‘ಗ್ರಾಮೀಣ ಕ್ರೀಡೆ, ಸಂಸ್ಕೃತಿ ಉಳಿಸುವುದು ಅವಶ್ಯ’
Team Udayavani, Aug 17, 2018, 3:32 PM IST
ಸವಣೂರು: ನಶಿಸಿ ಹೋಗುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತುಳುನಾಡ ಆಟಗಳನ್ನು ನಡೆಸುವುದು ಅಗತ್ಯ. ಯುವ ಮನಸ್ಸುಗಳಿಂದ ಸಂಸ್ಕೃತಿಯ ಚಟುವಟಿಕೆಯನ್ನು ಪಸರಿಸಲು ಸಾಧ್ಯ. ಪರಂಪರಾಗತ ಕೃಷಿ ಜತೆಗೆ ನಾಡಿನ ಗ್ರಾಮೀಣ ಕ್ರೀಡೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ ಪ್ರಯತ್ನ ಶ್ಲಾಘನೀಯ ಎಂದು ಸವಣೂರು ಬೊಳ್ಳಿಬೊಲ್ಪು ತುಳು ಕೂಟದ ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಹೇಳಿದರು.
ಅವರು ನೆಹರೂ ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಸಹಯೋಗದಲ್ಲಿ ಅಭ್ಯುದಯ ಯುವಕ ಮಂಡಲ ಚೆನ್ನಾವರ ಇದರ ಅಶ್ರಯದಲ್ಲಿ ನಡೆದ ಆಟಿದ ಕೂಟ ಹಾಗೂ ಕೆಸರುಗದ್ದೆ ಜನಪದ ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ಕಳಶೆಗೆ ಭತ್ತ ಹೊಯ್ಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸ ನೀಡಿದ ಸಾಹಿತಿ, ಬಾಳಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ರೈ ಪಾಲ್ತಾಡಿ, ಯುವಜನತೆ ಸಮಾಜದಲ್ಲಿ ಇಂತಹ ಕಾರ್ಯವನ್ನು ನಡೆಸುವ ಮೂಲಕ ಸಾಮರಸ್ಯ ಬೆಳೆಯಲು ಸಾಧ್ಯ. ಸಮಾಜಮುಖೀ ಕಾರ್ಯದ ಜತೆಗೆ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತೋರಿಸುವ ಶ್ರಮ ಶ್ಲಾಘನೀಯ. ನಮ್ಮ ಪೂರ್ವಜರ ಪ್ರತಿಯೊಂದು ಆಚರಣೆಗೂ ಮಹತ್ವವಿದೆ. ಅದನ್ನು ಎಲ್ಲರೂ ತಿಳಿದು ಕೊಳ್ಳಬೇಕು. ಹಾಲೆ ಮರದ ಕಷಾಯ ಕುಡಿಯುವುದ ಕ್ಕೂ ವೈಜ್ಞಾನಿಕ ಕಾರಣಗಳಿವೆ. ಆಟಿ ತಿಂಗಳಲ್ಲಿ ಹೆಣ್ಣು ಮಗಳನ್ನು ತವರಿಗೆ ಕರೆತರುವ ಪದ್ಧ ತಿಯೂ ವಿಶಿಷ್ಟವಾಗಿದೆ ಎಂದರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿರ್ದೇಶಕ ಎನ್.ಎಸ್. ವೆಂಕಪ್ಪ ಗೌಡ ನಾರ್ಕೋಡು, ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕಡಬ ನವಜ್ಯೋತಿ ನ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಕಿಶನ್ ಕುಮಾರ್ ರೈ ಹಾಗೂ ಯುವ ಉದ್ಯಮಿ ಸಹಜ್ ರೈ ಬಳಜ್ಜ ಮಾತನಾಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಸಹನಾ ಹಾಗೂ ಸರಿತಾ ಅವರನ್ನು ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ನೆಹರೂ ಯುವ ಕೇಂದ್ರದ ಸಂಯೋಜಕಿ ಜಿಸ್ಮಿತಾ ಕೆ.ಆರ್., ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ಬಣ್ಣ ದಾಸ್, ಅಧ್ಯಕ್ಷ ರವಿ ಎ.ಕೆ., ಕಾರ್ಯದರ್ಶಿ ಧೀರಜ್ ರೈ, ಹಿರಿಯರಾದ ನಾರಾಯಣ ರೈ ಪಟ್ಟೆ, ಯುವಕ ಮಂಡಲದ ಕ್ರೀಡಾ ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಜಗದೀಶ್ ಚೆನ್ನಾವರ, ಪ್ರಮೋದ್ ಕುಮಾರ್, ಕೃತೇಶ್ ರೈ, ಹರ್ಷಿತ್ ರೈ, ಪುಟ್ಟಣ್ಣ ನಾಯ್ಕ, ಧರ್ಮಪಾಲ, ಚರಣ್ ರೈ, ಹರೀಶ್ ರೈ, ಶೆರೀಫ್ ಕುಂಡಡ್ಕ, ವಿಶ್ವನಾಥ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ದೇಶಕ ದಿನೇಶ್ ಎನ್. ಸುವರ್ಣ ಸ್ವಾಗತಿಸಿ, ಯುವಕ ಮಂಡಲದ ಗೌರವಾಧ್ಯಕ್ಷ ದೀಕ್ಷಿತ್ ಜೈನ್ ವಂದಿಸಿದರು. ವಿಜೇತ್ ರೈ ಅಂಕತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ