ಉಜಿರೆ ಚಿಕ್ಕ ಮೇಳ: ಮಳೆಗಾಲದ ತಿರುಗಾಟ ಆರಂಭ 


Team Udayavani, Jun 8, 2018, 12:49 PM IST

8-june-5.jpg

ಬೆಳ್ತಂಗಡಿ : ಮಳೆಗಾಲದಲ್ಲಿ ಮನೆ ಮನೆಗಳಲ್ಲಿ ಚಿಕ್ಕ ಮೇಳದ ಯಕ್ಷಗಾನ ಪ್ರದರ್ಶನದಿಂದ, ಚೆಂಡೆ, ಮದ್ದಲೆ, ಗೆಜ್ಜೆ ಕುಣಿತದಿಂದ ದುಷ್ಟ ಶಕ್ತಿಗಳು ದೂರವಾಗುವುದೆಂಬ ನಂಬಿಕೆಯಿದೆ. ದೇವಾಲಯಗಳು ಧರ್ಮ ಪ್ರಚಾರದ ಜತೆಗೆ ಜಿಲ್ಲೆಯ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವನ್ನು ಪೋಷಿಸಿ ಬೆಳೆಸಿಕೊಂಡು ಬರುವುದರಿಂದ ಮುಂದಿನ ಪೀಳಿಗೆಯ ಮಕ್ಕಳಲ್ಲಿ ಪೌರಾಣಿಕ ಕಥೆಗಳಲ್ಲಿ ಅಭಿರುಚಿ, ಆಸಕ್ತಿ ಮೂಡಿ ಸಂಸ್ಕೃತಿ-ಸಂಸ್ಕಾರದ ಉದ್ದೀಪನವಾಗುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಹೇಳಿದರು.

ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಜನಾರ್ದನ ಸ್ವಾಮಿ ಕೃಪಾಶ್ರಿತ ಚಿಕ್ಕಮೇಳದ ಮಳೆಗಾಲದ 4ನೇ ವರ್ಷದ ತಿರುಗಾಟದ ಪ್ರಾರಂಭದಲ್ಲಿ ವಿಶೇಷ ಸೇವಾ ಪೂಜೆಯ ಬಳಿಕೆ ಗೆಜ್ಜೆಯನ್ನು ಕಲಾವಿದರಿಗೆ ವಿತರಿಸಿ, ಶ್ರೀ ದೇವರ ಭಾವಚಿತ್ರವನ್ನು ಚಿಕ್ಕಮೇಳದ ವ್ಯವಸ್ಥಾಪಕ ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರಿಗೆ ನೀಡಿ ಮಾತನಾಡಿದರು. ಅರ್ಚಕ ವೇ| ಮೂ| ಶ್ರೀನಿವಾಸ ಹೊಳ್ಳ ಅವರು ಶ್ರೀ ಜನಾರ್ದನ ಸ್ವಾಮಿಗೆ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.

2 ತಿಂಗಳ ಕಾಲ ಪ್ರದರ್ಶನ
ಚಿಕ್ಕಮೇಳದ ತಿರುಗಾಟ ಪ್ರತಿ ಸಂಜೆ 6ರಿಂದ ರಾತ್ರಿ 11.30ರ ವರೆಗೆ ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ ಪರಿಸರದಲ್ಲಿ ಪೂರ್ವ ಸೂಚನೆಯಂತೆ ಮನೆ ಮನೆಗೆ ತೆರಳಿ 5-10 ನಿಮಿಷಗಳ ಪೌರಾಣಿಕ ಕಥಾಭಾಗದ ಆಖ್ಯಾನವನ್ನು ಹಾಡುಗಾರಿಕೆ, ಕುಣಿತ, ಅರ್ಥಗಾರಿಕೆಯೊಂದಿಗೆ ಸುಮಾರು 2 ತಿಂಗಳ ಕಾಲ ಪ್ರದರ್ಶನ ನೀಡಲಿದೆ. ಕುಶಾಲಪ್ಪ ಗೌಡ ಅವರ ಸಂಯೋಜನೆಯ ಚಿಕ್ಕಮೇಳದ ತಿರುಗಾಟ ದಲ್ಲಿ ಹಾಡುಗಾರಿಕೆಯಲ್ಲಿ ಕರುಣಾಕರ ಶೆಟ್ಟಿಗಾರ್‌ ಕಾಶಿಪಟ್ಣ, ಮೃದಂಗದಲ್ಲಿ ಸರಪಾಡಿ ಚಂದ್ರಶೇಖರ, ಪಾತ್ರವರ್ಗದಲ್ಲಿ ರಾಘವೇಂದ್ರ ಪೇತ್ರಿ, ಮುರಳೀಧರ ಕನ್ನಡಿಕಟ್ಟೆ ಮತ್ತು ಸತೀಶ ನೀರ್ಕೆರೆ ಹಾಗೂ ಅವಿನಾಶ್‌ ಶೆಟ್ಟಿ ಧರ್ಮಸ್ಥಳ ಸಹಕರಿಸಲಿದ್ದಾರೆ. ತಿರುಗಾಟದ ಪ್ರಾರಂಭದ ಗಣಪತಿ ಸ್ತುತಿಯಲ್ಲಿ ಧರ್ಮಸ್ಥಳ ಯಕ್ಷಗಾನ ಮೇಳದ ವ್ಯವಸ್ಥಾಪಕ ಗಿರೀಶ ಹೆಗ್ಡೆ, ನರೇಂದ್ರ ಕುಮಾರ್‌, ವೆಂಕಟರಮಣ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.