ಲಾಕ್ ಡೌನ್ ಇದ್ದರೂ ಜನರ ಅನಗತ್ಯ ಸಂಚಾರ: ವಿಟ್ಲ ಪೊಲೀಸರಿಂದ ಕಠಿಣ ಕ್ರಮ
Team Udayavani, May 6, 2021, 11:31 AM IST
ವಿಟ್ಲ: ವಿಟ್ಲ ಪೇಟೆಗೆ ಅನಗತ್ಯವಾಗಿ ಬರುವವರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗುರುವಾರ ಪೇಟೆಯ ಜಂಕ್ಷನ್ ನ ನಾಲ್ಕು ರಸ್ತೆಯಲ್ಲಿ ಸುಮಾರು ಒಂದು ಕಿಮೀ ದೂರದಲ್ಲಿ ವಿಟ್ಲ ಪೊಲೀಸರು ನಾಕಾಬಂದಿ ಹಾಕಿದ್ದಾರೆ.
ಲಾಕ್ ಡೌನ್ ವೇಳೆ ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಪ್ರತಿದಿನ ಪೇಟೆಗೆ ಆಗಮಿಸುತ್ತಿದ್ದಾರೆ. ಸಾಕಷ್ಟು ಎಚ್ಚರಿಕೆಗಳನ್ನು ನೀಡಿದರೂ ನಿರ್ಲಕ್ಷಿಸುತ್ತಿದ್ದಾರೆ. ಅದಕ್ಕಾಗಿ ಬೆಳಗ್ಗೆ ಗಂಟೆ 8.30ರಿಂದ ಪುತ್ತೂರು ರಸ್ತೆಯ ಮೇಗಿನಪೇಟೆಯಲ್ಲಿ, ಕಾಸರಗೋಡು ರಸ್ತೆಯ ಸರ್ಕಾರಿ ಬಸ್ ನಿಲ್ದಾಣದ ಬಳಿ, ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ, ಸಾಲೆತ್ತೂರು ರಸ್ತೆಯ ನಾಡಕಚೇರಿ ಬಳಿಯಲ್ಲಿ ನಾಕಾಬಂದಿಯನ್ನು ಹಾಕಿದ ಪೊಲೀಸರು ಪ್ರತಿಯೊಬ್ಬರ ದಾಖಲೆಗಳನ್ನು ಪರಿಶೀಲಿಸಿ, ನೈಜ ಕಾರಣ ಇದ್ದರೆ ಪೇಟೆಯೊಳಗೆ ತೆರಳಲು ಅನುಮತಿ ನೀಡಿದ್ದಾರೆ.
ಸಮೀಪದಲ್ಲಿ ಅಗತ್ಯ ವಸ್ತುಗಳು ಸಿಗದೆ ವಿಟ್ಲದಲ್ಲಿ ಮಾತ್ರ ಸಿಗುವ ವಸ್ತುಗಳಿಗೆ ಬಂದವರು ಆಧಾರ್ ಕಾರ್ಡ್ ತೋರಿಸಿದಲ್ಲಿ ಅವರಿಗೆ ಪೇಟೆಗೆ ಪ್ರವೇಶಿಸಲು ಅನುಮತಿ ಕೊಡಲಾಗಿದೆ. ಸಮೀಪದಲ್ಲಿ ಸಾಮಗ್ರಿಗಳು ಇದ್ದೂ ಪೇಟೆಗೆ ಅನಗತ್ಯವಾಗಿ ಆಗಮಿಸುವವರ ಮೇಲೆ ಕಾನೂನು ಕ್ರಮ ಜರಗಿಸಲಾಗಿದೆ. ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಕ್ರಮಕೈಗೊಳ್ಳಲಾಗಿದ್ದು ವಿಟ್ಲ ಪೇಟೆಯಲ್ಲಿ ಆವಶ್ಯಕ ವಸ್ತುಗಳ ಖರೀದಿ ಸಂದರ್ಭ ನಾಗರಿಕರ ಸಂಖ್ಯೆ ನಿಯಂತ್ರಣದಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ