ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
Team Udayavani, Oct 21, 2020, 2:31 PM IST
ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು ಬಿಸಿ ರೋಡ್ ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದು, ಅಲ್ಲೇ ಕೊಲೆ ಮಾಡಲಾಗಿದೆ.
ಮಂಗಳವಾರ ರಾತ್ರಿ ಕೊಲೆಯಾಗಿರಬಹುದು ಎನ್ನಲಾಗಿದ್ದು, ಇಂದು ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ನಂತರ ಸಂಘಟನೆ ತೊರೆದಿದ್ದರು.
ಇದನ್ನೂ ಓದಿ:ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ತಲವಾರು ದಾಳಿ ಮಾಡಿದ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಸುರೇಂದ್ರ ಬಂಟ್ವಾಳ್ ರನ್ನು ಪೊಲೀಸರು ಕುಂಬ್ಳೆಯಲ್ಲಿ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ