ಸ್ವಚ್ಛ ಪರಿಸರ ಎಲ್ಲರ ಜವಾಬ್ದಾರಿ: ಡಾ| ಹೆಗ್ಗಡೆ 


Team Udayavani, Oct 10, 2018, 2:06 PM IST

10-october-10.gif

ಬೆಳ್ತಂಗಡಿ: ಭಾರತವು ಮಾಹಿತಿ ತಂತ್ರಜ್ಞಾನ, ಆರ್ಥಿಕತೆಯಲ್ಲಿ ಇತರ ದೇಶಗಳಿಗೆ ಸಮಾನವಾಗಿ ಬೆಳೆದಿದ್ದರೂ ಸ್ವಚ್ಛತೆಯ ನಾಗರಿಕ ಪ್ರಜ್ಞೆಯಲ್ಲಿ ಭಾರತೀಯರು ಇನ್ನೂ ಪ್ರಗತಿ ಸಾಧಿಸಬೇಕಿದೆ. ನಮ್ಮ ಪೂರ್ವಜರಿಂದ ಪಡೆದ ಸ್ವಚ್ಛ ಪರಿಸರ ವನ್ನು ಮುಂದಿನ ಜನಾಂಗಕ್ಕೂ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಸ್ವಚ್ಛತಾ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಬೆಳ್ತಂಗಡಿ ತಾಲೂಕಿನಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮದ ಮೊದಲ ಹೆಜ್ಜೆಯಾಗಿ ಸ್ವಚ್ಛತಾ ಸೇನಾನಿಗಳಿಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾರತ ಅಭಿವೃದ್ಧಿ ನಿಟ್ಟಿನಲ್ಲಿ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ. ಜ್ಞಾನವಿಕಾಸದ ಕಲ್ಪನೆ ಮೂಲಕ ಹೇಮಾವತಿ ಹೆಗ್ಗಡೆ ಮಹಿಳೆಯರಿಗೆ ಸ್ವಾಭಿಮಾನದ ಬದುಕು ನೀಡಿದ್ದಾರೆ. ಸ್ವಚ್ಛತೆ ವಿಚಾರದಲ್ಲಿ ಬೆಳ್ತಂಗಡಿ ತಾ| ರಾಷ್ಟ್ರಮಟ್ಟದಲ್ಲೇ ಹೆಸರು ಗಳಿಸಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿಯವರು ಸ್ವಚ್ಛತಾ ಸೇನಾನಿಗಳ ಟೀಶರ್ಟ್‌, ಕೈಪಿಡಿ ಬಿಡುಗಡೆಗೊಳಿಸಿ ಸಾಂಕೇತಿಕವಾಗಿ ಸ್ವಚ್ಛತಾ ಪರಿಕರಗಳನ್ನು ವಿತರಿಸಿದರು. ತಾ.ಪಂ. ಇಒ ಕುಸುಮಾಧರ ಬಿ. ಶುಭಾ ಶಂಸನೆಗೈದು, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಸವಾಲಿನ ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪ್ರಯತ್ನ ಪ್ರಶಂಸನೀಯ ಎಂದರು.

ಶ್ರೀಕ್ಷೇತ್ರದ ಹೇಮಾವತಿ ವಿ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ಮೋಹನ ಅಂಡಿಂಜೆ, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ, ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್‌ ಉಪಸ್ಥಿತರಿದ್ದರು.

ಗ್ರಾ. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿ, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ವಂದಿಸಿದರು. ಪ್ರವೀಣ್‌ ನಿರೂಪಿಸಿದರು.

ಶಾಶ್ವತ ಯೋಜನೆ
70 ವರ್ಷಗಳ ಹಿಂದೆ ತೀರಾ ಹಿಂದುಳಿದಿದ್ದ ಭಾರತವು ಬಳಿಕ ಅತ್ಯದ್ಭುತ ಪ್ರಗತಿ ಕಂಡು ಶ್ರೀಮಂತ ರಾಷ್ಟ್ರಗಳಿಗೆ ಸಮಾನಾಗಿ ಬೆಳೆದಿದೆ. ಆದರೆ ಸ್ವಚ್ಛತೆ ವಿಚಾರದಲ್ಲಿ ಭಾರತ ಸಾಕಷ್ಟು ಹಿಂದೆ ಇದೆ. ಹೀಗಾಗಿ ಗ್ರಾಮೀಣ ಭಾಗದ ಜನಪ್ರತಿನಿಧಿಗಳು ಶಾಶ್ವತ ಸ್ವಚ್ಛತಾ ಯೋಜನೆಗಳಿಗೆ ಮನಸ್ಸು ಮಾಡಬೇಕಿದೆ.
ಡಾ| ಡಿ. ವೀರೇಂದ್ರ ಹೆಗ್ಗಡೆ
   ಧರ್ಮಾಧಿಕಾರಿ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.