ಉಜಿರೆ; ನದಿಯಲ್ಲಿ ವಿಸರ್ಜಿಸಿದ್ದ ಮೂರ್ತಿ ಮರಳಿ ಪ್ರತಿಷ್ಠಾಪನೆ
ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು.
Team Udayavani, Dec 19, 2022, 10:52 AM IST
ಬೆಳ್ತಂಗಡಿ: ವರ್ಷಗಳ ಹಿಂದೆ ಉಜಿರೆ ಗ್ರಾಮದ ಪೆರ್ಲದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣ ವೇಳೆ ನದಿಯಲ್ಲಿ ವಿಸರ್ಜಿಸಿದ್ದ ಹಳೆ ಮೂರ್ತಿಯನ್ನು ಈಗ ಮತ್ತೆ ಹುಡುಕಿ ತಂದು ಪ್ರತಿಷ್ಠಾಪಿಸಲು ಮುಂದಾಗಿರುವ ಘಟನೆ ನಡೆದಿದೆ.
ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ಡಿಸೆಂಬರ್ನಲ್ಲಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಡಲಾಗಿತ್ತು. ಈವೇಳೆ ದೇವಸ್ಥಾನದಲ್ಲಿ ಪೂಜಿಸುತ್ತಿದ್ದ ಶ್ರೀ ಲಕ್ಷ್ಮೀ ಜನಾರ್ದನ ದೇವರ ಹಳೆ ಮೂರ್ತಿಯನ್ನು ನಿಡಿಗಲ್ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು.
ಆದರೆ ಪ್ರಸಕ್ತ ಡಿ. 8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿಯ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿದೆ. ಈ ಸಂದರ್ಭ ನದಿಯಲ್ಲಿ ವಿಸರ್ಜಿಸಿದ ಮೊದಲು ಪೂಜಿಸುತ್ತಿದ್ದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬೇಕು ಎಂದು ತಿಳಿಸಿ, ಡಿ. 18ರಂದು ಹುಡುಕಿದರೆ ವಿಸರ್ಜನೆ ಮಾಡಿದ ಪರಿಸರದಲ್ಲಿ ಮೂರ್ತಿ ಸಿಗುತ್ತದೆ ಎಂದು ತಿಳಿಸಿದ್ದರು.
ಆ ಪ್ರಕಾರ ಹುಡುಕಿದಾಗ ಅದೇ ಮೂರ್ತಿ ನಿಡಿಗಲ್ ಕಿಂಡಿ ಅಣೆಕಟ್ಟಿನ ಸಮೀಪ ಪತ್ತೆಯಾಗಿದೆ. ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅವರು ತಿಳಿಸಿದ ದೇವಸ್ಥಾನದ ಪರಿಸರ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಕೂಡ ಪತ್ತೆಯಾಗಿತ್ತು. ಇದೀಗ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ