ನದಿಗಳಲ್ಲಿ ಸಿಲುಕಿರುವ ಮರಗಳು: ಅಪಾಯಕ್ಕೆ ಆಹ್ವಾನ

ಕಳೆದ ಮಳೆಗಾಲದಲ್ಲಿ ತೇಲಿ ಬಂದಿದ್ದ ಮರಗಳು ತೆರವಾಗಿಲ್ಲ

Team Udayavani, Aug 10, 2020, 10:22 PM IST

ನದಿಗಳಲ್ಲಿ ಸಿಲುಕಿರುವ ಮರಗಳು: ಅಪಾಯಕ್ಕೆ ಆಹ್ವಾನ

ಮುಂಡಾಜೆ: ಬೆಳ್ತಂಗಡಿ ತಾ|ನ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ನದಿಯಲ್ಲಿ ಚಾರ್ಮಾಡಿ ಗ್ರಾಮದ ಫರ್ಲಾಣಿಯಿಂದ ಕಲ್ಮಂಜ ಗ್ರಾಮದ ಫಜಿರಡ್ಕ ತನಕದ ಸುಮಾರು 15 ಕಿ.ಮೀ. ವ್ಯಾಪ್ತಿಯಲ್ಲಿ ಭಾರೀ ಸಂಖ್ಯೆಯ ಮರದ ದಿಮ್ಮಿಗಳು ಸಂಗ್ರಹಗೊಂಡಿವೆ.

ನದಿಯಲ್ಲಿ ನೀರಿನ ಹರಿವು ಇನ್ನೊಮ್ಮೆ ಹೆಚ್ಚಳಗೊಂಡರೆ ತಗ್ಗು ಪ್ರದೇಶದ ಅನೇಕ ಸೇತುವೆ, ಅಣೆಕಟ್ಟು ಹಾಗೂ ಕೃಷಿಕರ ತೋಟಗಳಿಗೆ ಹೆಚ್ಚಿನ ಹಾನಿಯನ್ನು ಉಂಟು ಮಾಡಲಿವೆ. ಈಗಾಗಲೇ ಮುಂಡಾಜೆಯ ಕಾಪು ಪ್ರದೇಶದ ಕಿಂಡಿ ಅಣೆಕಟ್ಟಿನಲ್ಲಿ ಭಾರೀ ಗಾತ್ರದ ಮರ ಬಂದು ನಿಂತಿದೆ. ಮೇಲ್ಭಾಗದಲ್ಲಿ ಅನೇಕ ಮರಗಳು ನದಿ ನೀರಲ್ಲಿವೆ.

ಚಿಬಿದ್ರೆ ಗ್ರಾಮದ ಇರ್ಗುಂಡಿ ಪ್ರದೇಶದಲ್ಲಿ ಸುಮಾರು 40 ಅಡಿ ಉದ್ದದ ಮರವೊಂದು ನದಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಪ್ರದೇಶದ ಕೆಳಭಾಗಕ್ಕೆ ಸದಾ ರಭಸದಿಂದ ಹರಿಯುವ ನದಿ ಈಗ ತನ್ನ ವೇಗವನ್ನು ತಗ್ಗಿಸಿಕೊಂಡು ಹರಿಯುತ್ತಿದೆ. ಈ ಪ್ರದೇಶವು ಸಂಪೂರ್ಣ ಕಾಡಿನಿಂದ ಆವೃತವಾಗಿರುವ ಇಳಿಜಾರು ಪ್ರದೇಶವಾದ ಕಾರಣ ಇಲ್ಲಿಗೆ ದಾರಿ ಇಲ್ಲದೆ ಇರುವುದರಿಂದ ಪೂರ್ಣ ಚಿತ್ರಣ ಲಭ್ಯವಾಗಿಲ್ಲ. ಅಂತರ, ಕೊಳಂಬೆ, ಫರ್ಲಾಣಿ ಪ್ರದೇಶದಲ್ಲಿ ಕೂಡ ಭಾರೀ ಸಂಖ್ಯೆಯ ಮರಗಳು ಸಂಗ್ರಹಗೊಂಡಿವೆ.

ನೇತ್ರಾವತಿ ನದಿ ಹರಿಯುವ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ಮುಂಡಾಜೆ ಹಾಗೂ ನಿಡಿಗಲ್‌ ಪ್ರದೇಶದ ಸೇತುವೆ, ಅಣೆಕಟ್ಟುಗಳಲ್ಲೂ ಭಾರೀ ಗಾತ್ರದ ಮರಗಳು ಜಮೆಗೊಂಡಿವೆ.

ಕಳೆದ ವರ್ಷದ ಪ್ರವಾಹಕ್ಕೆ ಈ ನದಿಗಳಲ್ಲಿ ಬಹುಸಂಖ್ಯೆಯ ಮರಗಳು ತೇಲಿಬಂದು ಆಸುಪಾಸಿನ ತೋಟ, ಸೇತುವೆ, ಕಿಂಡಿ ಅಣೆಕಟ್ಟುಗಳಲ್ಲಿ ಬಂದು ಸಿಲುಕಿದ್ದು, ಅವುಗಳ ತೆರವು ಕಾರ್ಯ ಹಲವು ಕಡೆ ಪೂರ್ಣಗೊಂಡಿರಲಿಲ್ಲ. ಈಗ ಮರಮಟ್ಟುಗಳ ಜತೆ ಇನ್ನೂ ಅನೇಕ ಮರಗಳು ಬಂದಿದ್ದು, ಈ ಪ್ರದೇಶಗಳ ಮಂದಿಯ ಆತಂಕ ಇನ್ನಷ್ಟು ಹೆಚ್ಚಾಗಿದೆ.

ಕೂಡಲೇ ತೆರವು ಕಾರ್ಯ
ಪ್ರಾಕೃತಿಕ ವಿಕೋಪ ತಂಡ ಹಾಗೂ ಅರಣ್ಯ ಇಲಾಖೆ ವತಿಯಿಂದ, ಸ್ಥಳೀಯರ ಸಹಕಾರದಲ್ಲಿ ನದಿಗಳಲ್ಲಿ ತೇಲಿಕೊಂಡು ಬಂದು ಸಿಲುಕಿರುವ ಮರಗಳನ್ನು ತೆರವುಗೊಳಿಸುವ ಕೆಲಸವನ್ನು ಕೂಡಲೇ ನಡೆಸಲಾಗುವುದು.
– ತ್ಯಾಗರಾಜ್‌ ವಲಯ ಅರಣ್ಯಾಧಿಕಾರಿ, ಬೆಳ್ತಂಗಡಿ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.