Puttur; ಬಿಜೆಪಿಗೆ ಪುತ್ತಿಲ ಪರಿವಾರದಿಂದ ಮೂರು ದಿನಗಳ ಗಡುವು

ನಿಲುವು ಪ್ರಕಟಿಸದಿದ್ದರೆ ರಾಜಕೀಯ ಕ್ಷೇತ್ರಕ್ಕೆ

Team Udayavani, Feb 6, 2024, 7:30 AM IST

Puttur; ಬಿಜೆಪಿಗೆ ಪುತ್ತಿಲ ಪರಿವಾರದಿಂದ ಮೂರು ದಿನಗಳ ಗಡುವು

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಲಾಗುವುದು. ಸಕಾರಾತ್ಮಕ ಸ್ಪಂದನೆ ದೊರೆಯ ದಿದ್ದಲ್ಲಿ ಪುತ್ತಿಲ ಪರಿವಾರವು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ ಎಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಘೋಷಿಸಲಾಗಿದೆ.

ನಗರದ ಕೊಟೇಚಾ ಸಭಾಂಗಣದಲ್ಲಿ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯು ಫೆ.5ರಂದು ನಡೆಯಿತು. ಪುತ್ತಿಲ ಪರಿವಾರದ ಪರವಾಗಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾನ್ಯ ಕಾರ್ಯ ಕರ್ತರಾಗಿ ಅರುಣ್‌ಕುಮಾರ್‌ ಬಿಜೆಪಿ ಸೇರಬೇಕು ಎನ್ನುವುದನ್ನು ಯಾವುದೇ ಕಾರ್ಯಕರ್ತರು ಒಪ್ಪುವುದಿಲ್ಲ. ಅರುಣ್‌ 35 ವರ್ಷಗಳಿಗೂ ಅಧಿಕ ಕಾಲದಿಂದ ಅಧಿಕಾರದ ಆಸೆ ಇಲ್ಲದೆ ಸಂಘಟನೆ, ಪಕ್ಷಕ್ಕಾಗಿ ದುಡಿದವರು. ಹಾಗಾಗಿ ಷರತ್ತು ಬದಿಗಿಟ್ಟು ಅವರಿಗೆ ಕಾರ್ಯಕರ್ತರ ಅಪೇಕ್ಷೆಯಂತೆ ಸ್ಥಾನಮಾನ ನೀಡಬೇಕು ಎಂದರು.

ಕ್ಷಮೆ ಕೇಳುವುದಿಲ್ಲ
ಅರುಣ್‌ ಪುತ್ತಿಲ ಯಾರ ವಿರುದ್ಧವೂ ಅಗೌರವದಿಂದ ಮಾತನಾಡಿಲ್ಲ. ವಿಧಾನಸಭಾ ಚುನಾವಣೆ ಸಂದರ್ಭ ದಲ್ಲಿ ಯಾರು ಅಗೌರವದಿಂದ ಮಾತ ನಾಡಿದ್ದಾರೆ ಅನ್ನುವುದು ಎಲ್ಲರಿಗೂ ಗೊತ್ತಿ ರುವ ಸಂಗತಿ. ಹಾಗಾಗಿ ಅರುಣ್‌ ಯಾರಿಂದಲೂ ಕ್ಷಮೆ ಕೇಳಬಾರದು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕಾರ್ಯಕರ್ತರ ಅಪೇಕ್ಷೆಗೆ ಬದ್ಧ
ಅರುಣ್‌ ಪುತ್ತಿಲ ಮಾತನಾಡಿ, ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾಗುವ ನಿಟ್ಟಿನಲ್ಲಿ ಎರಡು 3 ಬಾರಿ ಮಾತುಕತೆ ನಡೆದಿತ್ತು. ರಾಜ್ಯದ ನಾಯಕರು ಮನಸ್ಸು ಮಾಡಿದ್ದರೂ ಪುತ್ತೂರಿನ ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ನರೇಂದ್ರ ಮೋದಿ ಹಾಗೂ ದೇಶದ ಹಿತಕ್ಕಿಂತ ಗೊಂದಲವೇ ಮುಖ್ಯವಾಗಿದೆ ಎಂದರು.

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು ಎಂದ ಪುತ್ತಿಲ, ವಿಧಾನಸಭಾ ಚುನಾ ವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಮಾಡಿದವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಡೆಯಲ್ಲಿ ನಿಂತು ಈ ಮಾತನ್ನು ಹೇಳಲಿ ಸವಾಲೆಸೆದರು.

ಪುತ್ತಿಲಗೆ ಎಂ.ಪಿ.ಟಿಕೆಟ್‌ ನೀಡಿ
ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು. ಒಂದೊಮ್ಮೆ ಬಿಜೆಪಿ ಸೇರ್ಪಡೆಗೆ ಅವಕಾಶ ಸಿಗದಿದ್ದರೆ ಪುತ್ತಿಲ ಪರಿವಾರದ ಮೂಲಕ ಅರುಣ್‌ ಕುಮಾರ್‌ ಲೋಕಸಭಾ ಚುನಾವಣೆಯ ಕಣಕ್ಕಿಳಿಯಬೇಕು ಎಂದು ಸಭೆಯಲ್ಲಿದ್ದ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅರುಣ್‌, ನಿಮ್ಮ ಅಪೇಕ್ಷೆಯಂತೆ ನಡೆದುಕೊಳ್ಳುವೆ ಎಂದು ಘೋಷಿಸಿದರು.

ಯಡಿಯೂರಪ್ಪ ಪಕ್ಷ ತೊರೆಯಲಿಲ್ಲವೇ?
ಯಡಿಯೂರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮೊದಲಾದವರು ಬಿಜೆಪಿ ತೊರೆದು ಚುನಾವಣೆಗೆ ಸ್ಪರ್ಧಿಸಿ ದ್ದರು. ಅವರಿಗೆಲ್ಲ ಮತ್ತೆ ಅವಕಾಶ ಸಿಕ್ಕಿದೆ. ಯಡಿಯೂರಪ್ಪನವರ ಪುತ್ರನಿಗೆ ರಾಜ್ಯಾಧ್ಯಕ್ಷತೆ ಸಿಕ್ಕಿದೆ. ಹಾಗಿರುವಾಗ ಅರುಣ್‌ ಪುತ್ತಿಲ ಮಾತ್ರ ಬರಬಾರದು ಅಂದರೆ ಏನರ್ಥ ಎಂದು ಶ್ರೀ ಕೃಷ್ಣ ಉಪಾಧ್ಯಾಯರು ಪ್ರಶ್ನಿಸಿದರು.
ಪುತ್ತಿಲ ಪರಿವಾರದ ಶಶಾಂಕ್‌ ಕೊಟೇಚಾ, ಪ್ರಸನ್ನ ಮಾರ್ಥ, ಉಮೇಶ್‌ ಕೋಡಿಬೈಲು, ಮನೀಶ್‌ ಕುಲಾಲ್‌, ಮಲ್ಲಿಕಾ ಪ್ರಸಾದ್‌, ಅನಿಲ್‌, ರಾಜೇಶ್‌ ಮೊದಲಾದವರಿದ್ದರು. ರವಿ ಕುಮಾರ್‌ ರೈ ಸ್ವಾಗತಿಸಿದರು. ನವೀನ್‌ ರೈ ಪಂಜಳ ನಿರೂಪಿಸಿದರು.

ಟಾಪ್ ನ್ಯೂಸ್

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಾಯಿ’ ಎನ್ನುತ್ತಾ ಪುತ್ರನನ್ನು ಕೊಂದಳಾ ತಾಯಿ?

Puttur:”ಸಾಯಿ’ ಎನ್ನುತ್ತಾ ಪುತ್ರನನ್ನು ಕೊಂದಳಾ ತಾಯಿ?

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಎಡಮಂಗಲ: ರೈಲು ಢಿಕ್ಕಿಯಾಗಿ ವ್ಯಕ್ತಿ ಸಾವು

ಎಡಮಂಗಲ: ರೈಲು ಢಿಕ್ಕಿಯಾಗಿ ವ್ಯಕ್ತಿ ಸಾವು

Bantwal ಬಿ.ಸಿ. ರೋಡಿನಲ್ಲಿ ಖೋಟಾ ನೋಟು ಗ್ಯಾಂಗ್‌ ಸೆರೆ

Bantwal ಬಿ.ಸಿ. ರೋಡಿನಲ್ಲಿ ಖೋಟಾ ನೋಟು ಗ್ಯಾಂಗ್‌ ಸೆರೆ

Puttur ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಹಲ್ಲೆ; ಇತ್ತಂಡದ ವಿರುದ್ಧ ಪ್ರಕರಣ ದಾಖಲು

Puttur ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಹಲ್ಲೆ; ಇತ್ತಂಡದ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-rain

Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ

9-sagara

Sagara: ಅಪಘಾತಕ್ಕೆ ಒಳಗಾದ ಅಂಬ್ಯುಲೆನ್ಸ್!

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.