ಉಜಿರೆಗೆ ಬೇಕಿದೆ ವ್ಯವಸ್ಥಿತ ವಾಹನ ನಿಲುಗಡೆ ಸೌಲಭ್ಯ


Team Udayavani, Feb 27, 2019, 6:33 AM IST

27-february-6.jpg

ಉಜಿರೆ : ರಾಜ್ಯ ಹೆದ್ದಾರಿ ಮತ್ತು ರಾ.ಹೆ.ಗಳು ಸಂಧಿಸುವ ಉಜಿರೆಯಲ್ಲಿ ವಾಹನದಟ್ಟಣೆ ಮುಖ್ಯ ಸಮಸ್ಯೆಯಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಉಜಿರೆ ಪೇಟೆಯಲ್ಲಿ ವಾಹನ ನಿಲುಗಡೆಗೆ ನಿರ್ದಿಷ್ಟ ಸ್ಥಳಾವಕಾಶ ನಿಗದಿ ಪಡಿಸದಿರುವುದು ಸಮಸ್ಯೆಯ ಹೆಚ್ಚಳಕ್ಕೆ ಎಡೆಮಾಡಿಕೊಟ್ಟಿದೆ.

ಮುಖ್ಯ ರಸ್ತೆಯ ಆಸುಪಾಸಿನಲ್ಲಿ, ಅಂಗಡಿಗಳ ಮುಂಭಾಗದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಮಸ್ಯೆಯಾಗುತ್ತಿದೆ. ವಿದ್ಯಾರ್ಥಿಗಳು ಅಧಿಕವಾಗಿರುವ ಸ್ಥಳದಲ್ಲಿ ವಾಹನಗಳನ್ನು ಹಾಗೆ ನಿಲ್ಲಿಸುವುದು ಅಪಾಯಕಾರಿ. ವಾಹನಗಳು ಎಲ್ಲೆಂದರಲ್ಲಿ ನಿಂತ ಪರಿಣಾಮ ಉಜಿರೆಯಂತಹ ಸಣ್ಣ ಪೇಟೆ ಯಲ್ಲೂ ವಾಹನಗಳೆಲ್ಲ ಹಾರನ್‌ ಹಾಕುತ್ತಾ ಸಾಲುಗಟ್ಟಿ ನಿಲ್ಲುವುದು ಸಾಮಾನ್ಯವಾಗಿದೆ. ಮುಖ್ಯ ರಸ್ತೆಯು ವಾಹನಗಳ ದಟ್ಟಣೆ ತಡೆಯುವಷ್ಟು ಸಮರ್ಥವಾಗಿದ್ದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ವಾಹನ ನಿಲುಗಡೆಗೆ ಸ್ಥಳವಿಲ್ಲ
ವಾಹನ ನಿಲುಗಡೆಗೆ ವ್ಯವಸ್ಥೆ ಇಲ್ಲದೇ ಇರುವುದೇ ಈ ಸಮಸ್ಯೆಗಳಿಗೆ ಮೂಲ. ಪಾದಚಾರಿಗಳಿಗೆ ಕ್ರಮಿಸಲು ಪ್ರತ್ಯೇಕ ಮಾರ್ಗವಿಲ್ಲ. ರಸ್ತೆಯ ಎರಡು ಬದಿಗಳ ಸ್ಥಳಾವಕಾಶದಲ್ಲಿಯೇ ಅಂಗಡಿಗಳಿಗೂ ಸ್ಥಳವಾಗಬೇಕು, ಪಾದಚಾರಿಗಳೂ ಕ್ರಮಿಸಬೇಕು, ಜತೆಗೆ ವಾಹನಗಳೂ ನಿಲುಗಡೆಯಾಗಬೇಕು ಎಂದಾಗ ಸಹಜವಾಗಿಯೇ ಸಮಸ್ಯೆಯಾಗುತ್ತಿದೆ.

ಏನಾಗಬೇಕು?
ಪಾದಚಾರಿ ಮಾರ್ಗವನ್ನು ನಿರ್ಮಿಸಿ, ವಾಹನ ನಿಲುಗಡೆಗೆ ನಿಗದಿತ ಸ್ಥಳವನ್ನು ಪಂಚಾಯತ್‌ ಗುರುತಿಸಿದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಜತೆಗೆ ಆಯಕಟ್ಟಿನ ಸ್ಥಳಗಳಲ್ಲಿ ಜೀಬ್ರಾ ಕ್ರಾಸನ್ನು ಗುರುತಿಸಿ ರಸ್ತೆ ದಾಟಲು ವ್ಯವಸ್ಥೆ ರೂಪಿಸಬೇಕು. ಜತೆಗೆ ಸಣ್ಣ ಅಂಗಡಿಗಳಿಗೆ ನಿರ್ದಿಷ್ಟ ಜಾಗವನ್ನು ನಿಗದಿಪಡಿಸಬೇಕಿದೆ. 

ಶೀಘ್ರ ಪರಿಹಾರ
ಪಾರ್ಕಿಂಗ್‌ ಸಮಸ್ಯೆ ಈಗಾಗಲೇ ನಮ್ಮ ಗಮನಕ್ಕೂ ಬಂದಿದೆ. ಜಿಲ್ಲಾಧಿಕಾರಿ ಜತೆ ಚರ್ಚಿಸಿದ್ದೇವೆ. ಶೀಘ್ರದಲ್ಲೇ ಪರಿಹಾರ ಕ್ರಮ ಕೈಗೊಳ್ಳಲಾಗುವುದು.
 - ಪ್ರಕಾಶ್‌ ಶೆಟ್ಟಿ ಪಿಡಿಒ, ಉಜಿರೆ ಗ್ರಾ.ಪಂ.

 ಫ‌ುಟ್‌ಪಾತ್‌ ಅಗತ್ಯ
ಪಾರ್ಕಿಂಗ್‌ಗೆ ನಿರ್ದಿಷ್ಟ ಸ್ಥಳ ಗುರುತಿಸಿದರೆ ಒಳ್ಳೆಯದು. ಇದರಿಂದ ಪಾದಚಾರಿಗಳಿಗೆ ಸಂಚರಿಸಲು ಸಹಾಯವಾಗುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಓಡಾಟಕ್ಕೆ ಫ‌ುಟ್‌ಪಾತ್‌ ಆವಶ್ಯಕತೆ ಇದೆ.
 -ಶರತ್‌ ಕುಮಾರ್‌, ವಿದ್ಯಾರ್ಥಿ

ಶಿವಪ್ರಸಾದ್‌ ಹಳುವಳ್ಳಿ
ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ (ಯುಎಸ್‌ಜೆಪಿ)ಯ ಶಿಕ್ಷಣಾರ್ಥಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.