ಕಾಳುಮೆಣಸಿನ ಸೊರಗು ರೋಗ ತಡೆಗೆ ಕಸಿ ಕಟ್ಟುವ ಉಪಾಯ

 ಅಡ್ಯನಡ್ಕದ ಶರ್ಮಾ ದಂಪತಿ ಸಾಧನೆ

Team Udayavani, Sep 10, 2019, 5:01 AM IST

y-25

ಅಡ್ಯನಡ್ಕ: ಕಾಳುಮೆಣಸು ಸಂಬಾರ ಪದಾರ್ಥಗಳ ರಾಜ. ಕಾಳುಮೆಣಸಿಗೆ ಬರುವ ರೋಗ ಸೊರಗು ರೋಗ. ಈ ವರ್ಷ ಕ್ವಿಂಟಾಲ್‌ ಕಾಳುಮೆಣಸು ಪಡೆ ದವನು ಮುಂದಿನ ವರ್ಷ ಒಂದು ಕಿಲೋ ಕಾಳುಮೆಣಸೂ ಕೊಯ್ಯಲಾರ. ಇದಕ್ಕೆ ನಮ್ಮ ಕೃಷಿಕ ವಿಜ್ಞಾನಿಗಳು ಕಂಡುಕೊಂಡ ಉಪಾಯ ಹಿಪ್ಪಲಿ ಬಳ್ಳಿಗೆ ಕಾಳುಮೆಣಸಿನ ತಳಿಯ ಕಸಿ.

ಹಿಪ್ಪಲಿ ಬಳ್ಳಿಗೆ ಈ ಸೊರಗು ನಿರೋಧ‌ಕ ಶಕ್ತಿ ಇದೆ. ತೋಟದಲ್ಲಿ ಸಾವಿರಾರು ಬಳ್ಳಿ ಗಳಿಗೆ ಇಂತಹ ಕಸಿ ಮಾಡಿ ಕಾಳುಮೆಣಸಿನ ಕೃಷಿಯಲ್ಲಿ ಗೆದ್ದವರು ಜಯಾನಂದ – ವೀಣಾ ಶರ್ಮಾ ದಂಪತಿ ಪಂಜಿಕಲ್ಲು.

ಕಸಿ ಮೂಲಕ ಬಳ್ಳಿ ಅಭಿವೃದ್ಧಿ
ದ.ಕ. ಜಿಲ್ಲೆಯ ಅಡ್ಯನಡ್ಕ ಸಮೀಪದ ಪಂಜಿಕಲ್ಲು ಇವರ ಕೃಷಿ ಕಾರ್ಯ ಕ್ಷೇತ್ರ. ಹಿರಿಯರಿಂದ ಬಂದ ಅಡಿಕೆ ತೋಟ. ಹಾಲಿನ ಡೇರಿ ಉಪ ವೃತ್ತಿ. ಸಾವಯವ ಕೃಷಿ. ಅಡಿಕೆ ಜತೆಗೆ ಬಾಳೆ, ತೆಂಗು, ಕಾಳುಮೆಣಸು ಉಪ ಬೆಳೆಗಳು. ಕಾಳುಮೆಣಸು ಬಳ್ಳಿಗೆ ಸೊರಗು ರೋಗ ಬಂದು ಸಾಯುತ್ತಿತ್ತು. ಇದಕ್ಕಾಗಿ ಇವರು ಕಂಡುಕೊಂಡ ಪರಿಹಾರ ಕಸಿ ಮೂಲಕ ಕಾಳು ಮೆಣಸಿನ ಬಳ್ಳಿ ಅಭಿವೃದ್ಧಿ.

ಕೃಷಿ ವಿಜ್ಞಾನಿಯ ಸಲಹೆ
ಕೃಷಿ ವಿಜ್ಞಾನಿ ಯದು ಕುಮಾರ್‌ ಪುತ್ತೂರು ಇವರಿಗೆ ಕಾಳುಮೆಣಸಿನ ಕಸಿ ಕಲಿಸಿದವರು. 4 ವರ್ಷಗಳ ಹಿಂದೆ ಅವರ ನಿರ್ದೇಶನದಂತೆ ಹಿಪ್ಪಲಿ ತಾಯಿ ಬಳ್ಳಿಗೆ ಕಸಿ ಕಟ್ಟಿದ 30 ಕಾಳುಮೆಣಸಿನ ಬಳ್ಳಿ ತಂದು ನೆಟ್ಟರು. ಕಾಂಡವಾಗಿ ನೆಲಕ್ಕೆ ಬೇರಿಳಿಸುವ ತಾಯಿ ಹಿಪ್ಪಲ ಗಿಡದ ಕಸಿ ಭಾಗ ಎಳತಾಗಿರಬೇಕು. ಕಸಿ ಕಟ್ಟುವ‌ ಸಯಾನ್‌ ಬೆಳೆದ ಉತ್ತಮ ಇಳುವರಿಯ ಕಾಳುಮೆಣಸಿನ ಎರಡು ಗಂಟು ಇರುವ ಬೆಳೆದ ಕಾಂಡವಾಗಿರಬೇಕು ಎನ್ನುವುದು ಮುಖ್ಯ. ಇದು ಮೃದು ಕಾಂಡ ಕಸಿ ವಿಧಾನದ ಪ್ರಮುಖ ವಿಷಯ. ಅಡಿಕೆ ಮರದ ಬುಡದಲ್ಲೇ ನೆಟ್ಟು ಬೆಳೆಸಿದ ಹಿಪ್ಪಲಿ ತಾಯಿ ಗಿಡ ಕಸಿಗೆ ಅತ್ಯುತ್ತಮ.

ಕಸಿ ತಾಯಿ ಗಿಡಕ್ಕಾಗಿ ಹಿಪ್ಪಲಿ ಬಳ್ಳಿ ಯನ್ನು ಮರದ ಬುಡಕ್ಕೆ ಹತ್ತಿರವಾಗಿ ನೆಟ್ಟು ಬೆಳೆಸಬೇಕು ಎನ್ನುತ್ತಾರಿವರು. ದೂರ ನೆಟ್ಟು ಬಾಗಿಸಿದ್ದಲ್ಲಿ ಅತಿಯಾಗಿ ಹಿಪ್ಪಲಿ ಚಿಗುರೊಡನೆ ಕಸಿ ಕಟ್ಟುವ ಕಾಳು ಮೆಣಸಿನ ಗಿಡದ ಬೆಳವಣಿಗೆ ಕುಂಠಿತವಾಗುತ್ತದೆ. ಒಂದು ಮರದ ಬುಡದಲ್ಲಿ 2-3 ಹಿಪ್ಪಲ ಗಿಡವನ್ನು ತಾಯಿ ಗಿಡವಾಗಿ ಬೆಳೆಸಿ 1.5- 2 ಅಡಿ ಎತ್ತರದಲ್ಲಿ ಉತ್ತಮ ಇಳುವರಿ ನೀಡುವ ಕಾಳುಮೆಣಸಿನ ಬಳ್ಳಿಯನ್ನು ಕಸಿ ಕಟ್ಟಿ ಬೆಳೆಸಬೇಕು. ಈ ಕಸಿ ಬಳ್ಳಿ ಬೆಳೆಯುತ್ತಾ ಮೇಲೇರುವಾಗ ಚಿಗುರು ಚಿವುಟಿ ಟಿಸಿಲೊಡೆಯುವಂತೆ ಮಾಡಿ. ಮರ ತುಂಬಾ 5-6 ಬಳ್ಳಿಗಳು ಹರಡಿ ಮೇಲೇರುತ್ತವೆ. ಹೆಚ್ಚು ಇಳುವರಿ ಸಿಗುತ್ತದೆ.

ಶರ್ಮಾ ದಂಪತಿ ಕಸಿ ಕಟ್ಟುವುದರಲ್ಲಿ ನೈಪುಣ್ಯ ಸಾಧಿಸಿದ್ದಾರೆ. ಹಿಪ್ಪಲಿ ಗಿಡವನ್ನು ಅಡಕೆ ಮರದ ಬುಡದಲ್ಲಿ ನೆಟ್ಟು ಬೆಳೆಸುತ್ತಾ ಅದರ ಮೃದು ಕಾಂಡವನ್ನು ಆಯ್ದು, ದಿನಾಲೂ 10-15 ನಿಮಿಷ ಬಿಡುವು ಮಾಡಿಕೊಂಡು 4-5 ಹಿಪ್ಪಲಿ ಗಿಡಕ್ಕೆ ಕಸಿ ಕಟ್ಟುತ್ತಾರೆ. ಕಸಿ ಕಟ್ಟಿದ ಭಾಗ ಒಣಗಿ ಹೋಗದಂತೆ ಲಾಲಿಯ ಪ್ಲಾಸ್ಟಿಕ್‌ ತೊಟ್ಟೆಯನ್ನು ಕಟ್ಟಿ ರಕ್ಷಣೆ ಮಾಡುತ್ತಾರೆ.
ಇವರು ಕಳೆದ 4 ವರ್ಷಗಳಲ್ಲಿ ಕಸಿ ಮಾಡಿದ ಗಿಡಗಳು ಸುಮಾರು 2 ಸಾವಿರಕ್ಕೂ ಮಿಕ್ಕಿವೆ. ಈ ವರ್ಷ ಇವರಿಗೆ ಉತ್ತಮ ಇಳುವರಿ ದೊರೆತಿದೆ.

ಸೊರಗು ರೋಗಕ್ಕೆ ಮದ್ದು
ಹಿಪ್ಪಲಿ ಬಳ್ಳಿ ಮಣ್ಣಿನ ಮೂಲಕ ಬರುವ ಸೊರಗುರೋಗ ಪ್ರತಿರೋಧ ಶಕ್ತಿಯುಳ್ಳ ಸಸ್ಯ. ಹಿಪ್ಪಲಿ ಬಳ್ಳಿ ತಂಪಾದ ಸ್ಥಳದಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮಳೆಗಾಲದಲ್ಲಿ ಬುಡದಲ್ಲಿ ಗಂಟೆಗಟ್ಟಲೆ ನೀರು ನಿಂತರೂ ಕೊಳೆಯುವ ಭಯವಿಲ್ಲ. ಕ್ವಿಕ್‌ ವಿಲ್ಟ್ (ಸೊರಗು ರೋಗ) ನಿರೋಧಕ ಶಕ್ತಿ ಹಿಪ್ಪಲಿ ಬಳ್ಳಿಗಿದೆ.
-ಯದುಕುಮಾರ್‌ ಪುತ್ತೂರು, ಕೃಷಿ ವಿಜ್ಞಾನಿ

-  ಶಂಕರ್‌ ಸಾರಡ್ಕ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.