ಆಸಕ್ತಿ  ಕ್ಷೇತ್ರದ ಆಯ್ಕೆ ಸಾಧನೆಗೆ ಸಹಕಾರಿ: ಗಿರೀಶ್‌ ಕುಮಾರ್‌


Team Udayavani, Jun 8, 2018, 3:57 PM IST

8-june-12.jpg

ಬೆಳ್ತಂಗಡಿ : ವಿದ್ಯಾರ್ಥಿ ಅವಿರತ ಪ್ರಯತ್ನ, ನಿರಂತರ ಸಾಧನೆಯಿಂದ ಬದುಕಿನಲ್ಲಿ ಮೇಲೆ ಬರಬೇಕು. ಆತ ತನ್ನ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ಕಲಿಯಲು ಹಾಗೂ ವಿಶೇಷ ಸಾಧನೆ ಮಾಡಲು ಅನುಕೂಲ ಎಂದು ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್‌ ವಿಭಾಗ ಮುಖ್ಯಸ್ಥ ಡಾ| ಗಿರೀಶ್‌ ಕುಮಾರ್‌ ಹೇಳಿದರು. ಅವರು ಉಜಿರೆ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ತಾ| ತುಳು ಶಿವಳ್ಳಿ ಸಭಾ ಉಜಿರೆ ವಲಯದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಎಲ್ಲಾ ಕ್ಷೇತ್ರದ ಹಿರಿಯರ ಸಮಾವೇಶದಲ್ಲಿ ಅವರ ಅನುಭವಸಾರವನ್ನು ಕ್ರೋಢೀಕರಿಸಿ ಮಕ್ಕಳಿಗೆ ಉಪಯುಕ್ತವಾಗಬಲ್ಲ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. ಎಂಜಿನಿಯರಿಂಗ್‌ ಕ್ಷೇತ್ರದ ಅಧ್ಯಯನಕ್ಕೆ ಬೇಕಾಗುವ ಪೂರಕ ಮಾಹಿತಿ ನೀಡಲು ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜಿನ ಉಪನ್ಯಾಸಕ ವರ್ಗ ಸಿದ್ಧವಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ತುಳು ಶಿವಳ್ಳಿ ಸಭಾ ಗೌರವಾಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ ಮಾತನಾಡಿ, ಬ್ರಾಹ್ಮಣ ಸಮಾಜ ಕೇವಲ ವೈದಿಕದಲ್ಲಿ ಮಾತ್ರವಲ್ಲದೆ ಮಹಿಳೆಯರ ಸಾಧನೆ, ವಿದ್ಯಾರ್ಥಿಗಳ ಪ್ರತಿಭೆಯಿಂದಲೂ ಶ್ರೇಷ್ಠತೆ ಪಡೆಯುತ್ತಿದೆ. ಸಮಾಜದ ಮೇಲೆ ಅಭಿಮಾನ ಇನ್ನಷ್ಟು ಹೆಚ್ಚಿ ಸಂಘಟನೆ ಬಲಿಷ್ಟಗೊಂಡು ಇತರ ತಾಲೂಕುಗಳಿಗೂ ಆದರ್ಶವಾಗಬೇಕು ಎಂದರು.

ತಾ| ತುಳು ಶಿವಳ್ಳಿ ಸಭಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಮಾತನಾಡಿ, ಮುಂದಿನ ಸಮಾಜದ ಆಧಾರಸ್ತಂಭಗಳಾದ ವಿದ್ಯಾರ್ಥಿಗಳ ವಿಶೇಷ ಸಾಧನೆ ಗಮನಾರ್ಹವಾದುದು. ತಾಲೂಕಿನ ಎಲ್ಲ ವಲಯಗಳ ಪುರುಷರು ಹಾಗೂ ಮಹಿಳೆಯರು ಒಟ್ಟಾಗಿ ಸಮಾಜದ ಬಗ್ಗೆ ಕಾಳಜಿ ವಹಿಸಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಘಟನೆ ಬಲಪಡಿಸಬೇಕು ಎಂದರು. 

ಪ್ರತಿಭಾ ಪುರಸ್ಕಾರ
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಅಂತಿಮ ಪರೀಕ್ಷೆಗಳಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿಪ್ರ ಕಪ್‌ ಕ್ರೀಡಾಕೂಟದ ತ್ರೋಬಾಲ್‌ ನಲ್ಲಿ ಪ್ರಥಮ ಸ್ಥಾನ ಪಡೆದ ತುಳು ಶಿವಳ್ಳಿ ಮಹಿಳಾ ತಂಡ ಹಾಗೂ ಕ್ರಿಕೆಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ರವಿ ಚಕ್ಕಿತ್ತಾಯ ನೇತೃತ್ವದ ಶಿವಳ್ಳಿ ಉಜಿರೆ ವಲಯವನ್ನು ಗೌರವಾಧ್ಯಕ್ಷರು ಸ್ಮರಣಿಕೆ ನೀಡಿ ಗೌರವಿಸಿದರು.

ತಾಲೂಕು ಶಿವಳ್ಳಿ ಕಾರ್ಯದರ್ಶಿ ರಾಜಪ್ರಸಾದ್‌ ಪೋಳ್ನಾಯ, ಉಜಿರೆ ವಲಯ ಮಹಿಳಾಧ್ಯಕ್ಷೆ ಸರೋಜಾ ಕೆದಿಲಾಯ ಉಪಸ್ಥಿತರಿದ್ದರು. ತುಳು ಶಿವಳ್ಳಿ ಉಜಿರೆ ವಲಯಾಧ್ಯಕ್ಷ ಗೋಪಾಲಕೃಷ್ಣ ಭಟ್‌ ಸ್ವಾಗತಿಸಿದರು. ಮುರಳೀಕೃಷ್ಣ ಆಚಾರ್‌ ಕಾರ್ಯಕ್ರಮ ನಿರೂಪಿಸಿದರು. ಉಜಿರೆ ವಲಯ ಕಾರ್ಯದರ್ಶಿ ಶ್ರೀಧರ ಕೆ.ವಿ. ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.