Ujire; ಆ್ಯಸಿಡ್ ದಾಳಿ ಪ್ರಕರಣ: 29 ವರ್ಷ ಬಳಿಕ ಆರೋಪಿ ಖುಲಾಸೆ
Team Udayavani, Feb 20, 2024, 12:04 AM IST
ಬೆಳ್ತಂಗಡಿ: ಉಜಿರೆಯಲ್ಲಿ 1995ರ ಸೆಪ್ಟಂಬರ್ 27ರಂದು ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.
ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಅವರ ಮಾಲಕತ್ವದ ಬಾಡಿಗೆ ಮನೆಯಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ವೀರಪ್ಪ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಇದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವಿಸುತ್ತಿದ್ದರು. ಅನಂತರ ಆಕೆಯನ್ನು ಕೆಲಸದಿಂದ ತೆಗೆದುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಗಣೇಶ್ ಪ್ರಭುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ಎನ್ನಲಾಗಿದೆ.
ಆರೋಪಿ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ