ಉಪ್ಪಿನಂಗಡಿ: ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Dec 28, 2022, 1:25 AM IST
ಉಪ್ಪಿನಂಗಡಿ : ಮೀನು ಹಿಡಿಯಲು ಹೋಗಿ ನೇತ್ರಾವತಿ ನದಿ ನೀರಲ್ಲಿ ಮುಳುಗಿದ್ದ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ಪುತ್ರ ಜನಾರ್ದನ ಗೌಡ (42) ಅವರ ಮೃತದೇಹ ಡಿ.27ರಂದು ದೊರೆತಿದೆ.
ಜನಾರ್ದನ ಅವರು ಮಹೇಶ್ ಜತೆ ಸೋಮ ವಾರ ಮುಗೇರಡ್ಕ ಬಳಿ ಸೇತುವೆಯ ಕಾಮಗಾರಿ ನಡೆಯುತ್ತಿದ್ದ ಸನಿಹ ನದಿಯಲ್ಲಿ ಮೀನಿಗಾಗಿ ಬಲೆ ಕಟ್ಟಲು ಬಂದಿದ್ದರು. ಈ ಸಂದರ್ಭ ಅವರು ನೀರು ಪಾಲಾಗಿದ್ದರು. ಅವರ ಜತೆಗಿದ್ದ ಮಹೇಶ್ ಈ ಬಗ್ಗೆ ಯಾರಲ್ಲೂ ವಿಷಯ ತಿಳಿಸದೇ ಪದ್ಮುಂಜಕ್ಕೆ ಬಂದಿದ್ದ. ಅಲ್ಲಿ ಕುಡಿದ ಬಳಿಕ ಜನಾರ್ದನ ನೀರು ಪಾಲಾದ ಘಟನೆ ಹೇಳಿದ. ಇದನ್ನು ತಿಳಿದ ಜನಾರ್ದನನ ಸಂಬಂಧಿಕರು ಮತ್ತು ಗೆಳಯರು ಮಹೇಶ್ ನನ್ನು ಘಟನೆ ನಡೆದ ಸ್ಥಳಕ್ಕೆ ಕರೆತಂದು ನೀರು ಪಾಲಾದ ಸ್ಥಳ ತೋರಿಸುವಂತೆ ತಾಕೀತು ಮಾಡಿದರು.
ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗುಗಾರರು ಸೇರಿಕೊಂಡು ಜನಾರ್ದನ ಅವರಿಗಾಗಿ ಸೋಮವಾರ ರಾತ್ರಿಯೇ ಹುಡುಕಾಟ ನಡೆಸಿದ್ದರು. ಡಿ.27ರಂದು ಬೆಳಗ್ಗೆ ಜನಾರ್ದನರ ಮೃತದೇಹ ಪತ್ತೆಯಾಗಿದೆ. ಮೃತ ಜನಾರ್ದನ ಹೈನುಗಾರಿಕೆ ಹಾಗೂ ಕೂಲಿ ಕಾರ್ಮಿಕರಾಗಿದ್ದು, ಮನೆಗೆ ಆಧಾರ ಸ್ತಂಭವಾಗಿದ್ದರು. ಮೃತರು ಪತ್ನಿ ಶೀಲಾವತಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಶಾಸಕ ಹರೀಶ್ ಪೂಂಜ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?