ಪತ್ನಿ ಸಾವನ್ನಪ್ಪಿದ ಕೆಲವೇ ತಾಸಿನಲ್ಲಿ ಪತಿ ಸಾವು
Team Udayavani, Jun 24, 2021, 6:45 AM IST
ಬೆಳ್ತಂಗಡಿ: ಕೋವಿಡ್ ಸೋಂಕು ಬಾಧಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪತಿ ಹಾಗೂ ಪತ್ನಿ 24 ಗಂಟೆಯ ಅಂತರದಲ್ಲಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ.
ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58) ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಜೂ. 22ರಂದು ಮೃತಪಟ್ಟರೆ, ಅವರ ಪತಿ ಇಬ್ರಾಹಿಂ (68) ಜೂ. 23ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜೂ. 19ರಂದು ಇಬ್ಬರಿಗೂ ಕೋವಿಡ್ ಇರುವುದು ದೃಢಪಟ್ಟಿದ್ದ ಕಾರಣ ಸಾರಮ್ಮ ಅವರನ್ನು ಮೊದಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಬಳಿಕ ಪತಿ ಇಬ್ರಾಹಿಂ ಹೃದಯ ಸಂಬಂಧಿ ಕಾಯಿಲೆ ತೀವ್ರಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಕಳೆದ ಕೆಲವು ದಿನಗಳಿಂದ ಇವರಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸಾರಮ್ಮ ಮಂಗಳವಾರ ಮೃತಪಟ್ಟರೆ ಪತಿ ಇಬ್ರಾಹಿಂ ಬುಧವಾರ ಸಾವನ್ನಪ್ಪಿದ್ದಾರೆ. ಇವರಿಬ್ಬರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಮೃತರ ಅಂತ್ಯಸಂಸ್ಕಾರ ನೆರಿಯ ಜುಮ್ಮಾ ಮಸ್ಜಿದ್ ದಫನ ಭೂಮಿಯಲ್ಲಿ ಕೋವಿಡ್ ನಿಯಮಾನುಸಾರ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ