ವಾಹನ ಸಂಚಾರಕ್ಕೆ ತೊಡಕು, ನಡೆದು ಹೋಗಲೂ ಕಷ್ಟ 


Team Udayavani, Nov 14, 2021, 3:10 AM IST

ವಾಹನ ಸಂಚಾರಕ್ಕೆ ತೊಡಕು, ನಡೆದು ಹೋಗಲೂ ಕಷ್ಟ 

ಕಡಬ: ಕೊಂಬಾರು ಗ್ರಾ.ಪಂ. ವ್ಯಾಪ್ತಿಯ ಸುಂಕದಕಟ್ಟೆ-ಬೋಳ್ನಡ್ಕ ಸಂಪರ್ಕ ರಸ್ತೆಯ ಕೊಂಬಾರುಗದ್ದೆಯಲ್ಲಿ ಬೋರೆ ಹೊಳೆ ಬದಿಗೆ ನಿರ್ಮಾಣವಾಗುತ್ತಿದ್ದ ತಡೆಗೋಡೆ ನಿರ್ಮಾಣದ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿದ್ದು, ಅಲ್ಲಿನ ಜನರು ವಾಹನ ಸಂಚಾರ ಬಿಡಿ ನಡೆದು ಹೋಗಲೂ ಸಾಧ್ಯವಾಗದೆ ಪರದಾಡುವಂತಾಗಿದೆ.

ತಡೆಗೋಡೆಯ ಕಾಮಗಾರಿ ಸ್ಥಗಿತ ಗೊಂಡು ಸುಮಾರು ಎರಡು ತಿಂಗಳೇ ಕಳೆದಿದೆ. ಕಾಮಗಾರಿಗಾಗಿ ಮಣ್ಣು ಹಾಕಿರುವುದರಿಂದ ವಾಹನ ಸಂಚಾರವೂ ಸಾಧ್ಯವಿಲ್ಲ ಎಂಬಂತಾಗಿದೆ. ಬನಾರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ತಡೆಗೋಡೆ ಕಾರ್ಯ ಸ್ಥಗಿತಗೊಂಡಿದೆ.

ಶ್ರೀಘ್ರ ಕಾಮಗಾರಿ ಮುಗಿಸಲು ಆಗ್ರಹ :

ಕಾಮಗಾರಿ ಅರ್ಧದ‌ಲ್ಲಿರುವುದರಿಂದ ಸ್ಥಳೀಯರು ಹಾಗೂ ರಬ್ಬರ್‌ ತೋಟಗಳ ಕಾರ್ಮಿಕರು ಕೆಲಸಕ್ಕೆ ಹೋಗಲು ಪರದಾಡುತ್ತಿದ್ದಾರೆ. ಮುಖ್ಯವಾಗಿ ಬನಾರಿ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಹೋಗಲು ಸಮಸ್ಯೆಯಾಗಿದೆ. ಜನವರಿ 14 ರಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಇದೆ. ಅದಕ್ಕಿಂತ ಮೊದಲು ಕಾಮಗಾರಿ ಪೂರ್ತಿಗೊಳಿಸುವಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಕೊಂಬಾರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ  ಮುತ್ತುಕುಮಾರ್‌ ಆಗ್ರಹಿಸಿದ್ದಾರೆ.

ಆದ್ದರಿಂದ 100-200 ಮೀ. ಕ್ರಮಿಸಿ ಮನೆ ಸೇರುತ್ತಿದ್ದ ಜನ ಈಗ 6-7 ಕಿ.ಮೀ. ಸುತ್ತು ಬಳಸಿ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಸುಂಕದಕಟ್ಟೆಗೆ ಸುಲಭ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಈಗ ಸಂಚಕಾರ ಉಂಟಾಗಿದೆ. ಮುಖ್ಯವಾಗಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಮೂಜೂರು ರಬ್ಬರ್‌ ಘಟಕಕ್ಕೆ ಹೋಗುವ 60 ಕ್ಕಿಂತಲೂ ಹೆಚ್ಚು ರಬ್ಬರ್‌ ಕಾರ್ಮಿಕರು ಮುಂಜಾವಿನಲ್ಲಿ ಇದೇ ನೂತನ ತಡೆಗೋಡೆ ಬದಿಯ ರಸ್ತೆಯಲ್ಲಿ ಸಾಗಲು ಹರಸಾಹಸ ಪಡುತ್ತಿದ್ದಾರೆ. ಬೀಡು ಮಜಲು ಎಂಬಲ್ಲಿ ನಿರ್ಮಾಣವಾಗಬೇಕಿದ್ದ ಮೋರಿ ನಿರ್ಮಾಣದ ಕಾಮಗಾರಿಯೂ ಬಾಕಿಯಾಗಿದೆ. ಕಾಮಗಾರಿ ಸ್ಥಗಿತದಿಂದಾಗಿ ಸಮಸ್ಯೆ ಎದುರಿಸುತ್ತಿರುವ ಜನರು ಸಂಬಂಧ ಪಟ್ಟವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಮಗಾರಿಗೆ 50 ಲಕ್ಷ  ರೂ. ಅನುದಾನ :

ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಮುತು ವರ್ಜಿಯಿಂದಾಗಿ ಇಲ್ಲಿನ ಕಾಮಗಾರಿಗೆ 50 ಲಕ್ಷ ರೂ. ಅನುದಾನ ಲಭಿಸಿತ್ತು. ಕ್ಷೇತ್ರದ ಶಾಸಕ ಪ್ರಸ್ತುತ ಸಚಿವರಾಗಿರುವ ಎಸ್‌. ಅಂಗಾರ ವರ್ಷದ ಹಿಂದೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದಾಗ ಸ್ಥಳೀಯ ವ್ಯಕ್ತಿಯೊಬ್ಬರು ಮೋರಿ ಅಳವಡಿಸುವ ವಿಚಾರ ದಲ್ಲಿ ತಗಾದೆ ತೆಗೆದ ಕಾರಣದಿಂದಾಗಿ ಗುತ್ತಿಗೆ ದಾರರು ಕಾಮಗಾರಿಯನ್ನು ನಿಲ್ಲಿಸಿರು ವುದರಿಂದ ಸಮಸ್ಯೆ ಎದುರಾಗಿದೆ.

ನಾವು ಕಾಮಗಾರಿಯನ್ನು ಎಂಜಿನಿಯರ್‌ ಎಸ್ಟಿಮೇಟ್‌ ಪ್ರಕಾರವೇ ಮಾಡಿಕೊಂಡು ಬಂದಿದ್ದೇವೆ. ಆದರೆ ಅಲ್ಲಿ ಮೋರಿ ಅಳವಡಿಸುವಾಗ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದಾಗಿ ಕಾಮಗಾರಿ ನಿಲ್ಲಿಸಲಾಗಿದೆ. ಅದರಿಂದಾಗಿ ನಮಗೂ ನಷ್ಟವಾಗಿದೆ. ಸಾರ್ವಜನಿಕರಿಗೂ ತೊಂದರೆಯಾಗಿದೆ. ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದ್ದು, ಅವರ ಮಾರ್ಗದರ್ಶನದಂತೆ ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಉದಯ್‌, ಕಾಮಗಾರಿಯ ಗುತ್ತಿಗೆದಾರರು.

 

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.