ಪುತ್ತೂರಿಗೆ ಮತ್ತೆರಡು ಕಿಂಡಿ ಅಣೆಕಟ್ಟು

190 ಕೋಟಿ ರೂಪಾಯಿ ಡಿಪಿಆರ್‌ ಸಿದ್ಧ

Team Udayavani, Jun 3, 2022, 9:32 AM IST

kindi-bridge

ಪುತ್ತೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಪೂರಕವಾಗಿ ತಾಲೂಕಿನಲ್ಲಿ ಬೃಹತ್‌ ಪ್ರಮಾಣದ 2 ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧಗೊಂಡಿವೆ.

375 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆ ಪುತ್ತೂರಿಗೆ ಸಿದ್ಧಗೊಂಡಿದ್ದು, ಇದಕ್ಕೆ ಬೇಕಾದ ನೀರನ್ನು ಬಂಟ್ವಾಳ ತಾಲೂಕಿನ ಎಎಂಆರ್‌ ಅಣೆಕಟ್ಟಿನಿಂದ ಪಡೆಯಲು ಉದ್ದೇಶಿಸಲಾಗಿದೆ. ಭವಿಷ್ಯದಲ್ಲಿ ಇದು ಸಾಕಾಗದು ಎಂಬ ದೂರದೃಷ್ಟಿ ಇಟ್ಟುಕೊಂಡು ಪುತ್ತೂರು ತಾಲೂಕಿನಲ್ಲೇ 2 ಕಿಂಡಿ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಉಪ್ಪಿನಂಗಡಿಯ ನೇತ್ರಾವತಿ -ಕುಮಾರಧಾರಾ ನದಿ ಸಂಗಮದ ಅನತಿ ದೂರದಲ್ಲಿ ಒಂದು ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಇನ್ನೊಂದು ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬರುವ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿ ಕುಮಾರಧಾರಾ ನದಿಗೆ ಕಿಂಡಿ ಅಣೆಕಟ್ಟು ಮತ್ತು ಸೇತುವೆ ನಿರ್ಮಾಣವಾಗಲಿದೆ. ಎರಡೂ ಯೋಜನೆಯಲ್ಲಿ ಭಾರೀ ಪ್ರಮಾಣದ ನೀರು ಸಂಗ್ರಹವಾಗಲಿದ್ದು, ಕುಡಿಯಲು ಮತ್ತು ಅಂತರ್ಜಲ ವೃದ್ಧಿಗಾಗಿ ಬಳಸುವ ಸದುದ್ದೇಶ ಹೊಂದಲಾಗಿದೆ.

ಯೋಜನಾ ವರದಿ ಸಿದ್ಧ

ಎರಡೂ ಯೋಜನೆಗಳ ಸಮಗ್ರ ಯೋಜನ ವರದಿ ಸಿದ್ಧಗೊಂಡಿದೆ. ಮುಂದಿನ ಹಂತದಲ್ಲಿ ಇದನ್ನು ಸರಕಾರಕ್ಕೆ ಸಲ್ಲಿಸಲಾಗುತ್ತದೆ. ಸಂಪುಟದಲ್ಲಿ ಅಂಗೀಕಾರಗೊಂಡ ಬಳಿಕ ಅನುದಾನ ಬಿಡುಗಡೆಯಾಗಲಿದೆ. ಉಪ್ಪಿನಂಗಡಿ ಸಂಗಮ ತಾಣದಲ್ಲಿ 70 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಇದರಲ್ಲಿ ಸೇತುವೆ ಇರುವುದಿಲ್ಲ, ಬದಲಾಗಿ ಕಿಂಡಿ ಅಣೆಕಟ್ಟು ಮಾತ್ರವಿರಲಿದೆ. ಕಟಾರದಲ್ಲಿ ಕುಮಾರಧಾರಾ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಿ ಅದರಲ್ಲಿ ಸೇತುವೆ ಕೂಡ ರೂಪಿಸಲಾಗುತ್ತದೆ. ಇದಕ್ಕೆ 120 ಕೋಟಿ ರೂ.ಗಳ ಡಿಪಿಆರ್‌ ಸಿದ್ಧವಾಗಿದೆ.
3 ತಾಲೂಕುಗಳಿಗೆ ಲಾಭ

ಉದ್ದೇಶಿತ 2 ಅಣೆಕಟ್ಟು ಯೋಜನೆ ಪೂರ್ಣ ಗೊಂಡ ಬಳಿಕ ಪುತ್ತೂರು, ಕಡಬ ಮತ್ತು ಬೆಳ್ತಂಗಡಿ ತಾಲೂಕಿನ 20ಕ್ಕೂ ಅಧಿಕ ಗ್ರಾಮಗಳಿಗೆ ಕುಡಿಯುವ ನೀರು ಸಿಗಲಿದೆ. ಇದರೊಂದಿಗೆ ನದಿ ಪಾತ್ರದ ಹಳ್ಳಿಗಳಲ್ಲಿ ಅಂತರ್ಜಲ ಮಟ್ಟವೂ ಏರಲಿದೆ.

 500 ಮೀಟರ್‌ ಉದ್ದದ ಸೇತುವೆ

ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಸಿಗುವ ದಾರಂದಕುಕ್ಕು ಎಂಬಲ್ಲಿಂದ ಕವಲೊಡೆದ ರಸ್ತೆ ಕಟಾರ ನದಿ ದಡಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯನ್ನು ಈಗಾಗಲೇ ಗ್ರಾಮಾಂತರ ಮಟ್ಟದಿಂದ ಜಿಲ್ಲಾ ಮುಖ್ಯ ರಸ್ತೆ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಇದರಂತೆ ಈ ರಸ್ತೆ ಅಭಿವೃದ್ಧಿಯಾಗುತ್ತದೆ. ಕಟಾರದಲ್ಲಿ ಕುಮಾರಧಾರಾ ನದಿಯು ಅರ್ಧ ಕಿ.ಮೀ. (500 ಮೀಟರ್‌) ಅಗಲವಿದ್ದು, ಇಷ್ಟೂ ಉದ್ದದ ಸೇತುವೆ- ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತದೆ. ಈ ಸೇತುವೆ ಮೂಲಕ ಕೊಯಿಲ, ಹಿರೇಬಂಡಾಡಿ ಭಾಗಕ್ಕೆ ಸುಲಭ ಸಂಪರ್ಕ ಸಾಧ್ಯವಾಗಲಿದೆ. ಭವಿಷ್ಯದಲ್ಲಿ ಪುತ್ತೂರು ಕಡೆಯಿಂದ ಕೊಯಿಲ ಜಾನುವಾರು ತಳಿ ಸಂವರ್ಧನ ಕೇಂದ್ರ, ಕೊಯಿಲದ ಪಶುವಿದ್ಯಾಲಯಕ್ಕೆ ತೆರಳಲು ಸುಲಭ ರಸ್ತೆ ಯಾಗಲಿದೆ. ಉಪ್ಪಿನಂಗಡಿ ಪೇಟೆಗೆ ಹೋಗಿ ಸುತ್ತಿ ಬಳಸಿ ಹೋಗುವ ಅನಿವಾರ್ಯತೆ ತಪ್ಪಲಿದೆ. ಅದೇ ರೀತಿ ಆಲಂಕಾರು, ಕೊಯಿಲ ಭಾಗದವರಿಗೆ ಪುತ್ತೂರಿಗೆ ಬರಲು ಇದು ಹತ್ತಿರದ ಮಾರ್ಗವಾಗಲಿದೆ.

ಪಶ್ಚಿಮ ವಾಹಿನಿ ಯೋಜನೆ

ದ.ಕ. ಜಿಲ್ಲೆಯ ಅಂತರ್ಜಲ ಸಂರಕ್ಷಣೆ ಮತ್ತು ನೀರು ಲಭ್ಯತೆಗಾಗಿ ಸರಣಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸರಕಾರ ಪ್ರತೀ ವರ್ಷ ಪಶ್ಚಿಮ ವಾಹಿನಿ ಯೋಜನೆಯಲ್ಲಿ 500 ಕೋಟಿ ರೂ. ನೀಡುತ್ತಿದೆ. ಇದರಡಿಯಲ್ಲಿ ಉಪ್ಪಿನಂಗಡಿ ಮತ್ತು ಕಟಾರ ಅಣೆಕಟ್ಟು ಯೋಜನೆ ಜಾರಿಗೆ ಬರಲಿದೆ. ಕುಮಾರಧಾರಾ, ನೇತ್ರಾವತಿಗಳು ಪುತ್ತೂರು ತಾಲೂಕಿನಲ್ಲಿ ಹರಿದರೂ ಎಲ್ಲ ಬೃಹತ್‌ ಅಣೆಕಟ್ಟುಗಳು ಬಂಟ್ವಾಳ ತಾಲೂಕಿನಲ್ಲೇ ಇವೆ. ಪುತ್ತೂರಿನ ಹಳ್ಳಿಗಳಿಗೆ ನೀರು ಒದಗಿಸುವ 375 ಕೋಟಿ ರೂ.ಗಳ ಬಹುಗ್ರಾಮ ಕುಡಿಯುವ ನೀರು ಯೋಜನೆಗೂ ಬಂಟ್ವಾಳದ ಎಎಂಆರ್‌ ಅಣೆಕಟ್ಟಿನಿಂದ ನೀರು ಪಡೆಯಲಾಗುತ್ತದೆ. ಇದನ್ನೆಲ್ಲ ಮನಗಂಡು ಭವಿಷ್ಯದ ಗುರಿಯಿಟ್ಟುಕೊಂಡು ಉಪ್ಪಿನಂಗಡಿ, ಕಟಾರ ಯೋಜನೆ ಸಿದ್ಧಪಡಿಸಲಾಗಿದೆ. –ಸಂಜೀವ ಮಠಂದೂರು ಶಾಸಕರು, ಪುತ್ತೂರು

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.