ಅನುಭವ್ ಅಪಹರಣದ ಹಿಂದೆ ಹಲವು ಆಯಾಮ:ಪರಿಚಿತರಿಂದಲೇ ಅಪಹರಣ ಶಂಕೆ! ಏನಿದು ಬಿಟ್ ಕಾಯಿನ್ ರಹಸ್ಯ?


Team Udayavani, Dec 19, 2020, 8:12 AM IST

ಅನುಭವ್ ಅಪಹರಣದ ಹಿಂದೆ ಹಲವು ಆಯಾಮ: ಪರಿಚಿತರಿಂದಲೇ ಅಪಹರಣ ಶಂಕೆ

ಬೆಳ್ತಂಗಡಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಉಜಿರೆಯ ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣ ಕಡೆಗೂ ಸುಖಾಂತ್ಯ ಕಂಡಿದೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕನನ್ನು ಸುರಕ್ಷಿತವಾಗಿ ಮರಳಿ ತರುವಲ್ಲಿ ಸಫಲರಾಗಿದ್ದಾರೆ. ಜೊತೆಗೆ ಏಳು ಮಂದಿ ಆರೋಪಿಗಳನ್ನೂ ಸೆರೆಹಿಡಿಯಲಾಗಿದೆ.

ಏನಿದು ಪ್ರಕರಣ

ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ವರ್ಷದ ಮಗುವನ್ನು ಗುರುವಾರ ಸಂಜೆ ಮನೆ ಮುಂಭಾಗದಿಂದ ದುಷ್ಕರ್ಮಿಗಳು ಕಾರಿನಲ್ಲಿ ಅಪಹರಣ ಮಾಡಿದ್ದರು. ಮನೆ ಮಂದಿ ನೋಡನೋಡುತ್ತಿದ್ದಂತೆ ಸಿನಿಮೀಯ ರೀತಿಯಲ್ಲಿ ಬಾಲಕನ ಅಪಹರಣ ನಡೆಸಲಾಗಿತ್ತು.

ಬಿಟ್ ಕಾಯಿನ್ ಬೇಡಿಕೆ

ಗುರುವಾರ ರಾತ್ರಿ ಮಗುವಿನ ತಾಯಿಗೆ ಕರೆ ಮಾಡಿದ್ದ ದುಷ್ಕರ್ಮಿಗಳು 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು. ಶುಕ್ರವಾರ ಬಾಲಕನ ತಂದೆಗೆ ಮೊಬೈಲ್ ಸಂದೇಶ ಕಳುಹಿಸಿದ್ದ ಅಪಹರಣಕಾರರು 60 ಬಿಟ್ ಕಾಯಿನ್ ಅಂದರೆ 10 ಕೋಟಿ ರೂ. ನೀಡುವಂತೆ ಬೇಡಿಕೆ ಇರಿಸಿದ್ದರು.

ಏನಿದು ಬಿಟ್‌ ಕಾಯಿನ್‌?
ಅಪಹರಣಕಾರರು 17 ಕೋಟಿ ರೂ. ಮೌಲ್ಯದ ಬಿಟ್‌ ಕಾಯಿನ್‌ ನೀಡುವಂತೆ ಹೇಳಿರುವುದರಿಂದ ಬಿಟ್‌ ಕಾಯಿನ್‌ ಎಂದರೇನು ಎಂದು ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ. ಬಿಟ್‌ ಕಾಯಿನ್‌ ಡಿಜಿಟಲ್‌ ಹಣಕಾಸು ಅಥವಾ ಡಿಜಿಟಲ್‌ ಕರೆನ್ಸಿ ಆಗಿದೆ. 800ರಷ್ಟು ಇಂತಹ ಕ್ರಿಪ್ಟೋಕರೆನ್ಸಿ ಗಳಿವೆ. ಮಿಥ್ಯಾ ಹಣದ ಮೂಲಕ ಸುಲಭವಾಗಿ ತಮ್ಮ ಹಣಕಾಸಿನ ವ್ಯವಹಾರಗಳನ್ನು ವಿಶ್ವಮಟ್ಟದಲ್ಲಿ ನಡೆಸಲು ಇದು ಪೂರಕವಾಗಿದೆ. ಈ ವಹಿವಾಟು ಸರಕಾರದ ಅಧೀನದಲ್ಲಿಯೇ ಬ್ಯಾಂಕುಗಳ ಮುಖಾಂತರ ನಡೆಯುತ್ತದೆ. ನಮ್ಮ ದೇಶದ ವಿತ್ತ ಸಚಿವಾಲಯ ಹಾಗೂಆರ್‌ಬಿಐ ಸದ್ಯಕ್ಕೆ ಈ ಹಣಕ್ಕೆ ಭಾರತದಲ್ಲಿ ಸರಕಾರದ ಮಾನ್ಯತೆ ಇಲ್ಲ ಎಂದಿವೆ. ಹೀಗಿರುವಾಗ ಇಲ್ಲಿ ಬಿಟ್‌ ಕಾಯಿನ್‌ ವಿಚಾರ ಏಕೆ ಬಂತು ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

ಅನುಭವ್

ಪೊಲೀಸರ ಶೋಧ

ಅಪಹರಣದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ತಂಡ ರಚಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಮುಂಡಾಜೆ ಹಾಗೂ ಕೊಟ್ಟಿಗೆಹಾರದಲ್ಲಿ ನಾಕಾಬಂದಿ ವಿಧಿಸಲಾಗಿತ್ತು. ಅಪಹರಣಕಾರರ ಮೊಬೈಲ್ ನೆಟ್ವರ್ಕ್ ಆಧರಿಸಿಯೂ ಹುಡುಕಾಟ ಆರಂಭವಾಗಿತ್ತು.

ಪರಿಚಿತರಿಂದಲೇ ಕೃತ್ಯ ಶಂಕೆ

ಬಾಲಕನ ತಂದೆ ಬಿಜೋಯ್ ಅವರ ವ್ಯವಹಾರಗಳ ಮಾಹಿತಿ ಇರುವವರೇ ಈ ಕೃತ್ಯ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕುಟುಂಬಕ್ಕೆ ಪರಿಚಯ ಇರುವವರೆ ಕೆಲವು ದಿನಗಳಿಂದ ಸ್ಕೆಚ್ ಹಾಕಿ, ಬಾಲಕನ ಚಲನವಲನಗಳನ್ನು ಗಮನಿಸಿ ಅಪಹರಣ ಮಾಡಿದ್ದಾರೆ ಎನ್ನಲಾಗಿದೆ.

ಎಸ್ ಪಿ ಭೇಟಿ

ಶುಕ್ರವಾರ ದ.ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್ ಅವರು ಬಾಲಕನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದರು.

ಕೋಲಾರದಲ್ಲಿ ಸೆರೆ

ಬಾಲಕ ಅನುಭವ್ ನನ್ನು ಕೋಲಾರದಲ್ಲಿ ರಕ್ಷಿಸಲಾಗಿದೆ. ಸ್ಥಳೀಯ ಪೊಲೀಸರ ನೆರವಿನಿಂದ, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡವು ವಿಶೇಷ ಕಾರ್ಯಾಚರಣೆ ನಡೆಸಿ ಕೋಲಾರದ ಮಾಸ್ತಿ ಠಾಣಾ ವ್ಯಾಪ್ತಿಯಲ್ಲಿ ಮಗುವನ್ನು ಸುರಕ್ಷಿತವಾಗಿ ಮರಳಿ ಪಡೆದಿದ್ದಾರೆ. ಇದೇ ವೇಳೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಘಟನೆ ನಡೆದ 48 ಗಂಟೆಗಳೊಳಗೆ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಆರೋಪಿಗಳನ್ನು ಕೋಲಾರ ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಠಾಣೆಗೆ ಕರೆತರಲಾಗುತ್ತಿದೆ.

ಅಂತೂ ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದೆ. ಅಪಹರಣದ ಹಿಂದಿನ ಕಾರಣಗಳು ಇನ್ನಷ್ಟೇ ಬೆಳಕಿಗೆ ಬರಬೇಕಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.