಗೆ ವಾಹನ ನಿಲ್ಲಿಸಿ ಹೋಗುತ್ತಾರೆ. ಮತ್ತೆ ಸಂಜೆಯೇ ವಾಹನ ತೆಗೆಯುತ್ತಾರೆ ಎಂಬ ಆರೋಪಗಳಿವೆ. ಹೀಗಾಗಿ ತಾಲೂಕು ಕಚೇರಿಗೆ ಆಗಮಿಸುವವರು ಹೊರಗಡೆಯೇ ನಿಲ್ಲಿಸಿ ಆಗಮಿಸಬೇಕಿದೆ.

ಇಲಾಖೆ ಸ್ಪಂದಿಸಿಲ್ಲ ಕಳೆದ ಸಾಮಾನ್ಯ ಸಭೆಯಲ್ಲಿ ವಾಹನ ಪಾರ್ಕಿಂಗ್‌ಗೆ ಸೂಕ್ತ ಸ್ಥಳಗಳನ್ನು ಗುರುತಿಸಿಕೊಡುವಂತೆ ಸಂಚಾರಿ ಪೊಲೀಸ್‌ ಇಲಾಖೆಗೆ ತಿಳಿಸಿದ್ದು, ಅವರಿಂದ ಪ್ರತಿಕ್ರಿಯೆ ಬಂದ ಬಳಿಕ ಅದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಿದ್ದೇವೆ. ಪ್ರಸ್ತುತ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರಿಗೆ ಮತ್ತೂಮ್ಮೆ ನೆನಪಿಸುವ ಕಾರ್ಯ ಮಾಡುತ್ತೇವೆ. -ಮೊಹಮ್ಮದ್‌ ಶರೀಫ್‌, ಅಧ್ಯಕ್ಷರು, ಬಂಟ್ವಾಳ ಪುರಸಭೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.