ತೊಡಿಕಾನ: ಅಂಗನವಾಡಿ ಕಟ್ಟಡ ಕಾಮಗಾರಿ ಆಮೆಗತಿ

 ಶಿಥಿಲ ಕಟ್ಟಡದಲ್ಲೇ ದಿನ ಕಳೆಯುತ್ತಿರುವ ಮಕ್ಕಳು; ಸೂಕ್ತ ನೀರಿನ ವ್ಯವಸ್ಥೆಯಿಲ್ಲ

Team Udayavani, May 15, 2019, 6:00 AM IST

19

ಅರಂತೋಡು: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಮೂರು ವರ್ಷದ ಬಳಿಕ ಮತ್ತೆ ಕಾಮಗಾರಿ ಆರಂಭಗೊಂಡು ಮತ್ತೆ ನಿಧಾನಗತಿಯಲ್ಲಿ ಸಾಗುತ್ತಿದೆ.

2015ನೇ ಇಸವಿಯ ಜನವರಿ ತಿಂಗಳಿನಲ್ಲಿ ನೂತನ ಅಂಗವಾಡಿ ಕಟ್ಟಡಕ್ಕೆ ಹಳೆಯ ಅಂಗವಾಡಿ ಕಟ್ಟಡದ ಪಕ್ಕದಲ್ಲಿಯೇ ಗುದ್ದಲಿ ಪೂಜೆ ನೆರವೇರಿಸಿ ಇಲಾಖೆ ಅನುದಾನ 4.18 ಲಕ್ಷ ರೂ. ಇಲಾಖೆ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಬಳಿಕ ಅನುದಾನದ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯ ಗ್ರಾ.ಪಂ. ವತಿಯಿಂದ 14ನೇ ಹಣಕಾಸು ಯೋಜನೆಯಲ್ಲಿ ಅನು ದಾನ ಮೀಸಲಿರಿಸಿ ಕಾಮಗಾರಿ ಮತ್ತೆ ಕೈಗೆತ್ತಿಕೊಳ್ಳಲಾಗಿದೆ.

ಅಪೂರ್ಣ ಕಾಮಗಾರಿ
ಇದೀಗ ಸ್ಲಾಬ್‌ ಕೆಲಸ ಪೂರ್ಣಗೊಂಡು ಗೋಡೆಯ ಗಾರೆ ಕೆಲಸವನ್ನು ಮುಗಿಸಲಾಗಿದೆ. ಶೌಚಾಲಯದ ಕೆಲಸ ನಡೆಯುತ್ತಿದೆ. ಅಡುಗೆ ಕೊಠಡಿಯ ಕೆಲಸ, ಕಿಟಕಿ, ಬಾಗಿಲು ನಿರ್ಮಾಣ ಆಗಬೇಕು. ವಿದ್ಯುತ್‌ ಸಂಪರ್ಕಕ್ಕೆ ವೈರಿಂಗ್‌ ಕೆಲಸ ನಡೆದಿದೆ. ಕಟ್ಟಡದ ಛಾವಣಿ ಮಳೆಗಾಲದಲ್ಲಿ ಸೋರುತ್ತಿದೆ. ಒಳಗಿನ ಎರಡು ಕೊಣೆಗಳಿಗೆ ಟೈಲ್ಸ್‌ ಹಾಕಲು ಬಾಕಿ ಉಳಿದಿದೆ. ಬಣ್ಣ ಬಳಿಯುವುದು ಸಹಿತ ಇತರ ಕೆಲಸ ಬಾಕಿ ಉಳಿದುಕೊಂಡಿವೆ.

ಶಿಥಿಲಗೊಂಡ ಕಟ್ಟಡ
ತೊಡಿಕಾನ ಅಂಗವಾಡಿ ಹಳೆಯ ಕಟ್ಟಡ ಶಿಥಿಲಗೊಂಡಿದ್ದು, ಇದರಲ್ಲಿಯೇ ಅಂಗವಾಡಿಯ ಮಕ್ಕಳು ಕಾಲ ಕಳೆಯುವಂತಾಗಿದೆ. ಸದ್ಯದಲ್ಲೇ ಮತ್ತೆ ಮಳೆಗಾಲ ಪ್ರಾರಂಭವಾಗುವುದರಿಂದ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಮಕ್ಕಳು ಈ ಮಳೆಗಾಲದಲ್ಲಿ ಹಳೆಯ ಕಟ್ಟಡದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಂಗನವಾಡಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪಕ್ಕದ ಪ್ರಾಥಮಿಕ ಶಾಲೆಯ ನೀರನ್ನು ಬಳಸುತ್ತಿದ್ದು, ಪ್ರಾಥಮಿಕ ಶಾಲೆಗೆ ಪ್ರತಿ ತಿಂಗಳು ಬರುವ ವಿದ್ಯುತ್‌ ಬಿಲ್‌ನ ಮೂರನೇ ಒಂದು ಭಾಗವನ್ನು ಅಂಗವಾಡಿ ಮಕ್ಕಳ ಹೆತ್ತವರಿಂದ ಸಂಗ್ರಹಿಸಿ ಪಾವತಿಸಲಾಗುತ್ತಿದೆ. ಜತೆಗೆ ಅಂಗನವಾಡಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಅಗತ್ಯವಾಗಿ ಕಾಡುತ್ತಿದೆ.

ಶೀಘ್ರ ಕೆಲಸ ಮುಗಿಸಲು ಸೂಚನೆ
ತೊಡಿಕಾನ ಅಂಗವಾಡಿಗೆ ನಾವು ಗ್ರಾ.ಪಂ.ನ 14ನೇ ಹಣಕಾಸು ಯೋಜನೆಯಲ್ಲಿ ಹಣವನ್ನು ಮೀಸಲಿರಿಸಿ ಕಾಮಗಾರಿ ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ಗುತ್ತಿಗೆದಾರರಿಗೆ ತತ್‌ಕ್ಷಣ ಕಾಮಗಾರಿ ಮುಗಿಸಿ ಕೊಡುವಂತೆ ಸೂಚನೆ ನೀಡುತ್ತೇವೆ.
– ನೀಲಾವತಿ ಕೊಡಂಕೇರಿ, ಅಧ್ಯಕ್ಷರು, ಅರಂತೋಡು ಗ್ರಾ.ಪಂ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.