ಬೆಳ್ತಂಗಡಿ: ವಿವಾಹಿತೆ ನೇಣುಬಿಗಿದು ಆತ್ಮಹತ್ಯೆ, ಆಘಾತದಿಂದ ಪತಿ ಆತ್ಮಹತ್ಯೆಗೆ ಯತ್ನ
Team Udayavani, Oct 18, 2021, 5:49 PM IST
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಪುತ್ಯೆಯಲ್ಲಿ ವಾಸ್ತವ್ಯವಿರುವ ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ಮಧ್ಯಾಹ್ನದ ವೇಳೆ ನಡೆದಿದೆ.
ಕೊಕ್ಕಡ ಗ್ರಾಮದ ಪುತ್ಯೆ ನಿವಾಸಿ ರಾಜೇಶ್ ಅವರ ಪತ್ನಿ ರಶ್ಮಿತಾ (28) ಆತ್ಮಹತ್ಯೆ ಮಾಡಿಕೊಂಡವರು.
ರಾಜೇಶ್ ಮತ್ತು ರಶ್ಮಿತಾ ದಂಪತಿ ತಮ್ಮ ಮಗುವಿನೊಂದಿಗೆ ಪುತ್ಯೆಯಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ರಶ್ಮಿತಾರವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಚಾರ ತಿಳಿದು ಮನೆಗೆ ಧಾವಿಸಿದ ಪತಿ ರಾಜೇಶ್ ಅವರೂ ಆತ್ಮಹತ್ಯೆ ಮುಂದಾಗಿದ್ದು, ಕೂಡಲೇ ಸ್ಥಳೀಯರು ತಡೆದಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ