ಅವೈಜ್ಞಾನಿಕ ರಸ್ತೆ: ನಿರಂತರ ಅಪಘಾತ

ಪುತ್ತೂರು-ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ

Team Udayavani, May 14, 2019, 5:45 AM IST

36

ಸವಣೂರು: ಪುತ್ತೂರು- ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ-100ರಲ್ಲಿ ಬರುವ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿನ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ನಿರಂತರ ವಾಹನ ಅಪಘಾತಗಳು ನಡೆಯುತ್ತಿದೆ. ಲೋಕೋಪಯೋಗಿ ಇಲಾಖೆ ತತ್‌ಕ್ಷಣ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

20 ಮೀ. ರಸ್ತೆಯೂ ಕಾಣುವುದಿಲ್ಲ
ಪುತ್ತೂರು ಕಡೆಯಿಂದ ಬರುವ ವಾಹನಗಳ ಸವಾರರಿಗೆ ಭಕ್ತಕೋಡಿ ಪಶು ಚಿಕಿತ್ಸಾಲಯದ ಬಳಿ ಬಂದಾಗ ಸವಣೂರು ಕಡೆಯಿಂದ ಬರುವ ವಾಹನಗಳು ಕಾಣಿಸುವುದೇ ಇಲ್ಲ. ಅದೇ ರೀತಿ ಸವಣೂರು ಕಡೆಯಿಂದ ಬರುವ ವಾಹನಗಳು ಪುತ್ತೂರು ಕಡೆಯಿಂದ ಬರುವ ವಾಹನಗಳಿಗೆ ಕಾಣಿಸುವುದಿಲ್ಲ. ಇಲ್ಲಿ ರಸ್ತೆ ನೇರವಾಗಿದ್ದರೂ ಕೂಡ 20 ಮೀ. ಅಂತರದಲ್ಲಿ ಎದುರು- ಬದುರು ಬರುವ ವಾಹನಗಳು ಕಾಣಿಸದಷ್ಟು ರಸ್ತೆ ಎತ್ತರವಾಗಿದೆ.

ಚಾಲಕರ ಅತಿಯಾದ ವೇಗ ಅಪಘಾತಗಳಿಗೆ ಕಾರಣವಾಗುತ್ತಿದೆ. ಅಲ್ಲದೆ ಇದೆ ಸ್ಥಳದಲ್ಲಿ ಸರಕಾರಿ ಹಿ.ಪ್ರಾ. ಶಾಲೆ ಇದ್ದು, ಮಕ್ಕಳು ರಸ್ತೆ ದಾಟಲು ಭಯ ಪಡುವಂತಾಗಿದೆ. ಪಾಲೆತ್ತಗುರಿ ಕಾಲನಿ ಹಾಗೂ ದೋಳ ರಸ್ತೆಗಳಿಗೆ ಇದೇ ಸ್ಥಳದಲ್ಲಿ ತಿರುವು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯ ರಸ್ತೆಯಲ್ಲಿ ಅತೀ ವೇಗವಾಗಿ ಸಂಚರಿಸುವ ವಾಹನಗಳಿಂದ ಅಪಘಾತಕ್ಕೆ ಕಾರಣವಾಗುತ್ತಿವೆ.

ಎರಡು ತಿಂಗಳಲ್ಲಿ ನಾಲ್ಕು ಅಪಘಾತ
ಕಳೆದ 2 ತಿಂಗಳಲ್ಲಿ ಇಲ್ಲಿ ನಾಲ್ಕು ವಾಹನ ಅಪಘಾತಗಳಾಗಿವೆ. ಯಾವುದೇ ಪ್ರಕರಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿಲ್ಲ. ಆದರೆ ಪ್ರತಿನಿತ್ಯ ಇಲ್ಲಿ ವಾಹನ ಸವಾರರು ಅಪಘಾತದ ಭಯದಿಂದ ಸಂಚರಿಸುವ ವಾತಾವರಣ ಇದೆ. ಪೊಲೀಸ್‌ ಠಾಣೆಯಲ್ಲಿ ದಾಖಲಾಗುವಂತಹ ಗಂಭೀರ ಅಪಘಾತ ನಡೆಯುವ ಮೊದಲು ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಭಕ್ತಕೋಡಿ ಸರಕಾರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್‌ ಎಸ್‌.ಡಿ. ಹೇಳಿದ್ದಾರೆ.

ಇದೇ ರೀತಿ ಪುರುಷರಕಟ್ಟೆ ಹಾಗೂ ಗಡಿಪಿಲ ಎನ್ನುವ ಸ್ಥಳಗಳಲ್ಲಿ ರಸ್ತೆಗಳು ಎದುರು ಬದುರು ಬರುವ ವಾಹನಗಳ ಚಾಲಕರಿಗೆ ಕಾಣದಂತೆ ಇದ್ದ ಅವೈಜ್ಞಾನಿಕ ಉಬ್ಬುಗಳನ್ನು ಸಮತಟ್ಟು ಮಾಡಿ ವಾಹನ ಸವಾರರಿಗೆ ಆಗುತ್ತಿದ್ದ ಸಮಸ್ಯೆಗಳನ್ನು ಲೋಕೋಪಯೋಗಿ ಇಲಾಖೆ ಕಳೆದ ವರ್ಷ ನಿವಾರಿಸಿತ್ತು.

ಇದೇ ರೀತಿ ಭಕ್ತಕೋಡಿ ಹಾಗೂ ಮಾಂತೂರು ಅಂಬೇಡ್ಕರ್‌ ಭವನದ ಮುಂಭಾಗ ಇರುವ ಅವೈಜ್ಞಾನಿಕ ರಸ್ತೆಗಳ ದುರಸ್ತಿ ಶೀಘ್ರಗತಿಯಲ್ಲಿ ಮಾಡಲು ಇಲಾಖೆ ಮುಂದಾದರೆ ಸಾರ್ವಜನಿಕರ, ವಾಹನ ಸವಾರರ ನಿತ್ಯ ಸಂಕಷ್ಟಕ್ಕೆ ಪರಿಹಾರ ಸಿಗಲಿದೆ.

ಸಮಸ್ಯೆ ಬಗೆಹರಿಸಿದ ಪಿಡಬ್ಲ್ಯೂಡಿ
ಇದೇ ರೀತಿ ಪುರುಷರಕಟ್ಟೆ ಹಾಗೂ ಗಡಿಪಿಲ ಎನ್ನುವ ಸ್ಥಳಗಳಲ್ಲಿ ರಸ್ತೆಗಳು ಎದುರು ಬದುರು ಬರುವ ವಾಹನಗಳ ಚಾಲಕರಿಗೆ ಕಾಣದಂತೆ ಇದ್ದ ಅವೈಜ್ಞಾನಿಕ ಉಬ್ಬುಗಳನ್ನು ಸಮತಟ್ಟು ಮಾಡಿ ವಾಹನ ಸವಾರರಿಗೆ ಆಗುತ್ತಿದ್ದ ಸಮಸ್ಯೆಗಳನ್ನು ಲೋಕೋಪಯೋಗಿ ಇಲಾಖೆ ಕಳೆದ ವರ್ಷ ನಿವಾರಿಸಿತ್ತು. ಇದೇ ರೀತಿ ಭಕ್ತಕೋಡಿ ಹಾಗೂ ಮಾಂತೂರು ಅಂಬೇಡ್ಕರ್‌ ಭವನದ ಮುಂಭಾಗ ಇರುವ ಅವೈಜ್ಞಾನಿಕ ರಸ್ತೆಗಳ ದುರಸ್ತಿ ಶೀಘ್ರಗತಿಯಲ್ಲಿ ಮಾಡಲು ಇಲಾಖೆ ಮುಂದಾದರೆ ಸಾರ್ವಜನಿಕರ, ವಾಹನ ಸವಾರರ ನಿತ್ಯ ಸಂಕಷ್ಟಕ್ಕೆ ಪರಿಹಾರ ಸಿಗಲಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.