ತಾಲೂಕಿನಾದ್ಯಂತ ಗುಡುಗು ಸಹಿತ ಉತ್ತಮ ಮಳೆ
Team Udayavani, May 21, 2018, 4:03 PM IST
ಬೆಳ್ತಂಗಡಿ: ತಾಲೂಕಿನಾದ್ಯಾಂತ ಶನಿವಾರ ರಾತ್ರಿ ಗುಡುಗು ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸುರಿದಿದೆ. ತಾಲೂಕಿನ ಉಜಿರೆ, ಧರ್ಮಸ್ಥಳ, ಮುಂಡಾಜೆ, ಚಾರ್ಮಾಡಿ, ಕಕ್ಕಿಂಜೆ, ಗುರುವಾಯನಕೆರೆ, ಅಳದಂಗಡಿ, ಗೇರುಕಟ್ಟೆ, ಕಣಿಯೂರು, ಕೊಯ್ಯೂರು, ಪದ್ಮುಂಜ ಮೊದಲಾದೆಡೆ ಉತ್ತಮ ಮಳೆಯಾಗಿದೆ.
ರಾತ್ರಿ ಸುಮಾರು 1.30ರಿಂದ ಮಳೆ ಸುರಿಯಲು ಆರಂಭವಾಗಿದ್ದು, 3 ಗಂಟೆ ಯವರೆಗೂ ಉತ್ತಮ ಮಳೆಯಾಗಿದೆ. ಈ ವೇಳೆ ಗಾಳಿಯೂ ಬೀಸಿರುವುದರಿಂದ ಅತಂಕ ಸೃಷ್ಟಿಸಿತ್ತು. ಆದರೆ ಯಾವುದೇ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಕೃಷಿಕರಿಗೆ ಸಮಸ್ಯೆ ರಾತ್ರಿ ಧಿಡೀರನೇ ಮಳೆ ಬಂದ ಪರಿಣಾಮ ಕೃಷಿಕರಿಗೆ ಸಮಸ್ಯೆ ಉಂಟಾಯಿತು. ಅಡಕೆ ಬೆಳೆಗಾರರಿಗೆ ಸಮಸ್ಯೆ ಎದುರಾಯಿತು. ಈಗಾಗಲೇ ಹಲವು ಬಾರಿಮಳೆ ಸುರಿದಿದ್ದರಿಂದ ಕೆಲ ಕೃಷಿಕರು ಪೂರ್ವ ತಯಾರಿ ಮಾಡಿಕೊಂಡಿದ್ದರಿಂದ ಹೆಚ್ಚಿನ ಸಮಸ್ಯೆ ಎದುರಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು