ಇಂದೋ, ನಾಳೆಯೋ ಎನ್ನುತ್ತಿದೆ ಸಾರಕರೆ ಅಣೆಕಟ್ಟು


Team Udayavani, Jun 12, 2019, 5:50 AM IST

h-19

ಸವಣೂರು: ಕಿಂಡಿ ಅಣೆಕಟ್ಟುಗಳು ಜನತೆಯ ಜೀವನಾಡಿಗಳಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಇಲಾಖೆಗಳ ನಿರ್ವಹಣೆ ಕೊರತೆಯಿಂದ ಜನರಿಗೆ ಪೂರಕವಾಗಿರಬೇಕಾದ ಕಿಂಡಿ ಅಣೆಕಟ್ಟುಗಳು ಉಪಯೋಗ ಶೂನ್ಯವಾಗುತ್ತಿವೆ.

ಸವಣೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣcಪ್ಪಾಡಿ ಗ್ರಾಮದ ಸಾರಕರೆಯಲ್ಲಿರುವ ಕಿಂಡಿ ಅಣೆಕಟ್ಟು ನಿರ್ವಹಣೆ ಕೊರತೆಯಿಂದ ಸಂಪೂರ್ಣವಾಗಿ ನೆಲಕಚ್ಚುವ ಸ್ಥಿತಿಯಲ್ಲಿದೆ. ಸಣ್ಣ ನೀರಾವರಿ ಇಲಾಖೆಯ ಮೂಲಕ ನಿರ್ಮಾಣಗೊಂಡ ಈ ಕಿಂಡಿ ಅಣೆಕಟ್ಟು ಸೂಕ್ತ ನಿರ್ವಹಣೆಯ ಕೊರತೆಯಿಂದ ಉಪಯೋಗ ಶೂನ್ಯವಾಗಿದೆ. ಮಾತ್ರವಲ್ಲದೆ ಸಂಪೂರ್ಣ ನಾದುರಸ್ತಿಯಲ್ಲಿದ್ದು ಕುಸಿದು ಬೀಳುವ ಹಂತದಲ್ಲಿದೆ.

ಗೌರಿ ಹೊಳೆಯಲ್ಲಿ ಈ ಕಿಂಡಿ ಅಣೆಕಟ್ಟಿನ ಮುಂದೆ ಅಜಿಲೋಡಿ ಸೊರಕೆಯ ಕಿಂಡಿ ಅಣೆಕಟ್ಟು ಕೂಡ ನಾದುರಸ್ತಿಯಲ್ಲಿತ್ತು. ಈಗ ಅದರ ದುರಸ್ತಿ ಕಾರ್ಯ ನಡೆದಿದೆ. ಸಾರಕರೆ ಕಿಂಡಿ ಅಣೆಕಟ್ಟಿನ ಅಭಿವೃದ್ಧಿಯ ಕುರಿತೂ ಇಲಾಖೆ ಗಮನಹರಿಸಬೇಕಿದೆ.

ಅನುದಾನ ಬಂದರೆ ಸಾಲದು
ಗ್ರಾಮೀಣ ಭಾಗದ ನೀರಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ದೃಷ್ಟಿಯಿಂದ ನಿರ್ಮಾಣ ಮಾಡಲಾದ ಇಂತಹ ಅಣೆಕಟ್ಟುಗಳ ಸ್ಥಿತಿಯನ್ನು ಸುಧಾರಿಸಲು ಇಲಾಖೆ ಗಮನಹರಿಸಬೇಕಾಗಿದೆ. ಸರಕಾರದಿಂದ ಅನುದಾನ ಬರುತ್ತದೆ. ಅದನ್ನು ಬಳಸಿ ನಿರ್ಮಾಣ ಮಾಡಿದರೆ ಯೋಜನೆಯ ಉದ್ದೇಶ ಈಡೇರುವುದಿಲ್ಲ. ಕಿಂಡಿ ಅಣೆಕಟ್ಟಿನ ಗುಣಮಟ್ಟ ಮತ್ತು ಪ್ರಯೋಜನಗಳ ಕುರಿತು ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಕೃಷಿಕರಿಗೆ ವರದಾನ
ಈ ಭಾಗದ ಜಲಸಂರಕ್ಷಣೆಯ ಮೂಲವಾಗಿದ್ದ ಈ ಕಿಂಡಿ ಅಣೆಕಟ್ಟು ಕೃಷಿಕರಿಗೆ ವರದಾನವಾಗಿತ್ತು. ಈ ಭಾಗದ ಅನೇಕ ಕೃಷಿಕರಿಗೆ ನೀರೊದಗಿಸುತ್ತಿತ್ತು. ಸುತ್ತಮುತ್ತಲಿನ ಕೆರೆ, ಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಿದ್ದ ಈ ಅಣೆಕಟ್ಟಿನ ಈಗಿನ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ.

ಗಮನ ಹರಿಸಲಿ
ಅಂತರ್ಜಲ ಹೆಚ್ಚಳದ ಜತೆಗೆ ಈ ಭಾಗದ ಕೃಷಿಕರಿಗೆ ಬಲು ಉಪಯೋಗಕಾರಿಯಾಗಿದ್ದ ಕಿಂಡಿ ಅಣೆಕಟ್ಟು ದುರಸ್ತಿ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
– ಕರುಣಾಕರ ಸಾರಕರೆ ಸ್ಥಳೀಯರು

ಗಮನಕ್ಕೆ ತರಲಾಗಿದೆ
ಪುಣಪ್ಪಾಡಿ ಗ್ರಾಮದ ಸಾರಕರೆ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಕುಸಿದು ಬೀಳುವ ಹಂತದಲ್ಲಿದೆ. ಕಾಮಗಾರಿ ನಡೆಸುವಾಗ ಗುಣಮಟ್ಟದ ಕುರಿತು ಗಮನಹರಿಸದೇ ಇದ್ದುದೇ ಈ ರೀತಿಯ ಅವ್ಯವಸ್ಥೆಗೆ ಕಾರಣವಾಗಿದೆ. ಈ ಕುರಿತು ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಗಮನಕ್ಕೆ ತರಲಾಗಿದೆ.
– ಗಿರಿಶಂಕರ ಸುಲಾಯ ಸವಣೂರು ಗ್ರಾ.ಪಂ. ಸದಸ್ಯರು

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.